AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pradosh Vrat 2024: ನಿಮ್ಮ ಆಸೆಗಳು ಈಡೇರಲು ಪ್ರದೋಷ ವ್ರತದಂದು ಈ ರೀತಿ ಮಾಡಿ

ಈ ಬಾರಿ ಹಿಂದೂ ಹೊಸ ವರ್ಷದ ಮೊದಲ ಪ್ರದೋಷ ವ್ರತವನ್ನು ಎ. 21 ರಂದು ಆಚರಣೆ ಮಾಡಲಾಗುತ್ತದೆ. ಜೊತೆಗೆ ತಮ್ಮ ಅಪೇಕ್ಷಿತ ಬಯಕೆಗಳನ್ನು ಪೂರೈಸಿಕೊಳ್ಳಲು ಸಹ ಈ ಉಪವಾಸ ಮಾಡುತ್ತಾರೆ. ಈ ವ್ರತವನ್ನು ಶಿವ ಭಕ್ತರು ಭಕ್ತಿಯಿಂದ ಆಚರಣೆ ಮಾಡುತ್ತಾರೆ. ಜೊತೆಗೆ ಈ ಶುಭ ದಿನದಂದು ಗಣೇಶ ಮತ್ತು ತಾಯಿ ಪಾರ್ವತಿ ದೇವಿಯನ್ನು ಕೂಡ ಪೂಜಿಸಲಾಗುತ್ತದೆ.

Pradosh Vrat 2024: ನಿಮ್ಮ ಆಸೆಗಳು ಈಡೇರಲು ಪ್ರದೋಷ ವ್ರತದಂದು ಈ ರೀತಿ ಮಾಡಿ
Pradosh Vrat 2024
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 19, 2024 | 5:39 PM

Share

ಪ್ರತಿ ತಿಂಗಳ ಕೃಷ್ಣ ಪಕ್ಷ ಮತ್ತು ಶುಕ್ಲ ಪಕ್ಷದ ತ್ರಯೋದಶಿಯಂದು ಪ್ರದೋಷ ವ್ರತವನ್ನು ಆಚರಿಸಲಾಗುತ್ತದೆ. ವಾರದ ಏಳು ದಿನಗಳಲ್ಲಿ, ಪ್ರದೋಷ ವ್ರತವನ್ನು ಅದು ಬರುವ ವಾರದ ಆಧಾರದ ಮೇಲೆ ಹೆಸರಿಸಲಾಗುತ್ತದೆ, ಆದ್ದರಿಂದ ಈ ಬಾರಿ ರವಿವಾರ ಬಂದಿರುವುದರಿಂದ ಇದನ್ನು ರವಿ ಪ್ರದೋಷ ವ್ರತ ಎಂದು ಕರೆಯಲಾಗುತ್ತದೆ. ಈ ವ್ರತವನ್ನು ಶಿವ ಭಕ್ತರು ಭಕ್ತಿಯಿಂದ ಆಚರಣೆ ಮಾಡುತ್ತಾರೆ. ಜೊತೆಗೆ ಈ ಶುಭ ದಿನದಂದು ಗಣೇಶ ಮತ್ತು ತಾಯಿ ಪಾರ್ವತಿ ದೇವಿಯನ್ನು ಕೂಡ ಪೂಜಿಸಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ಬಾರಿ ಹಿಂದೂ ಹೊಸ ವರ್ಷದ ಮೊದಲ ಪ್ರದೋಷ ವ್ರತವನ್ನು ಎ. 21 ರಂದು ಆಚರಣೆ ಮಾಡಲಾಗುತ್ತದೆ. ಜೊತೆಗೆ ತಮ್ಮ ಅಪೇಕ್ಷಿತ ಬಯಕೆಗಳನ್ನು ಪೂರೈಸಿಕೊಳ್ಳಲು ಸಹ ಈ ಉಪವಾಸ ಮಾಡುತ್ತಾರೆ. ತಕ್ಷಣವೇ ನಿಮಗೆ ಪರಿಹಾರ ಸಿಗದಿದ್ದರೂ ಸಹ ಕ್ರಮೇಣ ಶಿವನ ಆಶೀರ್ವಾದದಿಂದ ಯಾವ ರೀತಿಯ ನಿರ್ಣಯಗಳನ್ನು ತೆಗೆದುಕೊಳ್ಳಬೇಕು ಎಂಬುದು ಮನವರಿಕೆಯಾಗುತ್ತದೆ.

ರವಿ ಪ್ರದೋಷ ವ್ರತದಂದು ಈ ರೀತಿ ಮಾಡಿ:

ಶಿವನನ್ನು ಪೂಜಿಸಿ:

ಜ್ಯೋತಿಷಿಗಳ ಪ್ರಕಾರ, ರವಿ ಪ್ರದೋಷ ವ್ರತದ ದಿನ, ಬೆಳಿಗ್ಗೆ ಬೇಗನೆ ಎದ್ದು, ಸ್ನಾನ ಮಾಡಿ ಶಿವನನ್ನು ಪೂಜಿಸಿ. ಬಳಿಕ ಪಂಚಾಕ್ಷರಿ ಮಂತ್ರವನ್ನು ಪಠಿಸಿ. ಹೀಗೆ ಮಾಡುವುದರಿಂದ, ಶಿವನು ಸಂತೋಷಗೊಳ್ಳುತ್ತಾನೆ ಮತ್ತು ನಿಮ್ಮ ಎಲ್ಲಾ ಆಸೆಗಳು ಈಡೇರುತ್ತದೆ.

ಆದಿತ್ಯ ಹೃದಯ ಸ್ತೋತ್ರವನ್ನು 108 ಬಾರಿ ಪಠಿಸಿ:

ರವಿ ಪ್ರದೋಷ ವ್ರತವು ಸೂರ್ಯ ಸಂಬಂಧಿತ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಹಾಗಾಗಿ ಈ ದಿನ ನೀವು ಆದಿತ್ಯ ಹೃದಯ ಸ್ತೋತ್ರವನ್ನು 108 ಬಾರಿ ಪಠಿಸಿದರೆ ಶುಭ ಫಲಿತಾಂಶ ಮತ್ತು ರಾಜಯೋಗ ಪಡೆಯುತ್ತೀರಿ. ಹಗಲಿನಲ್ಲಿ ಶಿವನನ್ನು ಪೂಜಿಸಿದ ನಂತರ ಇದನ್ನು ಮಾಡಬೇಕು.

ಬಿಲ್ವಪತ್ರೆ ಅರ್ಪಿಸಿ:

ರವಿ ಪ್ರದೋಷ ವ್ರತದ ದಿನ ಶಿವನಿಗೆ ಬಿಲ್ವಪತ್ರೆ ಯನ್ನು ಅರ್ಪಿಸಿ. ನಿಮ್ಮ ಬಯಕೆಯನ್ನು ದೇವರ ಮುಂದೆ ಹೇಳಿ. ಇದನ್ನು ಸೂರ್ಯಾಸ್ತದ ಸಮಯದಲ್ಲಿ ಮಾಡಬೇಕು. ಹೀಗೆ ಮಾಡುವುದರಿಂದ ಶಿವನು ಸಂತೋಷಗೊಳ್ಳುತ್ತಾನೆ ಮತ್ತು ನಿಮ್ಮ ಆಸೆಯನ್ನು ಈಡೇರಿಸುತ್ತಾನೆ.

ಶಿವನಿಗೆ ಪಂಚಾಮೃತದ ಅಭಿಷೇಕ:

ಪ್ರದೋಷ ವ್ರತದಂದು ಶಿವನಿಗೆ ಪಂಚಾಮೃತದ ಅಭಿಷೇಕ ಮಾಡಿ. ಇದರಿಂದ ವೈವಾಹಿಕ ಜೀವನದಲ್ಲಿ ಸಮಸ್ಯೆಗಳಿದ್ದರೆ ದೂರವಾಗುತ್ತದೆ. ಮಾನಸಿಕ ಒತ್ತಡವೂ ಕಡಿಮೆಯಾಗುತ್ತದೆ.

ಇದನ್ನೂ ಓದಿ: ಕಾಲಿನ ಹೆಬ್ಬೆರಳಿಗಿಂತ ಪಕ್ಕದ ಬೆರಳು ಉದ್ದ ಇದ್ದರೆ ನಿಮ್ಮ ಭವಿಷ್ಯ ಹೇಗಿರುತ್ತೆ ನೋಡಿ

ಬಿಳಿ ವಸ್ತುಗಳನ್ನು ದಾನ ಮಾಡಿ:

ರವಿ ಪ್ರದೋಷ ವ್ರತದ ಸಮಯದಲ್ಲಿ ದಾನಕ್ಕೂ ವಿಶೇಷ ಮಹತ್ವವಿದೆ. ಆದ್ದರಿಂದ ಈ ದಿನ ಹಾಲು, ಮೊಸರು, ಅನ್ನ ಹೀಗೆ ಬಿಳಿ ವಸ್ತುಗಳನ್ನು ದಾನ ಮಾಡಿ. ಇದು ಉದ್ಯೋಗದಲ್ಲಿನ ಸಮಸ್ಯೆಗಳನ್ನು ಬಗೆಹರಿಸುತ್ತದೆ. ಭಾನುವಾರವಾಗಿರುವುದರಿಂದ ನೀವು ಗೋಧಿ, ಬಾರ್ಲಿ, ತಾಮ್ರ, ಕೆಂಪು ಹೂವುಗಳನ್ನು ಕೂಡ ದಾನ ಮಾಡಬಹುದು.

ಶಿವ ಪ್ರದೋಷ ಸ್ತೋತ್ರದ ಪಠಣ:

ಶಿವ ಪುರಾಣದ ಪ್ರಕಾರ, ರವಿ ಪ್ರದೋಷ ವ್ರತವನ್ನು ಆಚರಿಸುವ ಮೂಲಕ, ವ್ಯಕ್ತಿಯು ದೈಹಿಕ ಮತ್ತು ಮಾನಸಿಕ ಕಾಯಿಲೆಗಳಿಂದ ಮುಕ್ತಿ ಪಡೆಯುತ್ತಾನೆ. ಅಲ್ಲದೆ ಪ್ರತಿಯೊಂದು ಆಸೆಯೂ ಈಡೇರುತ್ತದೆ. ನೀವು ಸಹ ನಿಮ್ಮ ಅಪೇಕ್ಷಿತ ವರನನ್ನು ಪಡೆಯಲು ಬಯಸಿದರೆ ಅಥವಾ ಯಾವುದೇ ಆಸೆಯನ್ನು ಪೂರೈಸಿಕೊಳ್ಳಲು ಬಯಸಿದಲ್ಲಿ ರವಿ ಪ್ರದೋಷದ ವ್ರತ ಮಾಡಿ ಶಿವನನ್ನು ಪೂಜಿಸಿ. ಇದಲ್ಲದೆ, ಪೂಜೆಯ ಸಮಯದಲ್ಲಿ ಶಿವ ಪ್ರದೋಷ ಸ್ತೋತ್ರವನ್ನು ಪಠಿಸಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ