AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarnath Yatra 2025: ಪಹಲ್ಗಾಮ್ ನಿಂದ ಆರಂಭವಾಗುವ ಅಮರನಾಥ ಯಾತ್ರೆ ರದ್ದಾಗಲಿದೆಯೇ?

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ 26 ಜನರು ಸಾವನ್ನಪ್ಪಿದ್ದಾರೆ. ಇದರಿಂದ ಅಮರನಾಥ ಯಾತ್ರೆಯ ಮೇಲೆ ಭಯದ ವಾತಾವರಣ ನಿರ್ಮಾಣವಾಗಿದೆ. ಆದರೂ, ಯಾತ್ರೆಯನ್ನು ರದ್ದುಗೊಳಿಸದಿರಲು ನಿರ್ಧರಿಸಲಾಗಿದೆ. ಹೆಚ್ಚಿನ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಸರ್ಕಾರ ತಿಳಿಸಿದೆ. ಪ್ರವಾಸಿಗರ ಭಯವನ್ನು ನಿವಾರಿಸಲು ಹಾಗೂ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

Amarnath Yatra 2025: ಪಹಲ್ಗಾಮ್ ನಿಂದ ಆರಂಭವಾಗುವ ಅಮರನಾಥ ಯಾತ್ರೆ ರದ್ದಾಗಲಿದೆಯೇ?
Amaranth Yatra
Follow us
ಅಕ್ಷತಾ ವರ್ಕಾಡಿ
|

Updated on:Apr 25, 2025 | 10:38 AM

ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ನೆಲೆಗೊಂಡಿರುವ ಸುಂದರವಾದ ಪಟ್ಟಣ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಕ್ರೂರ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರು ಮತ್ತು ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ಸೇರಿದಂತೆ 26 ಜನರು ಸಾವನ್ನಪ್ಪಿದ್ದಾರೆ. ಕಣಿವೆಯಲ್ಲಿ ಇನ್ನೂ ಭಯದ ವಾತಾವರಣವಿದ್ದು, ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ. ಆದರೂ, ಜನರ ಮನಸ್ಸಿನಲ್ಲಿ ಇನ್ನೂ ಒಂದು ಭಯ ಉಳಿದಿದೆ.  ಮತ್ತೊಂದೆಡೆ, ಅಮರನಾಥ ಯಾತ್ರೆ ಕೂಡ ಇನ್ನು ಮೂರು ತಿಂಗಳ ನಂತರ ನಡೆಯಲಿದೆ. ಈಗ ಅಮರನಾಥ ಯಾತ್ರೆ ನಡೆಯುತ್ತದೆಯೇ ಅಥವಾ ಇಲ್ಲವೇ ಎಂಬ ಪ್ರಶ್ನೆಗಳು ಎದ್ದಿವೆ?

ಭಯೋತ್ಪಾದಕ ದಾಳಿಯ ಹೊರತಾಗಿಯೂ, ಜುಲೈ 3 ರಿಂದ ಪ್ರಾರಂಭವಾಗುವ ಅಮರನಾಥ ಯಾತ್ರೆಯನ್ನು ರದ್ದುಗೊಳಿಸಲಾಗುವುದಿಲ್ಲ. ಭಕ್ತರು ಭಯಪಡುವ ಅಗತ್ಯವಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಹೇಳಿದ್ದಾರೆ. ಮೂಲಗಳ ಪ್ರಕಾರ, ಜುಲೈ 3 ರಿಂದ ಪ್ರಾರಂಭವಾಗುವ ಅಮರನಾಥ ಯಾತ್ರೆಗೆ ಹೊಸ ಭದ್ರತಾ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ತಿಳಿದುಬಂದಿದೆ.

24 ಗಂಟೆಗಳ ಕಣ್ಗಾವಲು:

ವಿಶೇಷ ಕೇಂದ್ರ ಕಮಾಂಡ್ ಕೇಂದ್ರವು ದಿನದ 24 ಗಂಟೆಗಳ ಕಾಲ ಮೇಲ್ವಿಚಾರಣೆ ಮಾಡಲಿದ್ದು, ಪಹಲ್ಗಾಮ್-ಸೋನ್‌ಮಾರ್ಗ್‌ನಲ್ಲಿ ಪ್ರವಾಸಿಗರ ಸಂಚಾರದ ಎಲ್ಲಾ ಸಾರಿಗೆ ಶಿಬಿರಗಳಲ್ಲಿ ಬಿಗಿ ಭದ್ರತೆ ಇರುತ್ತದೆ. ಡ್ರೋನ್‌ಗಳು ಮತ್ತು ಇತರ ರೀತಿಯ ಎಲೆಕ್ಟ್ರಾನಿಕ್ ಕಣ್ಗಾವಲುಗಳನ್ನು ಮತ್ತಷ್ಟು ಹೆಚ್ಚಿಸಲಾಗುವುದು. ಯಾತ್ರೆಯ ಸಮಯದಲ್ಲಿ ಸಾಮಾನ್ಯವಾಗಿ ನಿಯೋಜಿಸಲಾಗುವ ಒಂದೂವರೆ ಲಕ್ಷ ಭದ್ರತಾ ಸಿಬ್ಬಂದಿಯ ಸಂಖ್ಯೆಯನ್ನು ಸಹ ಹೆಚ್ಚಿಸಲಾಗುವುದು ಎಂದು ಚೌಧರಿ ತಿಳಿಸಿದ್ದಾರೆ.

ಇದನ್ನೂ ಓದಿ: ಐದು ವರ್ಷಗಳ ನಂತರ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭ

ಭಯೋತ್ಪಾದಕ ದಾಳಿ ಅಮರನಾಥ ಯಾತ್ರೆಯ ಮೇಲೆ ಹೇಗೆ ಪರಿಣಾಮ ಬೀರಲಿದೆ?

ವಾಸ್ತವವಾಗಿ, ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯ ಭಕ್ತರು ಅಮರನಾಥ ಯಾತ್ರೆಗೆ ಬರುತ್ತಾರೆ. ಇದು ಅಮರನಾಥ ಯಾತ್ರೆಯ ಮೇಲೆ ಮಾತ್ರವಲ್ಲದೆ ವೈಷ್ಣೋದೇವಿ ಧಾಮ ಯಾತ್ರೆಯ ಮೇಲೂ ಪರಿಣಾಮ ಬೀರಬಹುದು. ಅಮರನಾಥ ಯಾತ್ರೆಯು ಸಮುದ್ರ ಮಟ್ಟದಿಂದ ಸುಮಾರು 13,000 ಅಡಿ ಎತ್ತರದಲ್ಲಿರುವ ಪವಿತ್ರ ಗುಹೆಗೆ ಎರಡು ಮಾರ್ಗಗಳನ್ನು ಒದಗಿಸುತ್ತದೆ. ಮೊದಲ ಮಾರ್ಗವು ದಕ್ಷಿಣ ಕಾಶ್ಮೀರದ ಗಂಡೇರ್ಬಲ್ ಜಿಲ್ಲೆಯ ಬಾಲ್ಟಾಲ್‌ನಿಂದ ಮತ್ತು ಎರಡನೆಯದು ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನಿಂದ ಪ್ರಾರಂಭವಾಗುತ್ತದೆ. ಇದೀಗ ಪಹಲ್ಗಾಮ್‌ ಹೆಸರೇ ಜನರನ್ನು ಭಯಭೀತಗೊಳಿಸಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:09 am, Thu, 24 April 25

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​