AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾಗೆ ಸಹಕಾರ ನೀಡದ ಸಚಿವರು, ಶಾಸಕರನ್ನು ತಾಯಿಯೇ ನೋಡಿಕೊಳ್ಳಲಿ; ಕೈಮುಗಿದು ಅಸಮಾಧಾನ ತೋಡಿಕೊಂಡ ಎಸ್​ಟಿ ಸೋಮಶೇಖರ್

ದಸರಾ ಕಾರ್ಯಕ್ರಮಕ್ಕೆ ತಮ್ಮದೆ ಸಚಿವರು, ಶಾಸಕರು ಸಹಕಾರ ನೀಡುತ್ತಿಲ್ಲವೆಂದು ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

ದಸರಾಗೆ ಸಹಕಾರ ನೀಡದ ಸಚಿವರು, ಶಾಸಕರನ್ನು ತಾಯಿಯೇ ನೋಡಿಕೊಳ್ಳಲಿ; ಕೈಮುಗಿದು ಅಸಮಾಧಾನ ತೋಡಿಕೊಂಡ ಎಸ್​ಟಿ ಸೋಮಶೇಖರ್
ಎಸ್ ಟಿ ಸೋಮಶೇಖರ್, ಸಚಿವರು
TV9 Web
| Edited By: |

Updated on:Oct 04, 2022 | 12:24 PM

Share

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ನಾಳೆ ನಡೆಯಲಿರುವ ಜಂಬೂ ಸವಾರಿಗೆ ಭರ್ಜರಿ ಸಿದ್ದತೆಗಳು ನಡೆಯುತ್ತಿವೆ. ಇದರ ನಡುವೆ ಮೈಸೂರಿನಲ್ಲಿ ಸಚಿವ ಎಸ್​.ಟಿ.ಸೋಮಶೇಖರ್(ST Somashekar) ಬೇಸರ ಹೊರಹಾಕಿದ್ದಾರೆ. ಸಚಿವರು, ಶಾಸಕರು ತಮಗೆ ಸಹಕಾರ ನೀಡ್ತಿಲ್ಲವೆಂದು ಅಸಮಾಧಾನ ಹೊರ ಹಾಕಿದ್ದಾರೆ.

ಟಿವಿ9 ಜೊತೆ ಮಾತನಾಡಿದ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಕೈ ಮುಗಿದು ತಾಯಿ ಚಾಮುಂಡೇಶ್ವರಿಯನ್ನ ನೆನಪಿಸಿಕೊಂಡಿದ್ದಾರೆ. ದಸರಾ ಕಾರ್ಯಕ್ರಮಕ್ಕೆ ತಮ್ಮದೆ ಸಚಿವರು, ಶಾಸಕರು ಸಹಕಾರ ನೀಡುತ್ತಿಲ್ಲವೆಂದು ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಸಹಕಾರ ಸಚಿವ ಪ್ರತಿಯೊಬ್ಬರಿಗೂ ಸಹಕರಿಸೋದು ನನ್ನ ಕರ್ತವ್ಯ. ನಾನು ಸಹಕಾರ ಕೊಟ್ಟು ನನಗೆ ಸಹಕಾರ ಕೊಡದೆ ಇರೋರಿಗೆ ನಾನೇನು ಮಾಡ್ಲಿ? ಆ ತಾಯಿ ಚಾಮುಂಡಿಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಅವರನ್ನ ಆ ತಾಯಿಯೇ ನೋಡಿಕೊಳ್ಳಲಿ ಎಂದು ಟಿವಿ9 ಕ್ಯಾಮರಾಗೆ ಕೈ ಮುಗಿದು ಸಚಿವ ಎಸ್.ಟಿ ಸೋಮಶೇಖರ್ ಅಸಮಾಧಾನ ಹೊರ ಹಾಕಿದ್ರು. ಇದನ್ನೂ ಓದಿ: ಅಪಾಯಕಾರಿ ರೈಡಿಂಗ್ ಮತ್ತು ಹಿಟ್ ಅಂಡ್ ರನ್​ನ ಅತ್ಯುತ್ತಮ ಉದಾಹರಣೆ ಈ ವಿಡಿಯೋದಲ್ಲಿ ನೋಡಬಹುದು!

ರಾಜ್ಯದ ಜನತೆಗೆ ದಸರಾ ಶುಭಾಶಯ ತಿಳಿಸಿದ ಸಿಎಂ

ನಾಡ ಹಬ್ಬ ದಸರಾಗೆ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ಜನತೆಗೆ ಶುಭಾಶಯ ತಿಳಿಸಿದ್ದಾರೆ. ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ಮಹಾನವಮಿಯ ಹಾರ್ದಿಕ ಶುಭಾಶಯಗಳು.ಈ ಹಬ್ಬವೂ ತಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ ತರಲೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮೂಲಕ ಶುಭ ಕೋರಿದ್ದಾರೆ.

ದಸರಾ ಪಾಸ್ ವಿಚಾರವಾಗಿ ಸ್ಥಳೀಯ ಶಾಸಕರ ಮುನಿಸು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ಕ್ಕೆ ದಸರಾ ಪಾಸ್ ಸಿಗುತ್ತಿಲ್ಲವೆಂದು ಸ್ಥಳೀಯ ಶಾಸಕರು ಮುನಿಸಿಕೊಂಡಿದ್ದಾರೆ. ಹೀಗಾಗಿ ರಾಮದಾಸ್ ಹಲವು ಕಾರ್ಯಕ್ರಮಗಳಿಂದ ದೂರ ಉಳಿದಿದ್ದಾರೆ. ನಾಗೇಂದ್ರ ಸೇರಿ ಹಲವರು ಮರ್ಪಕವಾಗಿ ಪಾಸ್ ಸಿಕ್ಕಿಲ್ಲ ಎಂದು ಪಾಸ್ ವಿಚಾರದಲ್ಲಿ ಅಸಮಾಧನ ಹೊರ ಹಾಕಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:10 am, Tue, 4 October 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?