AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pitru Paksha 2021: ಪಿತೃ ಪಕ್ಷದ ವೇಳೆ ಪೂರ್ವಜರಿಗೆ ಗೌರವ ಸಲ್ಲಿಸುವುದೇಕೆ?

ಪಿತೃ ಪಕ್ಷ 2021: ಪಿತೃ ಪಕ್ಷದ ಸಮಯದಲ್ಲಿ 15 ದಿನಗಳ ಕಾಲ ಪೂರ್ವಜರು ತಮ್ಮ ಕುಟುಂಬದೊಂದಿಗೆ ಇರಲು ಭೂಮಿಗೆ ಬರುತ್ತಾರೆ ಎಂಬ ನಂಬಿಕೆಗಳಿವೆ. ಹೀಗಾಗಿ ಈ ಸಮಯಲ್ಲಿ ಪೂರ್ವಜರನ್ನು ಸಂತೋಷಪಡಿಸುವಂತಹ ಕೆಲಸ ಮಾಡಬೇಕು.

Pitru Paksha 2021: ಪಿತೃ ಪಕ್ಷದ ವೇಳೆ ಪೂರ್ವಜರಿಗೆ ಗೌರವ ಸಲ್ಲಿಸುವುದೇಕೆ?
ಪಿತೃಪಕ್ಷ
TV9 Web
| Updated By: ಆಯೇಷಾ ಬಾನು|

Updated on: Sep 20, 2021 | 2:57 PM

Share

ಭಾದ್ರಪದ ತಿಂಗಳ ಹುಣ್ಣಿಮೆ ಅಂದರೆ ಪಿತೃ ಪಕ್ಷ ಆರಂಭ. ಹಿಂದೂ ಸಂಪ್ರದಾಯದಲ್ಲಿ ಪಿತೃ ಪಕ್ಷವನ್ನು ಬಹಳ ಮುಖ್ಯವೆಂದು ಹೇಳಲಾಗುತ್ತೆ. ಪ್ರತಿ ವರ್ಷ 15 ದಿನಗಳ ಕಾಲ ಪೂರ್ವಜರಿಗೆ ಗೌರವ ಸಲ್ಲಿಸಲಾಗುತ್ತೆ. ಈ 15 ದಿನಗಳ ಅವಧಿಯನ್ನು ಪಿತೃ ಪಕ್ಷ ಅಥವಾ ಚಾತುರ್ಮಾಸದ ಶ್ರಾದ್ಧ ಎಂದು ಕರೆಯಲಾಗುತ್ತದೆ. ಒಬ್ಬ ವ್ಯಕ್ತಿಯು ಸತ್ತ ನಂತರ ಅವನ ಆತ್ಮವು ಅಲೆದಾಡುತ್ತಲಿರುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಅವರ ಆತ್ಮಗಳ ಶಾಂತಿಗಾಗಿ ಪಿಂಡ ದಾನ, ತರ್ಪಣ, ಶ್ರಾದ್ಧವನ್ನು ಮಾಡುತ್ತಾರೆ. ಈ ರೀತಿ ಪೂರ್ವಜನ ಆರ್ಶೀವಾದ ಪಡೆಯಬಹುದು ಎನ್ನುತ್ತಾರೆ.

ಪಿತೃ ಪಕ್ಷದ ಸಮಯದಲ್ಲಿ 15 ದಿನಗಳ ಕಾಲ ಪೂರ್ವಜರು ತಮ್ಮ ಕುಟುಂಬದೊಂದಿಗೆ ಇರಲು ಭೂಮಿಗೆ ಬರುತ್ತಾರೆ ಎಂಬ ನಂಬಿಕೆಗಳಿವೆ. ಹೀಗಾಗಿ ಈ ಸಮಯಲ್ಲಿ ಪೂರ್ವಜರನ್ನು ಸಂತೋಷಪಡಿಸುವಂತಹ ಕೆಲಸ ಮಾಡಬೇಕು.

ಪಿತೃ ಪಕ್ಷ ಯಾವಾಗ ಈ ವರ್ಷ, ಪಿತೃ ಪಕ್ಷವು ಸೆಪ್ಟೆಂಬರ್ 20 ರಂದು ಆರಂಭವಾಗಿ ಅಕ್ಟೋಬರ್ 6 ರಂದು ಕೊನೆಗೊಳ್ಳುತ್ತದೆ. ಪಿತೃ ಪಕ್ಷದ ಕೊನೆಯ ದಿನವೆಂದರೆ ಸರ್ವ ಪಿತೃ ಅಮಾವಾಸ್ಯೆ ಅಥವಾ ಮಹಾಲಯ ಅಮಾವಾಸ್ಯೆ. ಈ ಅವಧಿಯಲ್ಲಿ ಅತ್ಯಂತ ಮಹತ್ವದ ದಿನವೆಂದು ಪರಿಗಣಿಸಲಾಗಿದೆ.

ಶ್ರಾದ್ಧದ ಅರ್ಥ ಈ ಪದವನ್ನು ಎರಡು ಸಂಸ್ಕೃತ ಪದಗಳಿಂದ ತೆಗೆದುಕೊಳ್ಳಲಾಗಿದೆ. “ಸತ್” (ಸತ್ಯ) ಮತ್ತು “ಆಧಾರ್” (ಆಧಾರ). ಆದ್ದರಿಂದ, ಶ್ರಾದ್ಧವು ಅತ್ಯಂತ “ಶ್ರಾದ್ಧ” ಮತ್ತು ಭಕ್ತಿಯಿಂದ ಮಾಡಿದ ಕಾಣಿಕೆಯನ್ನು ಸೂಚಿಸುತ್ತದೆ.

ಪಿತೃ ಪಕ್ಷ ಮಹತ್ವ ಪಿತೃ ಪಕ್ಷವು ಚಂದ್ರನ ಚಕ್ರದ ಕ್ಷೀಣಿಸುವಿಕೆಯ ಆರಂಭವನ್ನು ಸೂಚಿಸುತ್ತದೆ. ಈ ಅವಧಿಯಲ್ಲಿ, ಸತ್ತವರಿಗೆ ಗೌರವ ಸಲ್ಲಿಸಲು ವಿವಿಧ ಆಚರಣೆಗಳನ್ನು ಮಾಡಲಾಗುತ್ತೆ. ಮೊದಲೇ ಹೇಳಿದಂತೆ, ಸಾವಿನಲ್ಲಿ ಶಾಂತಿ ಕಂಡುಕೊಳ್ಳದವರ ಆತ್ಮವು ತಮ್ಮ ಕುಟುಂಬದ ಸದಸ್ಯರನ್ನು ಪರೀಕ್ಷಿಸಲು ಭೂಮಿಯ ಸುತ್ತ ಅಲೆದಾಡುತ್ತದೆ ಎಂದು ನಂಬಲಾಗಿದೆ. ಅವರು ಮೋಕ್ಷವನ್ನು ಪಡೆಯಲು ಮತ್ತು ಅವರಿಗೆ ಶಾಂತಿ ನೆಮ್ಮದಿ ನೀಡಲು ಜನರು ಪಿಂಡದಾನವನ್ನು ಮಾಡುತ್ತಾರೆ. ಜ್ಯೋತಿಷ್ಯದ ಪ್ರಕಾರ, ಪಿತೃ ದೋಷದಿಂದ ಬಳಲುತ್ತಿರುವ ಜನರು (ಪಿತೃಗಳ ಶಾಪ) ಶ್ರಾದ್ಧ ಆಚರಣೆಗಳನ್ನು ಮಾಡಬೇಕು. ಮತ್ತು ಕಾಗೆಗೆ ಆಹಾರವನ್ನು ನೀಡಬೇಕು.

ಇದನ್ನೂ ಓದಿ: Pitru Paksha 2021: ಪಿತೃಪಕ್ಷದ ಮಹತ್ವವೇನು? ಅದನ್ನು ಅರ್ಥಪೂರ್ಣವಾಗಿ ಆಚರಿಸೋದು ಹೇಗೆ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ