AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara: ಸೆ 20ರಿಂದ ಒಂದು ತಿಂಗಳು ಮೈಸೂರು ದಸರ ಸಂಭ್ರಮ, ಇಲ್ಲಿದೆ ಅರಮನೆ ವೇಳಾಪಟ್ಟಿ

Myosre Palace: ಅರಮನೆಯಲ್ಲಿ ಧಾರ್ಮಿಕ ವಿಧಿಗಳು ನಡೆಯುವಾಗ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಇರುತ್ತದೆ.

Mysore Dasara: ಸೆ 20ರಿಂದ ಒಂದು ತಿಂಗಳು ಮೈಸೂರು ದಸರ ಸಂಭ್ರಮ, ಇಲ್ಲಿದೆ ಅರಮನೆ ವೇಳಾಪಟ್ಟಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 13, 2022 | 12:37 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೈಸೂರು ಅರಮನೆ (Mysore Palace) ಮತ್ತು ವಿವಿಧೆಡೆ ಸಿದ್ಧತೆ ಆರಂಭವಾಗಿದೆ. ಸೆ.20ರ ಮಂಗಳವಾರದಿಂದ ಸಿಂಹಾಸನ ಜೋಡಣೆ ಆರಂಭವಾಗಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರಗೆ ಅರಮನೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೆ.26ರಂದು ಖಾಸಗಿ ದರ್ಬಾರ್ ಹಾಗೂ ವಿವಿಧ ಪೂಜೆಗಳು, ಧಾರ್ಮಿಕ ವಿಧಿಗಳು ನೆರವೇರಲಿವೆ. ಅಂದೂ ಸಹ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಅಕ್ಟೋಬರ್ 4ರಂದು ಅರಮನೆಯಲ್ಲಿ ಆಯುಧಪೂಜೆ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಅ.5ರಂದು ವಿಜಯದಶಮಿ ಆಚರಣೆ ಇರುತ್ತದೆ. ಅಂದೂ ಸಹ ಸಂಪೂರ್ಣ ಅರಮನೆ ಪ್ರವೇಶಕ್ಕೆ ನಿರ್ಬಂಧವಿದೆ. ಅ.20ರಂದು ಸಿಂಹಾಸನ ವಿಸರ್ಜನೆ‌ ಹಿನ್ನೆಲೆಯಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಇರುತ್ತದೆ ಎಂದು ‘ಟಿವಿ9’ಗೆ ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಮಣ್ಯ ಮಾಹಿತಿ ನೀಡಿದರು.

ಆನೆಗಳ ತಾಲೀಮು

ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಮೈಸೂರಿಗೆ ಬಂದಿದೆ. 4 ಹೆಣ್ಣಾನೆಗಳು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲಿವೆ. ಗೋಪಾಲಸ್ವಾಮಿ, ಅಭಿಮನ್ಯು, ಭೀಮ, ಮಹೇಂದ್ರ, ಅರ್ಜುನ, ವಿಕ್ರಮ, ಧನಂಜಯ, ಕಾವೇರಿ, ಗೋಪಿ, ಶ್ರೀರಾಮ, ವಿಜಯಾ, ಚೈತ್ರಾ, ಲಕ್ಷ್ಮೀ, ಪಾರ್ಥಸಾರಥಿ ಆನೆಗಳು ಮೈಸೂರಿನಲ್ಲಿ ಬೀಡುಬಿಟ್ಟಿದ್ದು, ಪ್ರತಿದಿನ ತಾಲೀಮು ಮಾಡುತ್ತಿವೆ.

ರಾಷ್ಟ್ರಪತಿಯಿಂದ ಉದ್ಘಾಟನೆ

ಜಗದ್ವಿಖ್ಯಾತ ಮೈಸೂರು ದಸರಾ ಉತ್ಸವ ಸೆಪ್ಟೆಂಬರ್ 26ರಿಂದ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಗೋಲ್ಡ್ ಪಾಸ್ ಇಲ್ಲ

2022ರ ಮೈಸೂರು ದಸರಾ (Mysore Dasara) ಉತ್ಸವಕ್ಕೆ ಗೋಲ್ಡ್ ಪಾಸ್ ಇರುವುದಿಲ್ಲ ಎಂದು ಮೈಸೂರಿನಲ್ಲಿ ಸಚಿವ ಎಸ್ ಟಿ ಸೋಮಶೇಖರ್ (S T Somashekar) ಹೇಳಿದ್ದಾರೆ. ಗಣ್ಯರು, ವಿದೇಶಿಗರು ಹೆಚ್ಚಾಗಿ ಗೋಲ್ಡ್ ಪಾಸ್ ಅವಲಂಬಿಸಿದ್ದರು. ಒತ್ತಡ ಕಡಿಮೆ ಮಾಡುವ ಸಲುವಾಗಿ ಗೋಲ್ಡ್ ಪಾಸ್​ನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ವಿವಿಐಪಿ ಪಾಸ್ ಹಾಗೂ ಕರ್ತವ್ಯನಿರತ ಪಾಸ್ ಹೊರತುಪಡಿಸಿ ಉಳಿದ ಪಾಸ್‌ಗಳನ್ನು ರದ್ದು ಮಾಡಲು ಚಿಂತನೆ ಮಾಡಲಾಗಿದೆ.

Published On - 11:43 am, Tue, 13 September 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್