AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara: ಸೆ 20ರಿಂದ ಒಂದು ತಿಂಗಳು ಮೈಸೂರು ದಸರ ಸಂಭ್ರಮ, ಇಲ್ಲಿದೆ ಅರಮನೆ ವೇಳಾಪಟ್ಟಿ

Myosre Palace: ಅರಮನೆಯಲ್ಲಿ ಧಾರ್ಮಿಕ ವಿಧಿಗಳು ನಡೆಯುವಾಗ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಇರುತ್ತದೆ.

Mysore Dasara: ಸೆ 20ರಿಂದ ಒಂದು ತಿಂಗಳು ಮೈಸೂರು ದಸರ ಸಂಭ್ರಮ, ಇಲ್ಲಿದೆ ಅರಮನೆ ವೇಳಾಪಟ್ಟಿ
ಸಾಂದರ್ಭಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 13, 2022 | 12:37 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೈಸೂರು ಅರಮನೆ (Mysore Palace) ಮತ್ತು ವಿವಿಧೆಡೆ ಸಿದ್ಧತೆ ಆರಂಭವಾಗಿದೆ. ಸೆ.20ರ ಮಂಗಳವಾರದಿಂದ ಸಿಂಹಾಸನ ಜೋಡಣೆ ಆರಂಭವಾಗಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರಗೆ ಅರಮನೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೆ.26ರಂದು ಖಾಸಗಿ ದರ್ಬಾರ್ ಹಾಗೂ ವಿವಿಧ ಪೂಜೆಗಳು, ಧಾರ್ಮಿಕ ವಿಧಿಗಳು ನೆರವೇರಲಿವೆ. ಅಂದೂ ಸಹ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಅಕ್ಟೋಬರ್ 4ರಂದು ಅರಮನೆಯಲ್ಲಿ ಆಯುಧಪೂಜೆ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಅ.5ರಂದು ವಿಜಯದಶಮಿ ಆಚರಣೆ ಇರುತ್ತದೆ. ಅಂದೂ ಸಹ ಸಂಪೂರ್ಣ ಅರಮನೆ ಪ್ರವೇಶಕ್ಕೆ ನಿರ್ಬಂಧವಿದೆ. ಅ.20ರಂದು ಸಿಂಹಾಸನ ವಿಸರ್ಜನೆ‌ ಹಿನ್ನೆಲೆಯಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಇರುತ್ತದೆ ಎಂದು ‘ಟಿವಿ9’ಗೆ ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಮಣ್ಯ ಮಾಹಿತಿ ನೀಡಿದರು.

ಆನೆಗಳ ತಾಲೀಮು

ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಮೈಸೂರಿಗೆ ಬಂದಿದೆ. 4 ಹೆಣ್ಣಾನೆಗಳು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲಿವೆ. ಗೋಪಾಲಸ್ವಾಮಿ, ಅಭಿಮನ್ಯು, ಭೀಮ, ಮಹೇಂದ್ರ, ಅರ್ಜುನ, ವಿಕ್ರಮ, ಧನಂಜಯ, ಕಾವೇರಿ, ಗೋಪಿ, ಶ್ರೀರಾಮ, ವಿಜಯಾ, ಚೈತ್ರಾ, ಲಕ್ಷ್ಮೀ, ಪಾರ್ಥಸಾರಥಿ ಆನೆಗಳು ಮೈಸೂರಿನಲ್ಲಿ ಬೀಡುಬಿಟ್ಟಿದ್ದು, ಪ್ರತಿದಿನ ತಾಲೀಮು ಮಾಡುತ್ತಿವೆ.

ರಾಷ್ಟ್ರಪತಿಯಿಂದ ಉದ್ಘಾಟನೆ

ಜಗದ್ವಿಖ್ಯಾತ ಮೈಸೂರು ದಸರಾ ಉತ್ಸವ ಸೆಪ್ಟೆಂಬರ್ 26ರಿಂದ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಗೋಲ್ಡ್ ಪಾಸ್ ಇಲ್ಲ

2022ರ ಮೈಸೂರು ದಸರಾ (Mysore Dasara) ಉತ್ಸವಕ್ಕೆ ಗೋಲ್ಡ್ ಪಾಸ್ ಇರುವುದಿಲ್ಲ ಎಂದು ಮೈಸೂರಿನಲ್ಲಿ ಸಚಿವ ಎಸ್ ಟಿ ಸೋಮಶೇಖರ್ (S T Somashekar) ಹೇಳಿದ್ದಾರೆ. ಗಣ್ಯರು, ವಿದೇಶಿಗರು ಹೆಚ್ಚಾಗಿ ಗೋಲ್ಡ್ ಪಾಸ್ ಅವಲಂಬಿಸಿದ್ದರು. ಒತ್ತಡ ಕಡಿಮೆ ಮಾಡುವ ಸಲುವಾಗಿ ಗೋಲ್ಡ್ ಪಾಸ್​ನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ವಿವಿಐಪಿ ಪಾಸ್ ಹಾಗೂ ಕರ್ತವ್ಯನಿರತ ಪಾಸ್ ಹೊರತುಪಡಿಸಿ ಉಳಿದ ಪಾಸ್‌ಗಳನ್ನು ರದ್ದು ಮಾಡಲು ಚಿಂತನೆ ಮಾಡಲಾಗಿದೆ.

Published On - 11:43 am, Tue, 13 September 22

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು