AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Visit Karni Mata Temple: ಮೋದಿ ಶೀಘ್ರದಲ್ಲೇ ಭೇಟಿ ನೀಡಲಿರುವ ಕರ್ಣಿ ಮಾತಾ ದೇವಸ್ಥಾನದ ವಿಶೇಷತೆ ಏನು ಗೊತ್ತಾ?

ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ ಬಿಕಾನೇರ್‌ನ ಪ್ರಸಿದ್ಧ ಕರ್ಣಿ ಮಾತಾ ದೇವಸ್ಥಾನಕ್ಕೆ ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆ. ಇಲಿಗಳ ದೇವಸ್ಥಾನವೆಂದು ಪ್ರಸಿದ್ಧವಾದ ಈ ದೇವಾಲಯದ ವಿಶಿಷ್ಟ ಸಂಪ್ರದಾಯಗಳು ಮತ್ತು ಪುರಾಣಗಳಿಂದ ಲಕ್ಷಾಂತರ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ. ಬಿಳಿ ಇಲಿಗಳನ್ನು ಇಲ್ಲಿ ವಿಶೇಷವಾಗಿ ಪೂಜಿಸಲಾಗುತ್ತದೆ. ಪ್ರಧಾನಿಗಳ ಭೇಟಿಯಿಂದ ಈ ದೇವಾಲಯ ಮತ್ತಷ್ಟು ಖ್ಯಾತಿಯನ್ನು ಪಡೆಯಲಿದೆ.

PM Visit Karni Mata Temple: ಮೋದಿ ಶೀಘ್ರದಲ್ಲೇ ಭೇಟಿ ನೀಡಲಿರುವ ಕರ್ಣಿ ಮಾತಾ ದೇವಸ್ಥಾನದ ವಿಶೇಷತೆ ಏನು ಗೊತ್ತಾ?
Pm Modi To Visit Karni Mata Temple
ಅಕ್ಷತಾ ವರ್ಕಾಡಿ
|

Updated on:May 18, 2025 | 9:04 AM

Share

ಪ್ರಧಾನಿ ನರೇಂದ್ರ ಮೋದಿ ಶೀಘ್ರದಲ್ಲೇ ರಾಜಸ್ಥಾನದ ಬಿಕನೇರ್ ಜಿಲ್ಲೆಯಲ್ಲಿರುವ ಪ್ರಸಿದ್ಧ ಕರ್ಣಿ ಮಾತಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಈ ದೇವಾಲಯವು ಹಿಂದೂ ನಂಬಿಕೆಯ ಕೇಂದ್ರವಷ್ಟೇ ಅಲ್ಲ, ಅದರ ವಿಶಿಷ್ಟ ಸಂಪ್ರದಾಯದಿಂದಾಗಿ ದೇಶಾದ್ಯಂತ ಪ್ರಸಿದ್ಧವಾಗಿದೆ. ಈ ದೇವಾಲಯವನ್ನು ಇಲಿಗಳ ದೇವಾಲಯ ಎಂದಯ ಕರೆಯಲಾಗುತ್ತದೆ. ಯಾಕೆಂದರೆ ಇಲ್ಲಿ ಅಪಾರ ಸಂಖ್ಯೆಯ ಕಪ್ಪು ಇಲಿಗಳು ನಿಮಗೆ ಕಾಣಸಿಗುತ್ತದೆ. ಇಲ್ಲಿ ಭಕ್ತರು ಈ ಇಲಿಗಳಿಗೆ ಪ್ರಸಾದವನ್ನು ಅರ್ಪಿಸುತ್ತಾರೆ. ಈ ನೈವೇದ್ಯವನ್ನು ಇಲಿ ತಿಂದರೆ, ಅದನ್ನು ಶುಭ ಸಂಕೇತವೆಂದು ಪರಿಗಣಿಸಲಾಗುತ್ತದೆ.

ದೇವಾಲಯದ ನಂಬಿಕೆಯ ಪ್ರಕಾರ, ಈ ಇಲಿಗಳು ಸಾಮಾನ್ಯ ಜೀವಿಗಳಲ್ಲ. ಈ ಇಲಿಗಳು ಕರ್ಣಿ ಮಾತೆಯ ವಂಶಸ್ಥರು ಮತ್ತು ಅನುಯಾಯಿಗಳ ಪುನರ್ಜನ್ಮಗಳಾಗಿವೆ. ಒಂದು ದಂತಕಥೆಯ ಪ್ರಕಾರ, ಕರ್ಣಿ ಮಾತೆಯ ದತ್ತುಪುತ್ರ ಲಕ್ಷ್ಮಣ, ಕೊಲಾಯತ್ ತಹಸಿಲ್‌ನಲ್ಲಿರುವ ಕಪಿಲ್ ಸರೋವರದಲ್ಲಿ ನೀರು ಕುಡಿಯಲು ಪ್ರಯತ್ನಿಸುವಾಗ ಸರೋವರಕ್ಕೆ ಬಿದ್ದನು. ಆಗ ತಾಯಿ ಕರ್ಣಿಯು ಯಮನನ್ನು ರಕ್ಷಿಸುವಂತೆ ಕೇಳುತ್ತಾಳೆ. ಆರಂಭದಲ್ಲಿ ಯಮ ನಿರಾಕರಿಸಿದರೂ, ಕೊನೆಗೆ ತನ್ನ ಮನಸ್ಸನ್ನು ಬದಲಾಯಿಸಿ ಲಕ್ಷ್ಮಣನೊಂದಿಗೆ ಕರ್ಣಿಯ ಗಂಡು ಸಂತತಿಯನ್ನು ಇಲಿಗಳಾಗಿ ಪುನರ್ಜನ್ಮ ಮಾಡುವುದಾಗಿ ಹೇಳಿದನು. ಅಂದಿನಿಂದ, ಕರ್ಣಿ ಮಾತಾ ದೇವಾಲಯದಲ್ಲಿ ಇಲಿಗಳು ವಾಸಿಸುವ ಸಂಪ್ರದಾಯವಿದೆ.

ಬಿಳಿ ಇಲಿಗಳಿಗೆ ವಿಶೇಷ ಪೂಜೆ:

ಈ ದೇವಾಲಯದಲ್ಲಿ ಕೆಲವು ಬಿಳಿ ಇಲಿಗಳು ಸಹ ಕಂಡುಬರುತ್ತವೆ. ಇವು ಬಹಳ ಅಪರೂಪ. ಈ ಬಿಳಿ ಇಲಿಗಳನ್ನು ಕರ್ಣಿ ಮಾತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅವುಗಳನ್ನು ನೋಡುವುದು ಬಹಳ ಶುಭವೆಂದು ಪರಿಗಣಿಸಲಾಗಿದೆ. ಯಾವುದೇ ಭಕ್ತರು ಬಿಳಿ ಇಲಿಯನ್ನು ನೋಡಿದರೆ ಅವರ ಇಚ್ಛೆಗಳು ಖಂಡಿತವಾಗಿಯೂ ಈಡೇರುತ್ತವೆ ಎಂದು ನಂಬಲಾಗಿದೆ.

ಇದನ್ನೂ ಓದಿ
Image
ಹೆಣ್ಣಿನ ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ
Image
ಈ ನಾಲ್ಕು ರಾಶಿಯವರಿಗೆ ಚಿನ್ನ ಧರಿಸುವುದು ಅತ್ಯಂತ ಶುಭ
Image
ಮೇ 8 ಮೋಹಿನಿ ಏಕಾದಶಿ; ಪೂಜಾ ವಿಧಾನ ಮತ್ತು ಮಹತ್ವ
Image
ಶಿವನ ವಿಶೇಷ ಅನುಗ್ರಹ ಪಡೆಯಲು ಈ ಸರಳ ಪರಿಹಾರವನ್ನು ಪ್ರಯತ್ನಿಸಿ

ಇದನ್ನೂ ಓದಿ: ಸಂಖ್ಯಾಶಾಸ್ತ್ರದಲ್ಲಿ ಸಂಖ್ಯೆ 8ರ ಮಹತ್ವವೇನು? ಈ ಸಂಖ್ಯೆಗೂ ಶನಿಗೂ ಏನು ಸಂಬಂಧ?

ಕರ್ಣಿ ಮಾತೆಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ:

ಪ್ರಧಾನಿ ನರೇಂದ್ರ ಮೋದಿಯವರು ಕರ್ಣಿ ಮಾತಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವುದರಿಂದ, ಈ ವಿಶೇಷ ದೇವಾಲಯ ಮತ್ತು ಅದರ ಸಂಪ್ರದಾಯಗಳು ದೇಶದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಜನರ ಗಮನ ಸೆಳೆಯುತ್ತಿವೆ. ಈ ಪ್ರವಾಸವು ಧಾರ್ಮಿಕ ಮಹತ್ವವನ್ನು ಮಾತ್ರವಲ್ಲದೆ ರಾಜಸ್ಥಾನದ ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:03 am, Sun, 18 May 25

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?