AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ಕುಟುಂಬದಲ್ಲಿ ಸುಖ ಸಮೃದ್ಧಿ ನೆಲೆಸಲು ಮನೆಯಿಂದ ಈ ವಸ್ತುಗಳನ್ನು ಹೊರಗಿಡಿ

ಹೊಸ ವರ್ಷದ ಆರಂಭಕ್ಕೂ ಮುನ್ನ ನಿಮ್ಮ ಮನೆಯನ್ನು ವಾಸ್ತು ಪ್ರಕಾರ ಸ್ವಚ್ಛಗೊಳಿಸುವುದು ಅತ್ಯಂತ ಮುಖ್ಯ. ಒಣಗಿದ ಸಸ್ಯಗಳು, ಒಡೆದ ವಸ್ತುಗಳು, ಹಳೆಯ ಬಟ್ಟೆಗಳು ಮತ್ತು ಮುರಿದ ಗಡಿಯಾರಗಳಿದ್ದರೆ ತೆಗೆದುಹಾಕಿ. ಇವು ಮನೆಯೊಳಗೆ ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತವೆ ಮತ್ತು ಬಡತನಕ್ಕೆ ಕಾರಣವಾಗಬಹುದು ಎಂದು ವಾಸ್ತುಶಾಸ್ತ್ರ ಹೇಳುತ್ತದೆ.

Vastu Tips: ಕುಟುಂಬದಲ್ಲಿ ಸುಖ ಸಮೃದ್ಧಿ ನೆಲೆಸಲು ಮನೆಯಿಂದ ಈ ವಸ್ತುಗಳನ್ನು ಹೊರಗಿಡಿ
New Year, New Home
ಅಕ್ಷತಾ ವರ್ಕಾಡಿ
|

Updated on: Dec 28, 2024 | 5:23 PM

Share

ಹೊಸ ವರ್ಷ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಹೊಸ ವರ್ಷದಲ್ಲಿ ನಿಮ್ಮ ಮನೆಯಲ್ಲಿ ಸಂತೋಷ ಸಮೃದ್ಧಿ ನೆಲೆಸಲು ಬಯಸಿದರೆ ವಾಸ್ತುಶಾಸ್ತ್ರಜ್ಞರು ಹೇಳುವ ಈ ಸಲಹೆಗಳನ್ನು ಅನುಸರಿಸುವುದು ಮುಖ್ಯ. ವಾಸ್ತು ಪ್ರಕಾರ ಮನೆಯಿಂದ ಕೆಲ ವಸ್ತುಗಳನ್ನು ಹೊರಗಿಡಬೇಕು. ಅಂತಹ ವಸ್ತುಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಹೊಸ ವರ್ಷದ ಆರಂಭದ ಮೊದಲು, ಒಣ, ಕೊಳೆತ ಮತ್ತು ಒಣಗಿದ ಸಸ್ಯಗಳನ್ನು ಮನೆಯಿಂದ ತೆಗೆದುಹಾಕಬೇಕು. ಹಾಗೆಯೇ ಒಡೆದ ಯಾವುದೇ ವಸ್ತುವನ್ನು ಮನೆಯಲ್ಲಿ ಇಡಬೇಡಿ. ಸಸ್ಯಗಳನ್ನು ಸಂತೋಷ ಮತ್ತು ಶಾಂತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಒಣ ಸಸ್ಯಗಳು ಮನೆಯಲ್ಲಿ ನಕಾರಾತ್ಮಕತೆಯನ್ನು ಹರಡುತ್ತವೆ.

ನಿಮ್ಮ ವಾರ್ಡ್ರೋಬ್​ನಲ್ಲಿ ಹರಿದ ಹಳೆಯ ಬಟ್ಟೆಗಳಿದ್ದರೆ ಮೊದಲು ಅದನ್ನು ತೆಗೆದು ಮನೆಯಿಂದ ಹೊರಗಿಡಿ. ವಾಸ್ತು ಶಾಸ್ತ್ರದ ಪ್ರಕಾರ, ಹಳೆಯ ಹರಿದ ಬಟ್ಟೆಗಳನ್ನು ಇಟ್ಟುಕೊಳ್ಳುವುದು ಮನೆಯಲ್ಲಿ ಬಡತನವನ್ನು ತರುತ್ತದೆ ಎಂದು ನಂಬಲಾಗಿದೆ.

ನಿಮ್ಮ ಮನೆಯಲ್ಲಿಯೂ ಸಹ ಮುರಿದ ಅಥವಾ ನಡೆಯದ ಗಡಿಯಾರವಿದ್ದರೆ, ತಕ್ಷಣ ಅದನ್ನು ಸರಿಪಡಿಸಿ ಅಥವಾ ತೆಗೆದುಹಾಕಿ. ಗಡಿಯಾರವು ವ್ಯಕ್ತಿಯ ಭವಿಷ್ಯಕ್ಕೆ ಸಂಬಂಧಿಸಿದೆ, ವಾಸ್ತು ಪ್ರಕಾರ, ನಿಂತ ಗಡಿಯಾರವನ್ನು ಮನೆಯಲ್ಲಿ ಇಡುವುದರಿಂದ ಉದ್ವಿಗ್ನತೆಯ ವಾತಾವರಣವನ್ನು ಸೃಷ್ಟಿಸುತ್ತದೆ ಮತ್ತು ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: 2025ರಲ್ಲಿ ಈ ರಾಶಿಯವರ ಕಾರು-ಮನೆ ಖರೀದಿಸುವ ಕನಸು ನನಸಾಗಲಿದೆ

ಹೊಸ ವರ್ಷ ಪ್ರಾರಂಭವಾಗುವ ಮೊದಲು, ನಿಮ್ಮ ಮನೆಯಿಂದ ಒಡೆದ ಗಾಜನ್ನು ತೆಗೆದುಹಾಕಿ. ನಿಮ್ಮ ಮನೆಯಲ್ಲಿ ಯಾವುದೇ ಗಾಜು ಅಥವಾ ಕನ್ನಡಿ ಒಡೆದರೆ, ತಕ್ಷಣ ಅದನ್ನು ಎಸೆಯಿರಿ. ವಾಸ್ತು ಪ್ರಕಾರ ಒಡೆದ ಗಾಜುಗಳನ್ನು ಮನೆಯಲ್ಲಿ ಇಡಬಾರದು. ಇದು ಮನೆಯಲ್ಲಿ ಬಡತನವನ್ನು ತರುತ್ತದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ