Vasthu Tips: ಮನೆಯ ಈ ಮೂಲೆಯಲ್ಲಿ ಈ ಪಕ್ಷಿಯ ಗರಿ ತಂದಿಡಿ, ಅದೃಷ್ಟವೇ ಬದಲಾಗಲಿದೆ

ವಾಸ್ತು ಶಾಸ್ತ್ರ ಮತ್ತು ಶಕುನ ಶಾಸ್ತ್ರದ ಆಧಾರದ ಮೇಲೆ ಕೆಲವು ಪಕ್ಷಿಗಳ ಗರಿಗಳನ್ನು ಮನೆಯಲ್ಲಿ ಇಡುವುದು ತುಂಬಾ ಶುಭ ಎಂದು ನಂಬಲಾಗಿದೆ. ಪಾರಿವಾಳದ ಗರಿಗಳು ಮನೆಯಲ್ಲಿ ಲಕ್ಷ್ಮೀ ದೇವಿಯ ಆಗಮನ ಮತ್ತು ಸಂಪತ್ತನ್ನು ಸೂಚಿಸುತ್ತವೆ. ಬಿದ್ದ ಗರಿಯನ್ನು ಬಿಳಿ ಬಟ್ಟೆಯಲ್ಲಿ ಕಟ್ಟಿ ಇಡುವುದರಿಂದ ಸಂತೋಷ ಮತ್ತು ಧನಾತ್ಮಕ ಶಕ್ತಿ ಹೆಚ್ಚುತ್ತದೆ. ಆದರೆ, ಎಂದಿಗೂ ಹಕ್ಕಿಯನ್ನು ನೋಯಿಸಿ ಗರಿ ಕಿತ್ತು ತಂದಿಡಬೇಡಿ.

Vasthu Tips: ಮನೆಯ ಈ ಮೂಲೆಯಲ್ಲಿ ಈ ಪಕ್ಷಿಯ ಗರಿ ತಂದಿಡಿ, ಅದೃಷ್ಟವೇ ಬದಲಾಗಲಿದೆ
Pigeon Feather Benefits

Updated on: May 29, 2025 | 8:16 AM

ವಾಸ್ತು ಶಾಸ್ತ್ರ ಮತ್ತು ಶಕುನ ಶಾಸ್ತ್ರದ ಆಧಾರದ ಮೇಲೆ ಕೆಲವು ಪಕ್ಷಿಗಳ ಗರಿಗಳನ್ನು ಮನೆಯಲ್ಲಿ ಇಡುವುದು ತುಂಬಾ ಶುಭ ಎಂದು ನಂಬಲಾಗಿದೆ. ಇದಲ್ಲದೇ ಕೆಲ ಹಕ್ಕಿಗಳ ರೆಕ್ಕೆಗಳು ಮನೆಯಲ್ಲಿ ಕಂಡುಬಂದರೆ ನಿಮ್ಮ ಅದೃಷ್ಟ ಸುಧಾರಿಸಲು ಹೆಚ್ಚು ಸಮಯ ಬೇಕಾಗಿಲ್ಲ ಎಂದರ್ಥ. ಅಂದಹಾಗೇ ಇಂದು ಪಾರಿವಾಳದ ಗರಿಯನ್ನು ಮನೆಯಲ್ಲಿ ಇಡುವುದರಿಂದ ಉಂಟಾಗುವ ಪ್ರಯೋಜನವೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಲಕ್ಷ್ಮಿಯ ಆಶೀರ್ವಾದ:

ವಾಸ್ತು ಶಾಸ್ತ್ರದ ಪ್ರಕಾರ ಪಾರಿವಾಳದ ಗರಿಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಮನೆಯಲ್ಲಿ ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಯು ಸದಾ ನೆಲೆಸಿರುತ್ತಾಳೆ ಎಂದು ನಂಬಲಾಗಿದೆ. ಇದರಿಂದಾಗಿ ನಿಮ್ಮ ಮನೆಯಲ್ಲಿ ಎಂದಿಗೂ ಹಣದ ಕೊರತೆ ಬರುವುದಿಲ್ಲ. ಜೊತೆಗೆ ನೀವು ಕೈಗೊಳ್ಳುವ ಪ್ರತಿಯೊಂದು ಕೆಲಸದಲ್ಲೂ ನೀವು ಹೆಚ್ಚಿನ ಪ್ರಗತಿಯನ್ನು ಸಾಧಿಸುವಿರಿ ಎಂದು ಬಲವಾಗಿ ನಂಬಲಾಗಿದೆ.

ಸಂತೋಷ ವೃದ್ಧಿ:

ವಾಸ್ತು ಶಾಸ್ತ್ರದ ಪ್ರಕಾರ, ಬಿದ್ದ ಪಾರಿವಾಳದ ಗರಿಯನ್ನು ಎತ್ತಿಕೊಂಡು, ಅದನ್ನು ಬಿಳಿ ಬಟ್ಟೆಯಲ್ಲಿ ಕಟ್ಟಿ ಮನೆಯಲ್ಲಿ ಇಡಬೇಕು. ಹೀಗೆ ಮಾಡುವುದರಿಂದ ಮನೆಯಲ್ಲಿ ಸಂತೋಷ ಹರಡುತ್ತದೆ. ಲಕ್ಷ್ಮಿ ದೇವಿಯ ಆಶೀರ್ವಾದವೂ ಸಿಗುತ್ತದೆ ಎಂದು ನಂಬಲಾಗಿದೆ. ಇದಲ್ಲದೆ, ಮನೆಯಲ್ಲಿ ನಕಾರಾತ್ಮಕ ವಿಷಯಗಳು ಮತ್ತು ಶಕ್ತಿಗಳು ಮನೆಯಿಂದ ದೂರವಿರುತ್ತವೆ. ಮನೆಯಲ್ಲಿ ಉದ್ಭವಿಸುವ ಸಮಸ್ಯೆಗಳು ಸಹ ನಿವಾರಣೆಯಾಗುತ್ತವೆ ಎಂದು ನಂಬಲಾಗಿದೆ.

ಇದನ್ನೂ ಓದಿ
ಈ ದೇವಾಲಯಕ್ಕೆ ಗಂಡ ಹೆಂಡತಿ ಒಟ್ಟಿಗೆ ಹೋಗುವಂತಿಲ್ಲ, ಯಾಕೆ ಗೊತ್ತಾ?
ಈ ಪ್ರಾಣಿಗಳು ನಿಮ್ಮ ಕನಸಿನಲ್ಲಿ ಪದೇ ಪದೇ ಕಾಣಿಸಿಕೊಂಡರೆ ಅದೃಷ್ಟದ ಸೂಚನೆ
ಕೇದಾರನಾಥ ಯಾತ್ರೆಯ ಸಮಯದಲ್ಲಿ ಈ ವಸ್ತುಗಳನ್ನು ತೆಗೆದುಕೊಂಡು ಹೋಗಲೇಬಾರದು
ವಾರದಲ್ಲಿ ಈ ಎರಡು ದಿನ ಬಟ್ಟೆ ಒಗೆಯಲೇಬೇಡಿ; ಕಷ್ಟಗಳು ತಪ್ಪಿದಲ್ಲ!

ಇದನ್ನೂ ಓದಿ: ಮನೆಯಲ್ಲಿ ಪ್ರತಿನಿತ್ಯ ಜಗಳ ನೆಮ್ಮದಿ ಕೆಡಿಸುತ್ತಿದೆಯೇ? ಸರಳ ಆಧ್ಯಾತ್ಮಿಕ ಪರಿಹಾರ ಇಲ್ಲಿದೆ

ಪಾರಿವಾಳದ ಗರಿಯನ್ನು ಇಡುವ ಸರಿಯಾದ ದಿಕ್ಕು ಯಾವುದು?

ವಾಸ್ತು ಶಾಸ್ತ್ರದ ಪ್ರಕಾರ, ಪಾರಿವಾಳದ ಗರಿಯನ್ನು ಮನೆಯ ದಕ್ಷಿಣ ಮೂಲೆಯಲ್ಲಿ, ಅಡುಗೆಮನೆಯ ಉತ್ತರ ಮೂಲೆಯಲ್ಲಿ ಮತ್ತು ಮಲಗುವ ಕೋಣೆಯ ಪೂರ್ವ ಮೂಲೆಯಲ್ಲಿ ಯಾರಿಗೂ ಕಾಣದಂತೆ ಇಡುವುದು ಉತ್ತಮ. ಇನ್ನೊಂದು ಮುಖ್ಯ ವಿಷಯವೆನೆಂದರೆ ಪಾರಿವಾಳದಿಂದ ಬಿದ್ದ ಗರಿಯನ್ನು ತಂದಿಡಿ, ಬದಲಾಗಿ ಬಲವಂತವಾಗಿ ಹಕ್ಕಿಯನ್ನು ನೋಯಿಸಿ ಗರಿಯನ್ನು ತರುವುದು ಶುಭವಲ್ಲ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us