AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2022: ವಿಶ್ವವಿಖ್ಯಾತ ಮೈಸೂರು ದಸರಾ 2022: ಈ ಬಾರಿ 41 ಸ್ತಬ್ಧಚಿತ್ರಗಳಿಗೆ ಅವಕಾಶ

ವಿದ್ಯುತ್ ದೀಪಾಲಂಕಾರದಿಂದ ಮೈಸೂರು ಕಂಗೊಳಿಸುತ್ತಿದ್ದು, ದೀಪಾಲಂಕಾರ ನೋಡಲು ಜನಸಾಗರ ಹುರಿದು ಬರುತ್ತಿದೆ. ಮೈಸೂರು ರಸ್ತೆಗಳು ಜನರಿಂದ ತುಂಬಿ ತುಳುಕುತ್ತಿವೆ.

Mysore Dasara 2022: ವಿಶ್ವವಿಖ್ಯಾತ ಮೈಸೂರು ದಸರಾ 2022: ಈ ಬಾರಿ 41 ಸ್ತಬ್ಧಚಿತ್ರಗಳಿಗೆ ಅವಕಾಶ
ಸ್ತಬ್ದಚಿತ್ರ (ಸಂಗ್ರಹ ಚಿತ್ರ)
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Sep 28, 2022 | 1:59 PM

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2022 ಹಿನ್ನೆಲೆ ಈ ಬಾರಿ 41 ಸ್ತಬ್ದಚಿತ್ರಗಳಿಗೆ ಅವಕಾಶ ನೀಡಲಾಗಿದೆ. ಪ್ರತಿ‌ ಜಿಲ್ಲೆಯ ಒಂದು ಸ್ತಬ್ದಚಿತ್ರ. ಸ್ತಬ್ದಚಿತ್ರ ಉಪಸಮಿತಿಯಿಂದ 03, ಮೈಸೂರು ವಿವಿ 01, ಚೆಸ್ಕಾಂ 01, ಸಮಾಜ ಕಲ್ಯಾಣ ಇಲಾಖೆ 01, ಪ್ರವಾಸೋದ್ಯಮ ಇಲಾಖೆ 01, ಲಿಡಕರ್ 01, ಕೌಶಲ್ಯ ಕರ್ನಾಟಕ 01, ಕೆಎಂಎಫ್ 01, ಕಾವೇರಿ ನೀರಾವರಿ ನಿಗಮದ ಒಂದು ಸ್ತಬ್ಧಚಿತ್ರ, ಆಜಾದಿ ಕಾ ಅಮೃತ ಮಹೋತ್ಸವ ಸಾರುವ ಸ್ತಬ್ದಚಿತ್ರ ಸೇರಿ ಹಲವು ಸ್ತಬ್ದಚಿತ್ರಗಳು ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗಿಯಾಗಲಿವೆ. ಇನ್ನೂ ವಿದ್ಯುತ್ ದೀಪಾಲಂಕಾರದಿಂದ ಮೈಸೂರು ಕಂಗೊಳಿಸುತ್ತಿದ್ದು, ದೀಪಾಲಂಕಾರ ನೋಡಲು ಜನಸಾಗರ ಹುರಿದು ಬರುತ್ತಿದೆ. ಮೈಸೂರು ರಸ್ತೆಗಳು ಜನರಿಂದ ತುಂಬಿ ತುಳುಕುತ್ತಿವೆ.

ಬೆಟ್ಟದ ಹೂವು ಸಿನಿಮಾ ಉದ್ಘಾಟನೆ ಮಾಡಿದ ಅಶ್ವಿನಿ ಪುನೀತ್ ರಾಜ್ಕುಮಾರ್

ಬೆಟ್ಟದ ಹೂವು ಸಿನಿಮಾ ಉದ್ಘಾಟನೆ ಮಾಡಿದ ಮೂಲಕ ದಸರಾ ಚಲನ ಚಿತ್ರೋತ್ಸವಕ್ಕೆ ಅಶ್ವಿನಿ ಪುನೀತ್ ರಾಜ್​ಕುಮಾರ ಉದ್ಘಾಟನೆ ಮಾಡಿದರು. ಶಕ್ತಿಧಾಮ ಮಕ್ಕಳು ಕೂಡ ದಸರಾ ಚಲನ ಚಿತ್ರೋತ್ಸವದಲ್ಲಿ ಭಾಗವಹಿಸಬೇಕಿತ್ತು. ಆದರೆ ಕಾರಣಾಂತರಗಳಿಂದ ಬರಲಿಲ್ಲ. ಬದಲಾಗಿ ಕಾಲೇಜ್ ಸ್ಟುಡೇಂಟ್ಸ್ ಜೊತೆ ಅಶ್ವಿನಿ ಸಿನಿಮಾ ನೋಡಿದರು. 5 ನಿಮಿಷ ಸಿನಿಮಾ ನೋಡಿ ಅಶ್ವಿನಿ ಹೊರಟರು. ಇಂದು ಸಂಜೆ 6.30ಕ್ಕೆ ಅಪ್ಪು ನಮನ ಹೆಸರಿನ ಕಾರ್ಯಕ್ರಮದೊಂದಿಗೆ ಯುವ ದಸರಾ ಉದ್ಘಾಟನೆಯಾಗಲಿದ್ದು, ಡಾ. ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿ ಉದ್ಘಾಟನೆ ಮಾಡಲಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಗಾಯಕರಾದ ಕುನಾಲ್ ಗಾಂಜಾವಾಲ, ವಿಜಯಪ್ರಕಾಶ್ ಗಾಯನವಿರಲಿದೆ. ಅಪ್ಪು ಸಿನಿಮಾದ ಹಾಡುಗಳಿಗೆ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ನೃತ್ಯ ಮಾಡಲಿದ್ದಾರೆ. ಈ ಬಾರಿಯ ಯುವ ದಸರಾ ಡಾ. ಪುನೀತ್ ರಾಜಕುಮಾರಗೆ ಅರ್ಪಣೆ ಆಗಲಿದೆ.

‘ದಸರಾ ದರ್ಶನ’ KSRTC ಬಸ್​ಗಳಿಗೆ ಚಾಲನೆ

‘ದಸರಾ ದರ್ಶನ’ KSRTC ಬಸ್​ಗಳಿಗೆ ಬಿಜೆಪಿ ಶಾಸಕ ಎಸ್​.ಎ.ರಾಮದಾಸ್​ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಚಾಲನೆ ನೀಡಿದರು. 3 ದಿನ ದಸರಾ ದರ್ಶನಕ್ಕೆ ಒಟ್ಟು 81 ವಿಶೇಷ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ನಿತ್ಯ ಮೈಸೂರಿನ 1 ತಾಲೂಕಿಗೆ ಮೂರು ಬಸ್​​ಗಳ ನಿಯೋಜನೆ ಮಾಡಿದ್ದು, 3 ದಿನಗಳಲ್ಲಿ 4,455 ಜನರಿಗೆ ದಸರಾ ತೋರಿಸುವ ನಿರ್ಧರಿಸಲಾಗಿದೆ. 9.30ಕ್ಕೆ ಕೆ.ಎಸ್.ಆರ್.ಟಿ.ಸಿ ಚಾಲನೆ  ಕಾರ್ಯಕ್ರಮಕ್ಕೆ ಸಮಯ ನಿಗದಿಯಾಗಿತ್ತು. ಆದರೆ ಉಸ್ತುವಾರಿ ಸಚಿವರಿಗಾಗಿ ಕಾದು ಕಾದು ಶಾಸಕ ಹಾಗೂ ಅಧಿಕಾರಿಗಳು ಸುಸ್ತಾದರು. ವಿಶ್ವ ವಿಖ್ಯಾತ ದಸರಾ ನೋಡಲು ಜಿಲ್ಲಾಡಳಿತ ವಿಶೇಷ ಬಸ್​ಗಳ ವ್ಯವಸ್ಥೆ ಮಾಡಿದೆ. ಸ್ಥಳೀಯ ಶಾಸಕ ರಾಮದಾಸ್ ಬಂದು ಒಂದು ಗಂಟೆಯಾದರು ಸಚಿವ ಸ್ಥಳಕ್ಕೆ ಬಂದಿರಲಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್