AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕ ಮಾಸದಲ್ಲಿ ಬರುವ ಪರಮ/ಪುರುಷೋತ್ತಮ ಏಕಾದಶಿಯ ಪೂಜಾ ಸಮಯ? ಆಚರಣೆಗಳ ಬಗ್ಗೆ ಇಲ್ಲಿದೆ ಮಾಹಿತಿ

3 ವರ್ಷಕ್ಕೊಮ್ಮೆ ಬರುವ ಈ ದಿನದಂದು ವಿಷ್ಣುವನ್ನು ಆರಾಧನೆ ಮಾಡುವ ಮೂಲಕ, ವ್ರತಾಚರಣೆಗಳನ್ನು ಕೈಗೊಳ್ಳುವುದರಿಂದ ಕುಬೇರನ ಅನುಗ್ರಹವಾಗುತ್ತದೆ ಎಂಬ ನಂಬಿಕೆ ಇದೆ. ಜೊತೆಗೆ ಹಿಂದೆ ಮಾಡಿದ ಪಾಪಕರ್ಮಗಳಿಂದ ಮುಕ್ತಿ ಸಿಕ್ಕಿ ಪುಣ್ಯಫಲ ಪ್ರಾಪ್ತಿಯಾಗುತ್ತದೆ.

ಅಧಿಕ ಮಾಸದಲ್ಲಿ ಬರುವ ಪರಮ/ಪುರುಷೋತ್ತಮ ಏಕಾದಶಿಯ ಪೂಜಾ ಸಮಯ? ಆಚರಣೆಗಳ ಬಗ್ಗೆ ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 11, 2023 | 5:10 AM

Share

ಅಧಿಕ ಮಾಸದಲ್ಲಿ ಬರುವ ಏಕಾದಶಿಯನ್ನು ಪರಮ/ಪುರುಷೋತ್ತಮ ಅಥವಾ ಕಮಲ ಏಕಾದಶಿ ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ಪ್ರತಿ ಏಕಾದಶಿಯಂದು ಕೃಷ್ಣನನ್ನು ಆರಾಧಿಸುವುದು ರೂಢಿ. ಅಂತೆಯೇ 3 ವರ್ಷಕ್ಕೊಮ್ಮೆ ಬರುವ ಈ ದಿನದಂದು ವಿಷ್ಣುವನ್ನು ಆರಾಧನೆ ಮಾಡುವ ಮೂಲಕ, ವ್ರತಾಚರಣೆಗಳನ್ನು ಕೈಗೊಳ್ಳುವುದರಿಂದ ಕುಬೇರನ ಅನುಗ್ರಹವಾಗುತ್ತದೆ ಎಂಬ ನಂಬಿಕೆ ಇದೆ. ಜೊತೆಗೆ ಹಿಂದೆ ಮಾಡಿದ ಪಾಪಕರ್ಮಗಳಿಂದ ಮುಕ್ತಿ ಸಿಕ್ಕಿ ಪುಣ್ಯಫಲ ಪ್ರಾಪ್ತಿಯಾಗುತ್ತದೆ.

ಪುರುಷೋತ್ತಮ ಏಕಾದಶಿಯ ಪೂಜಾ ಸಮಯ ಮತ್ತು ಆಚರಣೆ ಹೇಗೆ?

ಅಧಿಕ ಶ್ರಾವಣ ಮಾಸದ ಕೃಷ್ಣ ಪಕ್ಷದ ಪುರುಷೋತ್ತಮ ಏಕಾದಶಿ ಆಗಸ್ಟ್ 11 ರಂದು ಬೆಳಿಗ್ಗೆ 5 ಗಂಟೆಗೆ ಆರಂಭವಾಗಿ 12 ರ ಬೆಳಿಗ್ಗೆ 6 ಗಂಟೆಗೆ ಕೊನೆಗೊಳ್ಳಲಿದೆ. ಆದರೆ ಆಚರಣೆ ಮಾತ್ರ 12 ರಂದು ಮಾಡಬೇಕಾಗುತ್ತದೆ. ಆ ದಿನದ ಪೂಜಾ ಸಮಯ ಬೆಳಿಗ್ಗೆ 7 ಗಂಟೆಗೆ ಆರಂಭವಾಗಿ 9 ಗಂಟೆಗೆ ಮುಕ್ತಾಯವಾಗಲಿದೆ. ಹಾಗಾಗಿ ಆ ಸಮಯದೊಳಗೆ ಪೂಜೆ ಮಾಡಿ, ಅದೇ ದಿನ ಉಪವಾಸವನ್ನು ಮಾಡ ಬೇಕಾಗುತ್ತದೆ. ಬಳಿಕ ಆ ದಿನ ಸಂಜೆ ಅಥವಾ ಮರುದಿನ ಬೆಳಿಗ್ಗೆ ಅಂದರೆ ಭಾನುವಾರ ಉಪವಾಸವನ್ನು ಮುಕ್ತಾಯ ಮಾಡಬಹುದು. ಉಪವಾಸ ಮಾಡಲು ಸಾಧ್ಯವಾಗದಿದ್ದವರು ವಿಷ್ಣು ಪೂಜೆ ಮಾಡುವ ಮೂಲಕ ಅಥವಾ ದೇವಸ್ಥಾನಕ್ಕೆ ಹೋಗಿ ಬರುವ ಮೂಲಕ ಈ ವ್ರತಾಚರಣೆ ಮಾಡಬಹುದು. ಜೊತೆಗೆ ವಿಷ್ಣುವಿಗೆ ಪ್ರಿಯವಾದ ತುಳಸಿ ಅರ್ಚನೆ ಅಥವಾ ತುಳಸಿ ಸಮರ್ಪಣೆ ಮಾಡುವುದರಿಂದ ಅಧಿಕ ಪುಣ್ಯ ಪ್ರಾಪ್ತಿಯಾಗುವುದರ ಜೊತೆಗೆ ವಿಷ್ಣುವಿನ ಶ್ರೀರಕ್ಷೆ ಲಭಿಸುತ್ತದೆ.

ಇದನ್ನೂ ಓದಿ: ಅಧಿಕ ಶ್ರಾವಣ ಮಾಸದಲ್ಲಿ ಸೋಮವಾರದ ವ್ರತಾಚರಣೆಯ ಫಲಗಳೇನು? ಯಾವ ಮಂತ್ರವನ್ನು ಪಠಿಸಬೇಕು?

ಯಾವ ಮಂತ್ರ ಪಠಿಸಬೇಕು?

ಈ ದಿನ ವಿಷ್ಣು ಸಹಸ್ರನಾಮ ಓದುವುದರಿಂದ ಅಥವಾ ಕೇಳುವುದರಿಂದ ಉತ್ತಮ ಫಲ ಪ್ರಾಪ್ತಿಯಾಗುತ್ತದೆ. ಅಥವಾ ನೀವು ಓಂ ನಮೋ ಭಗವತೇ ವಾಸುದೇವಾಯ ಎಂಬ ಮಂತ್ರವನ್ನು ೧೦೮ ಬಾರಿ ಜಪಿಸುವುದರಿಂದ ಕೂಡ ಪುಣ್ಯ ಲಭಿಸುತ್ತದೆ. ಅಥವಾ ಓಂ ನಮೋ ನಾರಾಯಣಾಯ ನಮಃ ಎಂಬ ಮಂತ್ರ ಪಠಿಸುವುದರಿಂದಲೂ ಶುಭ ಫಲ ದೊರೆಯುತ್ತದೆ.

ಏನನ್ನು ಮಾಡಬಾರದು?

ಮನೆಯಲ್ಲಿ ಮಾಂಸಹಾರ ಸೇವನೆ ಮಾಡಬಾರದು, ಉಪವಾಸ ಆರಂಭ ಮಾಡಿ ಅರ್ಧಕ್ಕೆ ಮೊಟಕುಗೊಳಿಸಬಾರದು. ಜೊತೆಗೆ ವಿಷ್ಣುವಿಗೆ ತುಳಸಿ ಹಾಕದೇ ಪೂಜೆ ಮಾಡಬಾರದು.

ಅಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ