AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2022: ಇಂದು ಮೈಸೂರಿನಲ್ಲಿ ಗ್ರಾಮೀಣ ದಸರಾ: ಬೃಹತ್‌ ಉಚಿತ ಆರೋಗ್ಯ ಹಾಗೂ ಜಾನುವಾರು ತಪಾಸಣಾ ಶಿಬಿರ ಆಯೋಜನೆ

ನಿನ್ನೆ ನಡೆಯಬೇಕಿದ್ದ ಗ್ರಾಮೀಣ ದಸರಾಗೆ ಇಂದು ದಾರಿಪುರದ ದೇಗುಲದಲ್ಲಿ ಚಾಲನೆ ದೊರೆಯಲಿದ್ದು, ಸುಮಾರು 2 ಕಿಲೋ ಮೀಟರ್ ಅದ್ಧೂರಿ ಮೆರವಣಿಗೆ ನಡೆಯಲಿದೆ.

Mysore Dasara 2022: ಇಂದು ಮೈಸೂರಿನಲ್ಲಿ ಗ್ರಾಮೀಣ ದಸರಾ: ಬೃಹತ್‌ ಉಚಿತ ಆರೋಗ್ಯ ಹಾಗೂ ಜಾನುವಾರು ತಪಾಸಣಾ ಶಿಬಿರ ಆಯೋಜನೆ
ಇಂದು ಮೈಸೂರಿನಲ್ಲಿ ಗ್ರಾಮೀಣ ದಸರಾ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 29, 2022 | 7:25 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 (Mysore Dasara: 2022) ಹಿನ್ನೆಲೆ ಇಂದು ಬೆಳಗ್ಗೆ 9 ಗಂಟೆಗೆ ಗ್ರಾಮೀಣ ದಸರಾಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್​ ಚಾಲನೆ ನೀಡಲಿದ್ದಾರೆ. ನಿನ್ನೆ ನಡೆಯಬೇಕಿದ್ದ ಗ್ರಾಮೀಣ ದಸರಾಗೆ ಇಂದು ದಾರಿಪುರದ ದೇಗುಲದಲ್ಲಿ ಚಾಲನೆ ದೊರೆಯಲಿದ್ದು, ಸುಮಾರು 2 ಕಿಲೋ ಮೀಟರ್ ಅದ್ಧೂರಿ ಮೆರವಣಿಗೆ ನಡೆಯಲಿದೆ. ಸರ್ಕಾರದ ಯೋಜನೆಗಳ ಸ್ತಬ್ಧಚಿತ್ರ, ಸಾಂಸ್ಕೃತಿಕ ಕಲಾ ತಂಡಗಳು ಭಾಗಿಯಾಗಲಿದ್ದು, ಬೆಳಗ್ಗೆ 10 ಗಂಟೆಗೆ ಜಯಪುರದಲ್ಲಿ ಕಾರ್ಯಕ್ರಮ ಜರುಗಲಿದೆ. ಜೊತೆಗೆ ಬೃಹತ್‌ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಜಾನುವಾರು ತಪಾಸಣಾ ಶಿಬಿರ ಆಯೋಜನೆ ಮಾಡಲಾಗಿದೆ. ಸಂಸದ ಪ್ರತಾಪ್‌ ಸಿಂಹ, ಶಾಸಕ ಜಿ. ಟಿ ದೇವೇಗೌಡ ಸೇರಿ ಹಲವರು ಭಾಗಿಯಾಗಲಿದ್ದಾರೆ.

41 ಸ್ತಬ್ದಚಿತ್ರಗಳಿಗೆ ಅವಕಾಶ:

ಈ ಬಾರಿ 41 ಸ್ತಬ್ದಚಿತ್ರಗಳಿಗೆ ಅವಕಾಶ ನೀಡಲಾಗಿದೆ. ಪ್ರತಿ‌ ಜಿಲ್ಲೆಯ ಒಂದು ಸ್ತಬ್ದಚಿತ್ರ. ಸ್ತಬ್ದಚಿತ್ರ ಉಪಸಮಿತಿಯಿಂದ 03, ಮೈಸೂರು ವಿವಿ 01, ಚೆಸ್ಕಾಂ 01, ಸಮಾಜ ಕಲ್ಯಾಣ ಇಲಾಖೆ 01, ಪ್ರವಾಸೋದ್ಯಮ ಇಲಾಖೆ 01, ಲಿಡಕರ್ 01, ಕೌಶಲ್ಯ ಕರ್ನಾಟಕ 01, ಕೆಎಂಎಫ್ 01, ಕಾವೇರಿ ನೀರಾವರಿ ನಿಗಮದ ಒಂದು ಸ್ತಬ್ಧಚಿತ್ರ, ಆಜಾದಿ ಕಾ ಅಮೃತ ಮಹೋತ್ಸವ ಸಾರುವ ಸ್ತಬ್ದಚಿತ್ರ ಸೇರಿ ಹಲವು ಸ್ತಬ್ದಚಿತ್ರಗಳು ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗಿಯಾಗಲಿವೆ.

ಮೈಸೂರು ದಸರಾ 2022 ವೀಕ್ಷಣೆಗಾಗಿ ಗೋಲ್ಡ್ ಕಾರ್ಡ್ ವಿತರಣೆ

ಇನ್ನೂ ವಿಶ್ವವಿಖ್ಯಾತ ನಾಡಹಬ್ಬ ಸಾಂಕೃತಿಕ ಐತಿಹ್ಯ ಹೊಂದಿರುವ ಮೈಸೂರು ದಸರಾ ಮಹೋತ್ಸವ-2022 ವೀಕ್ಷಿಸಲು ದೇಶಿ, ವಿದೇಶಿ ಪ್ರವಾಸಿಗಳಿಗೆ ಅನುಕೂಲವಾಗಲೆಂದು ಸರ್ಕಾರ ಗೋಲ್ಡ್ ಕಾರ್ಡ್​ (Gold Card) ನೀಡಲು ಮುಂದಾಗಿದೆ. ಈ ಗೋಲ್ಡ್​ ಕಾರ್ಡ್​ನ್ನು ಆನ್​ಲೈನ್​ ಮೂಲಕ ಮಾತ್ರ ಖರೀದಿಸಲು ಅವಕಾಶ ನೀಡಲಾಗಿದೆ. ಪ್ರತಿ ಗೋಲ್ಡ್​ ಕಾರ್ಡ್​​ಗೆ 4,999 ರೂಪಾಯಿ ನಿಗದಿ ಮಾಡಲಾಗಿದೆ. ಈ ಗೋಲ್ಡ್​​ ಕಾರ್ಡ್​ನ್ನು www.mysoredasara.gov.in ವೈಬ್​ಸೈಟ್​ನಲ್ಲಿ ಖರೀದಿಸಬಹುದಾಗಿದೆ. ಒಬ್ಬರು ಒಂದು ಬಾರಿಗೆ ಗರಿಷ್ಠ 2 ಗೋಲ್ಡ್ ಕಾರ್ಡ್ ಖರೀದಿಸಲು ಅವಕಾಶ ನೀಡಲಾಗಿದೆ. ಆನ್​ಲೈನ್ ಪಾವತಿ ದೃಢೀಕರಿಸಿದ ನಂತರ ಗೋಲ್ಡ್ ಕಾರ್ಡ್​ ನೀಡಲಾಗುತ್ತದೆ.

29-09-2022ರಿಂದ ಕೆಎಸ್‌ಡಿಟಿಸಿ (ಪ್ರವಾಸೋದ್ಯಮ ಇಲಾಖೆ) ಮಯೂರ ಹೋಟೆಲ್ ಹತ್ತಿರ ಗೋಲ್ಡ್​​ ಕಾರ್ಡ್​ನ್ನು ​ವಿತರಿಸಲಾಗುತ್ತದೆ. ಬೆಳಗ್ಗೆ 11ರಿಂದ ಸಂಜೆ 5.30ರವರೆಗೆ ಗೋಲ್ಡ್ ಕಾರ್ಡ್ ವಿತರಣೆ ಮಾಡಲಾಗುತ್ತದೆ.

ಗೋಲ್ಡ್​​ ಕಾರ್ಡ್​​ ಮುಖಾಂತರ ವೀಕ್ಷಿಸಬಹುದಾದ ಸಮಾರಂಭಗಳು

1. ದಸರಾ ಮೆರವಣಿಗೆ ಜಂಬೂಸವಾರಿ ವೀಕ್ಷಣೆಗೆ ಅವಕಾಶ

2. ಬನ್ನಿಮಂಟಪದಲ್ಲಿ ಪಂಜಿನ ಕವಾಯತು ವೀಕ್ಷಣೆಗೆ ಅವಕಾಶ

3. ಪ್ರವಾಸಿ ತಾಣಗಳಿಗೆ ಒಮ್ಮೆ ಮಾತ್ರ ಉಚಿತವಾಗಿ ವೀಕ್ಷಣೆಗೆ ಅವಕಾಶ

4. ಮೈಸೂರು ಅರಮನೆ, ಶ್ರೀ ಚಾಮರಾಜೇಂದ್ರ ಮೃಗಾಲಯ

5. ಚಾಮುಂಡೇಶ್ವರಿ ದೇವಸ್ಥಾನ, ಫಲಪುಷ್ಪ ಪ್ರದರ್ಶನ

6. ದಸರಾ ವಸ್ತು ಪ್ರದರ್ಶನ, ಸೇಂಟ್ ಫಿಲೋಮಿನಾ ಚರ್ಚ್​

7. ರೈಲ್ವೆ ಮ್ಯೂಸಿಯಮ್, ಕೆಆರ್​ಎಸ್​ ಜಲಾಶಯ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.

‘ದಸರಾ ದರ್ಶನ’ KSRTC ಬಸ್​ಗಳಿಗೆ ಚಾಲನೆ

‘ದಸರಾ ದರ್ಶನ’ KSRTC ಬಸ್​ಗಳಿಗೆ ಬಿಜೆಪಿ ಶಾಸಕ ಎಸ್​.ಎ.ರಾಮದಾಸ್​ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಚಾಲನೆ ನೀಡಿದರು. 3 ದಿನ ದಸರಾ ದರ್ಶನಕ್ಕೆ ಒಟ್ಟು 81 ವಿಶೇಷ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ನಿತ್ಯ ಮೈಸೂರಿನ 1 ತಾಲೂಕಿಗೆ ಮೂರು ಬಸ್​​ಗಳ ನಿಯೋಜನೆ ಮಾಡಿದ್ದು, 3 ದಿನಗಳಲ್ಲಿ 4,455 ಜನರಿಗೆ ದಸರಾ ತೋರಿಸುವ ನಿರ್ಧರಿಸಲಾಗಿದೆ. 9.30ಕ್ಕೆ ಕೆ.ಎಸ್.ಆರ್.ಟಿ.ಸಿ ಚಾಲನೆ  ಕಾರ್ಯಕ್ರಮಕ್ಕೆ ಸಮಯ ನಿಗದಿಯಾಗಿತ್ತು. ಆದರೆ ಉಸ್ತುವಾರಿ ಸಚಿವರಿಗಾಗಿ ಕಾದು ಕಾದು ಶಾಸಕ ಹಾಗೂ ಅಧಿಕಾರಿಗಳು ಸುಸ್ತಾದರು. ವಿಶ್ವ ವಿಖ್ಯಾತ ದಸರಾ ನೋಡಲು ಜಿಲ್ಲಾಡಳಿತ ವಿಶೇಷ ಬಸ್​ಗಳ ವ್ಯವಸ್ಥೆ ಮಾಡಿದೆ. ಸ್ಥಳೀಯ ಶಾಸಕ ರಾಮದಾಸ್ ಬಂದು ಒಂದು ಗಂಟೆಯಾದರು ಸಚಿವ ಸ್ಥಳಕ್ಕೆ ಬಂದಿರಲಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:23 am, Thu, 29 September 22

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ