AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara Lighting 2022: ಮೈಸೂರು ವಿದ್ಯುತ್ ದೀಪಾಲಂಕಾರ ಇನ್ನೆರಡು ದಿನ ಮುಂದುವರಿಕೆ

ಮೈಸೂರು ದಸರಾ ದೀಪಾಲಂಕಾರ ಉಪ ಸಮಿತಿಯ ಅಧ್ಯಕ್ಷ ಟಿ. ರಮೇಶ್ ಹಾಗೂ ಸೆಸ್ಕ್ ನ ನಿರ್ದೇಶಕ ಜಯವಿಭವಸ್ವಾಮಿ ಅವರು, ದೀಪಾಲಂಕಾರವನ್ನು ಇನ್ನೆರಡು ದಿನ ವಿಸ್ತರಿಸಲು ನಿರ್ಧರಿಸಿದ್ದಾರೆ.

Mysuru Dasara Lighting 2022: ಮೈಸೂರು ವಿದ್ಯುತ್ ದೀಪಾಲಂಕಾರ ಇನ್ನೆರಡು ದಿನ ಮುಂದುವರಿಕೆ
ಮೈಸೂರು ವಿದ್ಯುತ್ ದೀಪಾಲಂಕಾರ ಇನ್ನೆರಡು ದಿನ ಮುಂದುವರಿಕೆ
TV9 Web
| Edited By: |

Updated on:Oct 11, 2022 | 8:27 AM

Share

ಮೈಸೂರು: ದಸರಾ ಮಹೋತ್ಸವ 2022ರ(Mysuru Dasara 2022) ಅಂಗವಾಗಿ ಮೈಸೂರಿನ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಿಗೆ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರ(Mysuru Dasara Lighting) ಅ.12ರವರೆಗೂ ಮುಂದುವರಿಯಲಿದೆ. ಹೀಗಾಗಿ ಸಾಂಸ್ಕೃತಿಕ ನಗರಿ ಅಕ್ಟೋಬರ್​ 12ರವರೆಗೂ ಬೆಳಗಲಿದೆ. ದೀಪಾಲಂಕಾರ ಇದೇ ಭಾನುವಾರಕ್ಕೆ ಮುಗಿಯಬೇಕಿತ್ತು. ಆದರೆ, ಅದನ್ನು ಅ. 12ರವರೆಗೆ ಮುಂದುವರಿಸಲು ತೀರ್ಮಾನಿಸಲಾಗಿದೆ.

ನಗರದ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಸಂಜೆ 6:30ರಿಂದ ರಾತ್ರಿ 10:30ರವರೆಗೆ ಲೈಟಿಂಗ್ಸ್​ ಇರಲಿದೆ. ಈ ಬಗ್ಗೆ ಚೆಸ್ಕಾಂ ಮಾಹಿತಿ ನೀಡಿದೆ. ನಾಡ ಹಬ್ಬ ದಸರಾ ಮುಗಿದರೂ ದಿನೇ ದಿನೇ ಮೈಸೂರಿಗೆ ಸಾವಿರಾರು ಜನರು ಆಗಮಿಸಿ ಮೈಸೂರಿನ ಅಂದ ಸವಿಯುತ್ತಿದ್ದಾರೆ. ನಗರವನ್ನು ಸುತ್ತಾಡಿ ದೀಪಾಲಂಕಾರವನ್ನು ನೋಡಿ ಆನಂದಿಸುತ್ತಿದ್ದಾರೆ. ಇದನ್ನು ತಿಳಿದ ಮೈಸೂರು ದಸರಾ ದೀಪಾಲಂಕಾರ ಉಪ ಸಮಿತಿಯ ಅಧ್ಯಕ್ಷ ಟಿ. ರಮೇಶ್ ಹಾಗೂ ಸೆಸ್ಕ್ ನ ನಿರ್ದೇಶಕ ಜಯವಿಭವಸ್ವಾಮಿ ಅವರು, ದೀಪಾಲಂಕಾರವನ್ನು ಇನ್ನೆರಡು ದಿನ ವಿಸ್ತರಿಸಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: Karnataka Rain Updates: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸುರಿದ ಮಳೆ

ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯುದಲಂಕಾರ ಮುಂದುವರಿಸುವುದರಿಂದ ಸರ್ಕಾರದ ಮೇಲೆ ಹೆಚ್ಚಿನ ಹೊರೆ ಬೀಳುತ್ತದೆ. ಆದರೆ, ಜನರ ಆಸೆಗೆ ಸ್ಪಂದಿಸಿ ದೀಪಾಲಂಕಾರ ಇನ್ನೆರಡು ದಿನ ಮುಂದುವರಿಸಲಾಗುತ್ತದೆ. ಆದರೆ, ಈ ಅಲಂಕಾರವು ನಗರದ ಮಧ್ಯಭಾಗದಲ್ಲಿ ಹಾಗೂ ಕೆಲವು ಪ್ರಮುಖ ರಸ್ತೆ, ವೃತ್ತಗಳಲ್ಲಿ ಮಾತ್ರ ಸಂಜೆಯ 6:30ರಿಂದ ರಾತ್ರಿ 10:30ರವರೆಗೆ ಮಾತ್ರ ಮುಂದುವರಿಸಲಾಗುತ್ತದೆ ಎಂದರು.

ಈ ಬಾರಿಯ ದೀಪಾಲಂಕಾರಕ್ಕೆ ಹಿಂದೆಂದೂ ಬಾರದಂಥ ಮೆಚ್ಚುಗೆ ವ್ಯಕ್ತವಾಗಿದೆ. ಮೈಸೂರಿನ ಸೌಂದರ್ಯವನ್ನು ಇಮ್ಮಡಿಗೊಳಿಸುವಲ್ಲಿ ದೀಪಾಲಂಕಾರವು ತನ್ನದೇ ಆದ ಮಹತ್ವದ ಕಾಣಿಕೆಯನ್ನು ನೀಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ಹಾಗೂ ಕೇಂದ್ರದ ಹಲವಾರು ಸಚಿವರು ಈ ಬಾರಿಯ ದೀಪಾಲಂಕಾರವನ್ನು ಹಾಡಿ ಹೊಗಳಿದ್ದಾರೆ ಎಂದು ಟಿ. ರಮೇಶ್ ತಿಳಿಸಿದರು. ಇದನ್ನೂ ಓದಿ: Mysuru Dasara 2022: ನಕ್ಷತ್ರವೇ ಧರೆಗಿಳಿದಂತೆ, ಮೈಸೂರಿನ ದೀಪಾಲಂಕಾರ ಸೊಬಗನೊಮ್ಮೆ ನೋಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:27 am, Tue, 11 October 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್