AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Vidhana: ಎಣ್ಣೆ ಅಥವಾ ತುಪ್ಪದ ದೀಪದಲ್ಲಿ ಯಾವುದು ಶ್ರೇಷ್ಠ?

ದೇವರ ಕೋಣೆಯಲ್ಲಿ ಅಥವಾ ದೇವಸ್ಥಾನದಲ್ಲಿ ತುಪ್ಪ ಅಥವಾ ವಿವಿಧ ರೀತಿಯ ಎಣ್ಣೆ ಹಾಕಿ ದೀಪ ಹಚ್ಚುತ್ತಾರೆ. ಪ್ರತಿಯೊಂದಕ್ಕೂ ಅದರದ್ದೇ ಆದ ಮಹತ್ವವಿದೆ. ಸಾಮಾನ್ಯವಾಗಿ ದೇವರ ಬಲಭಾಗದಲ್ಲಿ ತುಪ್ಪದ ದೀಪವನ್ನು ಮತ್ತು ದೇವರ ಎಡಭಾಗದಲ್ಲಿ ಎಣ್ಣೆಯ ದೀಪವನ್ನು ಹಚ್ಚುವುದು ಮಂಗಳಕರವೆನ್ನುವ ನಂಬಿಕೆಯಿದೆ. ಆದರೆ ದೇವರಿಗೆ ಯಾವ ದೀಪ ಶ್ರೇಷ್ಠ? ಇದರ ಮಹತ್ವವೇನು?

Pooja Vidhana: ಎಣ್ಣೆ ಅಥವಾ ತುಪ್ಪದ ದೀಪದಲ್ಲಿ ಯಾವುದು ಶ್ರೇಷ್ಠ?
ಪ್ರೀತಿ ಭಟ್​, ಗುಣವಂತೆ
| Edited By: |

Updated on:May 04, 2024 | 5:48 PM

Share

ಮನೆಯ ದೇವರ ಕೋಣೆಯಲ್ಲಿ ಅಥವಾ ದೇವಸ್ಥಾನದಲ್ಲಿ ತುಪ್ಪ ಅಥವಾ ವಿವಿಧ ರೀತಿಯ ಎಣ್ಣೆ ಹಾಕಿ ದೀಪ ಹಚ್ಚುತ್ತಾರೆ. ಪ್ರತಿಯೊಂದಕ್ಕೂ ಅದರದ್ದೇ ಆದ ಮಹತ್ವವಿದೆ. ಸಾಮಾನ್ಯವಾಗಿ ದೇವರ ಬಲಭಾಗದಲ್ಲಿ ತುಪ್ಪದ ದೀಪವನ್ನು ಮತ್ತು ದೇವರ ಎಡಭಾಗದಲ್ಲಿ ಎಣ್ಣೆಯ ದೀಪವನ್ನು ಹಚ್ಚುವುದು ಮಂಗಳಕರವೆನ್ನುವ ನಂಬಿಕೆಯಿದೆ. ಆದರೆ ದೇವರಿಗೆ ಯಾವ ದೀಪ ಶ್ರೇಷ್ಠ? ಇದರ ಮಹತ್ವವೇನು?

ತುಪ್ಪದ ದೀಪ ಅತ್ಯಂತ ಶ್ರೇಷ್ಠ. ಆದರೆ ಇಷ್ಟಾರ್ಥಗಳ ಈಡೇರಿಕೆಗಾಗಿ ಎಣ್ಣೆಯ ದೀಪವನ್ನು ಬೆಳಗಿಸುತ್ತಾರೆ. ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೆ ದೇವರಿಗೆ ತುಪ್ಪದ ದೀಪ ಹಚ್ಚುವುದು ಒಳ್ಳೆಯದು. ಶನಿ ದೋಷ ನಿವಾರಣೆಗೆ ಅಥವಾ ದೋಷದಿಂದ ಮುಕ್ತಿ ಪಡೆದುಕೊಳ್ಳಲು ಎಣ್ಣೆ ದೀಪ ಹಚ್ಚುವುದು ಒಳ್ಳೆಯದು. ಮನೆಯಲ್ಲಿರುವ ದೇವರ ಕೋಣೆ ಅಥವಾ ದೇವಸ್ಥಾನದಲ್ಲಿ ತುಪ್ಪದ ದೀಪ ಹಚ್ಚುವುದು ಅತ್ಯಂತ ಶುಭ ಎನ್ನಲಾಗುತ್ತದೆ . ಇದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ. ಜೊತೆಗೆ ಮನೆಯ ವಾಸ್ತು ದೋಷಗಳು ಸಹ ನಿವಾರಣೆಯಾಗುತ್ತದೆ. ಶಿವ ಪುರಾಣದ ಪ್ರಕಾರ ಪ್ರತಿದಿನ ತುಪ್ಪದ ದೀಪವನ್ನು ಹಚ್ಚುವುದರಿಂದ ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸುತ್ತದೆ ಎಂದು ಹೇಳಲಾಗಿದೆ.

ತುಪ್ಪದ ದೀಪವನ್ನು ಹಚ್ಚುವುದರಿಂದ ಗಾಳಿ ಶುದ್ಧವಾಗುತ್ತದೆ ಮತ್ತು ಗಾಳಿಯಲ್ಲಿರುವ ರೋಗಾಣುಗಳನ್ನು ನಾಶಮಾಡುತ್ತದೆ ಎಂದು ಹೇಳಲಾಗುತ್ತದೆ. ಇದರ ಪರಿಮಳ ಮಾನಸಿಕ ಸ್ಥಿತಿಯನ್ನು ಸುಧಾರಿಸುತ್ತದೆ ಮತ್ತು ಖಿನ್ನತೆಯನ್ನು ಹೋಗಲಾಡಿಸುತ್ತದೆ. ಅಲ್ಲದೆ ಇದರಿಂದ ಯಾವುದೇ ರೀತಿಯ ಚರ್ಮ ರೋಗಗಳು ಬರುವುದಿಲ್ಲ.

ಇದನ್ನೂ ಓದಿ: ಮನೆಯ ಬಾಗಿಲಿನ ಮೇಲೆ ದೇವರ ಫೋಟೋ ಇಟ್ಟಿದ್ದೀರಾ? ಈ ನಿಯಮ ಕಡ್ಡಾಯ ಪಾಲಿಸಿ

ಯಾವ ದೀಪ ಶ್ರೇಷ್ಠ?

ಎಣ್ಣೆ ದೀಪ ಹೆಚ್ಚು ಸಮಯ ಉರಿದರೆ ತುಪ್ಪದ ದೀಪ ಕಡಿಮೆ ಸಮಯ ಉರಿಯುತ್ತದೆ. ಎಣ್ಣೆ ದೀಪ ಕೇವಲ 1 ಮೀಟರ್ ಅಂತರದಲ್ಲಿರುವ ಸಾತ್ವಿಕತೆ ಗ್ರಹಿಸಬಹುದು ಆದರೆ ತುಪ್ಪದ ದೀಪ ಸ್ವರ್ಗಲೋಕದವರೆಗಿನ ಸಾತ್ವಿಕ ಲಹರಿ ಗ್ರಹಿಸುವ ಸಾಮರ್ಥ್ಯ ಹೊಂದಿದೆ ಎನ್ನಲಾಗುತ್ತದೆ. ಎಣ್ಣೆ ದೀಪದ ಪ್ರಭಾವ ಕೇವಲ ಅರ್ಧ ಗಂಟೆಗಳ ಕಾಲವಿದ್ದರೆ ತುಪ್ಪದ ದೀಪದ ಪ್ರಭಾವ 4 ಗಂಟೆಗಳ ಕಾಲ ಇರುತ್ತದೆ. ಹಾಗಾಗಿ ಎಣ್ಣೆಗಿಂತ ತುಪ್ಪದ ದೀಪವೇ ಶ್ರೇಷ್ಠ ಎನ್ನಲಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:59 pm, Sat, 4 May 24

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ