Mysuru Dasara Lighting 2022: ಮೈಸೂರು ವಿದ್ಯುತ್ ದೀಪಾಲಂಕಾರ ಇನ್ನೆರಡು ದಿನ ಮುಂದುವರಿಕೆ

ಮೈಸೂರು ದಸರಾ ದೀಪಾಲಂಕಾರ ಉಪ ಸಮಿತಿಯ ಅಧ್ಯಕ್ಷ ಟಿ. ರಮೇಶ್ ಹಾಗೂ ಸೆಸ್ಕ್ ನ ನಿರ್ದೇಶಕ ಜಯವಿಭವಸ್ವಾಮಿ ಅವರು, ದೀಪಾಲಂಕಾರವನ್ನು ಇನ್ನೆರಡು ದಿನ ವಿಸ್ತರಿಸಲು ನಿರ್ಧರಿಸಿದ್ದಾರೆ.

Mysuru Dasara Lighting 2022: ಮೈಸೂರು ವಿದ್ಯುತ್ ದೀಪಾಲಂಕಾರ ಇನ್ನೆರಡು ದಿನ ಮುಂದುವರಿಕೆ
ಮೈಸೂರು ವಿದ್ಯುತ್ ದೀಪಾಲಂಕಾರ ಇನ್ನೆರಡು ದಿನ ಮುಂದುವರಿಕೆ
Follow us
| Updated By: ಆಯೇಷಾ ಬಾನು

Updated on:Oct 11, 2022 | 8:27 AM

ಮೈಸೂರು: ದಸರಾ ಮಹೋತ್ಸವ 2022ರ(Mysuru Dasara 2022) ಅಂಗವಾಗಿ ಮೈಸೂರಿನ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಿಗೆ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರ(Mysuru Dasara Lighting) ಅ.12ರವರೆಗೂ ಮುಂದುವರಿಯಲಿದೆ. ಹೀಗಾಗಿ ಸಾಂಸ್ಕೃತಿಕ ನಗರಿ ಅಕ್ಟೋಬರ್​ 12ರವರೆಗೂ ಬೆಳಗಲಿದೆ. ದೀಪಾಲಂಕಾರ ಇದೇ ಭಾನುವಾರಕ್ಕೆ ಮುಗಿಯಬೇಕಿತ್ತು. ಆದರೆ, ಅದನ್ನು ಅ. 12ರವರೆಗೆ ಮುಂದುವರಿಸಲು ತೀರ್ಮಾನಿಸಲಾಗಿದೆ.

ನಗರದ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಸಂಜೆ 6:30ರಿಂದ ರಾತ್ರಿ 10:30ರವರೆಗೆ ಲೈಟಿಂಗ್ಸ್​ ಇರಲಿದೆ. ಈ ಬಗ್ಗೆ ಚೆಸ್ಕಾಂ ಮಾಹಿತಿ ನೀಡಿದೆ. ನಾಡ ಹಬ್ಬ ದಸರಾ ಮುಗಿದರೂ ದಿನೇ ದಿನೇ ಮೈಸೂರಿಗೆ ಸಾವಿರಾರು ಜನರು ಆಗಮಿಸಿ ಮೈಸೂರಿನ ಅಂದ ಸವಿಯುತ್ತಿದ್ದಾರೆ. ನಗರವನ್ನು ಸುತ್ತಾಡಿ ದೀಪಾಲಂಕಾರವನ್ನು ನೋಡಿ ಆನಂದಿಸುತ್ತಿದ್ದಾರೆ. ಇದನ್ನು ತಿಳಿದ ಮೈಸೂರು ದಸರಾ ದೀಪಾಲಂಕಾರ ಉಪ ಸಮಿತಿಯ ಅಧ್ಯಕ್ಷ ಟಿ. ರಮೇಶ್ ಹಾಗೂ ಸೆಸ್ಕ್ ನ ನಿರ್ದೇಶಕ ಜಯವಿಭವಸ್ವಾಮಿ ಅವರು, ದೀಪಾಲಂಕಾರವನ್ನು ಇನ್ನೆರಡು ದಿನ ವಿಸ್ತರಿಸಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: Karnataka Rain Updates: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸುರಿದ ಮಳೆ

ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯುದಲಂಕಾರ ಮುಂದುವರಿಸುವುದರಿಂದ ಸರ್ಕಾರದ ಮೇಲೆ ಹೆಚ್ಚಿನ ಹೊರೆ ಬೀಳುತ್ತದೆ. ಆದರೆ, ಜನರ ಆಸೆಗೆ ಸ್ಪಂದಿಸಿ ದೀಪಾಲಂಕಾರ ಇನ್ನೆರಡು ದಿನ ಮುಂದುವರಿಸಲಾಗುತ್ತದೆ. ಆದರೆ, ಈ ಅಲಂಕಾರವು ನಗರದ ಮಧ್ಯಭಾಗದಲ್ಲಿ ಹಾಗೂ ಕೆಲವು ಪ್ರಮುಖ ರಸ್ತೆ, ವೃತ್ತಗಳಲ್ಲಿ ಮಾತ್ರ ಸಂಜೆಯ 6:30ರಿಂದ ರಾತ್ರಿ 10:30ರವರೆಗೆ ಮಾತ್ರ ಮುಂದುವರಿಸಲಾಗುತ್ತದೆ ಎಂದರು.

ಈ ಬಾರಿಯ ದೀಪಾಲಂಕಾರಕ್ಕೆ ಹಿಂದೆಂದೂ ಬಾರದಂಥ ಮೆಚ್ಚುಗೆ ವ್ಯಕ್ತವಾಗಿದೆ. ಮೈಸೂರಿನ ಸೌಂದರ್ಯವನ್ನು ಇಮ್ಮಡಿಗೊಳಿಸುವಲ್ಲಿ ದೀಪಾಲಂಕಾರವು ತನ್ನದೇ ಆದ ಮಹತ್ವದ ಕಾಣಿಕೆಯನ್ನು ನೀಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ಹಾಗೂ ಕೇಂದ್ರದ ಹಲವಾರು ಸಚಿವರು ಈ ಬಾರಿಯ ದೀಪಾಲಂಕಾರವನ್ನು ಹಾಡಿ ಹೊಗಳಿದ್ದಾರೆ ಎಂದು ಟಿ. ರಮೇಶ್ ತಿಳಿಸಿದರು. ಇದನ್ನೂ ಓದಿ: Mysuru Dasara 2022: ನಕ್ಷತ್ರವೇ ಧರೆಗಿಳಿದಂತೆ, ಮೈಸೂರಿನ ದೀಪಾಲಂಕಾರ ಸೊಬಗನೊಮ್ಮೆ ನೋಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:27 am, Tue, 11 October 22

ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ