AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಮೈಸೂರು ಮಿರ ಮಿರ ಮಿಂಚಿಂಗ್​: ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಿದ ಸಚಿವ ಸುನೀಲ್ ಕುಮಾರ್

126 ಕಿಲೋ ಮೀಟರ್​ವರೆಗೂ ದೀಪಾಲಂಕಾರ ಮಾಡಿದ್ದು, 26 ವೃತ್ತದಲ್ಲಿ ವೈರೆಟಿ ಲೈಟಿಂಗ್ಸ್ ಅಳವಡಿಕೆ ಮಾಡಲಾಗಿದೆ. ಇಂದಿನಿಂದ ಮೈಸೂರು ಕಲರ್ ಫುಲ್ ಆಗಿ ಮಿರ ಮಿರ ಮಿಂಚಲಿದೆ.

ಇಂದಿನಿಂದ ಮೈಸೂರು ಮಿರ ಮಿರ ಮಿಂಚಿಂಗ್​: ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಿದ ಸಚಿವ ಸುನೀಲ್ ಕುಮಾರ್
ಮೈಸೂರು ಅರಮನೆ
TV9 Web
| Edited By: |

Updated on:Sep 26, 2022 | 9:21 PM

Share

ಮೈಸೂರು: ಸಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಸುನೀಲ್ ಕುಮಾರ್​ ಚಾಲನೆ ನೀಡಿದರು. ಮೈಸೂರಿನ ಕೆ.ಆರ್ ಆಸ್ಪತ್ರೆಯ ಬಳಿ ಇರುವ ವೃತ್ತದಲ್ಲಿ ರಿಮೋಟ್ ಬಟನ್ ಒತ್ತುವುದರ ಮೂಲಕ ವಿದ್ಯುತ್ ದೀಪಾಲಂಕಾರಕ್ಕೆ ಅಧಿಕೃತ ಚಾಲನೆ ನೀಡಲಾಯಿತು. 126 ಕಿಲೋ ಮೀಟರ್​ವರೆಗೂ ದೀಪಾಲಂಕಾರ ಮಾಡಿದ್ದು, 26 ವೃತ್ತದಲ್ಲಿ ವೈರೆಟಿ ಲೈಟಿಂಗ್ಸ್ ಅಳವಡಿಕೆ ಮಾಡಲಾಗಿದೆ. ಇಂದಿನಿಂದ ಮೈಸೂರು ಕಲರ್ ಫುಲ್ ಆಗಿ ಮಿರ ಮಿರ ಮಿಂಚಲಿದೆ. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ದಲ್ಲಿ ಖ್ಯಾತ ಹಿಂದೂಸ್ತಾನಿ ಗಾಯಕಿ ಲಲಿತಾ ಜೆ ರಾವ್‌ಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಲಲಿತಾ ಜೆ ರಾವ್‌ ಬೆಂಗಳೂರಿನ ನಿವಾಸಿಯಾಗಿದ್ದು, ಸಂಗೀತ ಕ್ಷೇತ್ರಕ್ಕೆ ನೀಡಿರುವ ಅನುಪಮ ಸೇವೆ ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ. ‘ರಾಜ್ಯೋತ್ಸವ’ ಸೇರಿ ಹತ್ತಾರು ಪ್ರಶಸ್ತಿಗೆ ಲಲಿತಾ ಭಾಜನರಾಗಿದ್ದಾರೆ.

ಅರಮನೆ ಮುಂಭಾಗದಲ್ಲಿ ನಿರ್ಮಿಸಿರುವ ವೇದಿಕೆಯಲ್ಲಿ ದಸರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಸ್ಪೀಕರ್‌ ಕಾಗೇರಿ, ಪರಿಷತ್ ಸಭಾಪತಿ ರಘುನಾಥ್ ಮಲ್ಕಾಪುರೆ, ಸಚಿವರಾದ ಎಸ್‌.ಟಿ.ಸೋಮಶೇಖರ್, ಸುನಿಲ್ ಕುಮಾರ್‌, ಶಾಸಕ ಎಸ್‌.ಎ.ರಾಮದಾಸ್‌, ಮೇಯರ್ ಶಿವಕುಮಾರ್, ಉಪಮೇಯರ್ ರೂಪಾ, ಡಿಸಿ ಡಾ.ಬಗಾದಿ ಗೌತಮ್ ಭಾಗಿಯಾಗಿದ್ದರು.

ಹಿಂದಿನಂತೆ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲಾಗುವುದು: ಸಚಿವ ಎಸ್.ಟಿ.ಸೋಮಶೇಖರ್

ಕೊರೊನಾ ಹಿನ್ನೆಲೆ 2 ವರ್ಷದಿಂದ ದಸರಾವನ್ನು ಸರಳವಾಗಿ ಆಚರಣೆ ಮಾಡಿದ್ದೆವು. ಈ ಬಾರಿ ಹಿಂದಿನಂತೆ ಅದ್ಧೂರಿಯಾಗಿ ದಸರಾ ಆಚರಣೆ ಮಾಡುತ್ತಿದ್ದೇವೆ. 15 ದಿನಗಳ ಹಿಂದೆಯೇ ದಸರಾ ವಸ್ತು ಪ್ರದರ್ಶನ ಉದ್ಘಾಟನೆ ಆಗಬೇಕಿತ್ತು. ಎಲ್ಲಾ ವ್ಯವಸ್ಥೆ ಮಾಡಿಕೊಂಡು ಇಂದಿನಿಂದ ಆರಂಭಿಸಿದ್ದೇವೆ. ದಸರಾ ವಸ್ತು ಪ್ರದರ್ಶನದಲ್ಲಿ ಪುನೀತ್ ರಾಜ್​ಕುಮಾರ್ ಪ್ರತಿಮೆ ಇರಿಸಲಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಮಹಾರಾಜ ಓವಲ್ ಮೈದಾನದಲ್ಲಿ ನಡೆಯುತ್ತಿರುವ ದಸರಾ ಯೋಗ ನೃತ್ಯ ರೂಪಕ ಕಾರ್ಯಕ್ರಮವನ್ನು Gss ಯೋಗ ಮುಖ್ಯಸ್ಥರಾ ಶ್ರೀ ಹರಿ, ಚಾಮರಾಜನಗರ ಕ್ಷೇತ್ರದ ಎಂಎಲ್​ಎ ನಾಗೇಂದ್ರ ಅವ್ರಿಂದ ಉದ್ಘಾಟನೆ ಮಾಡಿದರು. ವಿವಿಧ ತಂಡಗಳಿಂದ ಇಂದು ನೃತ್ಯ ರೂಪಕದ ಪ್ರದರ್ಶನ ಮಾಡಲಾಯಿತು. ಬಳಿಕ ಮಾತನಾಡಿದ ಎಂಎಲ್​ಎ ನಾಗೇಂದ್ರ ಮೋದಿ ಈ‌ ಬಾರಿ ಯೋಗ ಡೇ ಸೆಲೆಬ್ರೇಟ್ ಮಾಡಿದರು. ಯೋಗದಿಂದ ನಮ್ಮ ಶರೀರವನ್ನ ಚೆನ್ನಾಗಿ ಇಟ್ಕೋಬೋದು. ಅರೋಗ್ಯ ಚೆನ್ನಾಗಿರುತ್ತೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:20 pm, Mon, 26 September 22

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ