AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hakka Bukka brothers: ಹಕ್ಕ-ಬುಕ್ಕ ಸಹೋದರರು ಅಂಬಾರಿಯ ಬಚ್ಚಿಟ್ಟು, ದೆಹಲಿ ಸುಲ್ತಾನರ ದಾಳಿಯಿಂದ ಅದನ್ನು ರಕ್ಷಿಸಿದ್ದು ಹೇಗೆ?

Mysuru Dasara Golden Howdah: ಅಂಬಾರಿ ವಿವಿಧ ಅರಸರ ಕಾಲದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಂಚರಿಸಿ ಕಡೆಗೆ ಮೈಸೂರಲ್ಲಿ ನೆಲೆಗೊಂಡಿದೆ. ಇಂದಿಗೂ ಮೈಸೂರು ದಸರಾ ಸಂದರ್ಭದಲ್ಲಿ ಅದು ತನ್ನ ಪ್ರಾಮುಖ್ಯತೆಯನ್ನು ಉಳಿಸಿಕೊಂಡಿದೆ. ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಪುನೀತವಾಗಿದೆ.

Hakka Bukka brothers: ಹಕ್ಕ-ಬುಕ್ಕ ಸಹೋದರರು ಅಂಬಾರಿಯ ಬಚ್ಚಿಟ್ಟು, ದೆಹಲಿ ಸುಲ್ತಾನರ ದಾಳಿಯಿಂದ ಅದನ್ನು ರಕ್ಷಿಸಿದ್ದು ಹೇಗೆ?
ಅಂಬಾರಿ ಅರಮನೆಗೆ ಬಂದ ರೋಚಕ ಕಥೆ ಇಲ್ಲಿದೆ!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Sep 27, 2022 | 6:06 AM

ಮೈಸೂರು ದಸರಾ (Mysuru Dasara) ಎಂದರೆ ಅದು ಕನ್ನಡನಾಡಿಗೆ ನಾಡಹಬ್ಬವಾದರೆ, ಈ ಸಾಂಸ್ಕೃತಿಕ ಹಬ್ಬದ ಕೀರ್ತಿ ಮಾತ್ರ ವಿಶ್ವಪ್ರಸಿದ್ಧ! ಶತಮಾನಗಳಿಂದ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬರುತ್ತಿರುವ ಈ ಆಚರಣೆಯಲ್ಲಿ ಬಹುಮುಖ್ಯವಾದ ಆಕರ್ಷಣೆ ಎಂದರೆ ಅದು ಚಿನ್ನದ ಅಂಬಾರಿ‌. ಜಂಬೂಸವಾರಿಯಲ್ಲಿ ಆನೆ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ತರುವ, ಈ ಅಂಬಾರಿಯಲ್ಲಿ ವಿರಾಜಮಾನಳಾಗಿ ಬರುವ ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲು ಜನರು ದೇಶ ವಿದೇಶಗಳಿಂದ ಬರುತ್ತಾರೆ. ಇಂತಹ ಅಂಬಾರಿಯ ಬಗ್ಗೆ (Mysuru Dasara Golden Howdah) ನಾವು ತಿಳಿಯಲೇ ಬೇಕಾದ ಇತಿಹಾಸವಿದೆ. ಅದು ಹೀಗಿದೆ.

ಅಂಬಾರಿಯ ಇತಿಹಾಸ ಬಲು ರೋಚಕವಾಗಿದೆ. ಮೂಲತಃ ಈ ರತ್ನಖಚಿತ ಅಂಬಾರಿ ಮಹಾರಾಷ್ಟ್ರದ ದೇವಗಿರಿಯಲ್ಲಿ ಇತ್ತು. ಕಾಲಾಂತರದಲ್ಲಿ ದೇವಗಿರಿ ಅವನತಿ ಹೊಂದಿದಾಗ, ಅಂಬಾರಿಯನ್ನು ದೇವಗಿರಿಯ ರಾಜ ಮುಮ್ಮಡಿಸಿಂಗ ನಾಯಕನಿಗೆ ಹಸ್ತಾಂತರಿಸಿ, ಆತನಿಗೆ ಅದನ್ನು ಸುರಕ್ಷಿತವಾಗಿಡುವಂತೆ ಮನವಿ ಮಾಡಿಕೊಂಡರು. ಆಗ ಮುಮ್ಮಡಿ ಸಿಂಗ ನಾಯಕನು ಇದನ್ನು ಬಳ್ಳಾರಿ ಹತ್ತಿರವಿದ್ದ ರಾಮದುರ್ಗ ಕೋಟೆಯಲ್ಲಿ ಅಡಗಿಸಿ ಇಟ್ಟನು. ನಂತರ ಈತನ ಮಗ ಕಂಪಿಲರಾಯ ತನ್ನ ರಾಜ್ಯ ವಿಸ್ತರಣೆ ಮಾಡಿ, ಕಮ್ಮಟ ದುರ್ಗವನ್ನು ತನ್ನ ರಾಜಧಾನಿಯಾಗಿ ಮಾಡಿಕೊಳ್ಳುತ್ತಾನೆ. ಆಗ ಅಲ್ಲಿ ಶ್ರೀದುರ್ಗಾದೇವಿಯನ್ನು ಸ್ಥಾಪಿಸಿ ಆರಾಧನೆ ಮಾಡುತ್ತಾನೆ.

ಚಿನ್ನದ ಅಂಬಾರಿ ಮೈಸೂರು ಅರಮನೆಗೆ ಬಂದಿದ್ದು ಹೇಗೆ? ಅಂಬಾರಿ ಅರಮನೆಗೆ ಬಂದ ರೋಚಕ ಕಥೆ ಇಲ್ಲಿದೆ!

ಆದರೆ ಮುಂದೆ ದೆಹಲಿ ಸುಲ್ತಾನರು ಕಂಪಿಲರಾಜ್ಯದ ಮೇಲೆ ದಾಳಿ ಮಾಡಿದಾಗ, ಅಲ್ಲಿ ಭಂಡಾರ ಸಂರಕ್ಷಕರಾದ ಹಕ್ಕ-ಬುಕ್ಕರೆಂಬ ಸಹೋದರರು (Hakka Bukka brothers) ಈ ಅಂಬಾರಿಯನ್ನು ಬಚ್ಚಿಡುತ್ತಾರೆ. ಮುಂದೆ ದೆಹಲಿ ಸುಲ್ತಾನದ ಅವನತಿಯ ನಂತರ ಈ ಸಹೋದರರು ಆನೆಗೊಂದಿಯಲ್ಲಿ ವಿಜಯನಗರ ಸಾಮ್ರಾಜ್ಯ ಸ್ಥಾಪನೆ ಮಾಡಿದರು. ಅನಂತರ ಹಂಪೆ ಅವರ ಸಾಮ್ರಾಜ್ಯದ ಎರಡನೇ ರಾಜಧಾನಿಯಾದಾಗ ಅಂಬಾರಿ ಹಂಪಿಗೆ ಬಂದು ಸೇರುತ್ತದೆ. ವಿಜಯನಗರ ಸಾಮ್ರಾಜ್ಯ ಅವನತಿಯ ಕಾಲದಲ್ಲಿ ಅಂಬಾರಿಯನ್ನುರಕ್ಷಿಸಲು ಅದನ್ನು ಪೆನುಗೊಂಡಕ್ಕೆ ಸ್ಥಳಾಂತರ ಮಾಡುತ್ತಾರೆ. ಮುಂದೆ ಅದು ಅಲ್ಲಿಂದ ಶ್ರೀರಂಗಪಟ್ಟಣ್ಣವನ್ನು ಸೇರಿ ಕಡೆಗೆ ಒಡೆಯರ ಅಧೀನದಲ್ಲಿ ಮೈಸೂರನ್ನು ಸೇರುತ್ತದೆ.

ಹೀಗೆ ಅಂಬಾರಿ ವಿವಿಧ ಅರಸರ ಕಾಲದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಂಚರಿಸಿ ಕಡೆಗೆ ಮೈಸೂರಲ್ಲಿ ನೆಲೆಗೊಂಡಿದೆ. ಇಂದಿಗೂ ಮೈಸೂರು ದಸರಾ ಸಂದರ್ಭದಲ್ಲಿ ಅದು ತನ್ನ ಪ್ರಾಮುಖ್ಯತೆಯನ್ನು ಉಳಿಸಿಕೊಂಡಿದೆ. ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಪುನೀತವಾಗಿದೆ.

ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್