AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಕುಂಭಕ್ಕೆ ಹೋಗಲು ಸಾಧ್ಯವಾಗದಿದ್ದರೆ ಮನೆಯಲ್ಲಿ ಈ ಕೆಲಸ ಮಾಡಿ, ನೀವು ಅಮೃತ ಸ್ನಾನ ಮಾಡಿದ ಪುಣ್ಯ ಪಡೆಯುತ್ತೀರಿ

ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮೌನಿ ಅಮವಾಸ್ಯೆಯಂದು ಎರಡನೇ ಅಮೃತ ಸ್ನಾನ ನಡೆಯಲಿದೆ. ಹಿಂದೂ ಧರ್ಮದಲ್ಲಿ ಮೌನಿ ಅಮವಾಸ್ಯೆಗೆ ವಿಶೇಷ ಮಹತ್ವವಿದೆ. ಈ ದಿನ ಸ್ನಾನ, ದಾನ ಮಾಡುವುದು ಪುಣ್ಯಕರ ಎಂದು ನಂಬಲಾಗಿದೆ. ಜನವರಿ 29 ರಂದು ಮೌನಿ ಅಮವಾಸ್ಯೆ ಆಚರಿಸಲಾಗುತ್ತದೆ. ಕುಂಭಮೇಳಕ್ಕೆ ಹೋಗಲು ಸಾಧ್ಯವಾಗದವರು ಮನೆಯಲ್ಲಿ ಗಂಗಾಜಲದಿಂದ ಸ್ನಾನ ಮಾಡಿ ಪುಣ್ಯ ಪಡೆಯಬಹುದು.

ಮಹಾಕುಂಭಕ್ಕೆ ಹೋಗಲು ಸಾಧ್ಯವಾಗದಿದ್ದರೆ ಮನೆಯಲ್ಲಿ ಈ ಕೆಲಸ ಮಾಡಿ, ನೀವು ಅಮೃತ ಸ್ನಾನ ಮಾಡಿದ ಪುಣ್ಯ ಪಡೆಯುತ್ತೀರಿ
Prayagraj Kumbh Mela
ಅಕ್ಷತಾ ವರ್ಕಾಡಿ
|

Updated on: Jan 28, 2025 | 8:12 AM

Share

ಪ್ರಯಾಗರಾಜ್‌ನಲ್ಲಿ ಮಹಾಕುಂಭ ನಡೆಯುತ್ತಿದೆ. ಈ ಮಹಾಕುಂಭದಲ್ಲಿ ಅಮೃತ ಸ್ನಾನ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಮೊದಲ ಅಮೃತ ಸ್ನಾನವನ್ನು ಮಕರ ಸಂಕ್ರಾಂತಿಯಂದು ಅಂದರೆ ಜನವರಿ 14 ರಂದು ನಡೆದಿದೆ. ಇದೀಗ ಎರಡನೇ ಅಮೃತ ಸ್ನಾನ ಮೌನಿ ಅಮವಾಸ್ಯೆಯ ದಿನದಂದು ನಡೆಯಲಿದೆ. ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಮೌನಿ ಅಮವಾಸ್ಯೆಗೆ ವಿಶೇಷ ಮಹತ್ವವಿದೆ.

ಧಾರ್ಮಿಕ ನಂಬಿಕೆ:

ಮೌನಿ ಅಮಾವಾಸ್ಯೆಯಂದು ಸ್ನಾನ ಮತ್ತು ದಾನ ಮಾಡುವುದರಿಂದ ಪುಣ್ಯ ಫಲ ಸಿಗುತ್ತದೆ ಎಂಬ ಹಿಂದೂ ಧಾರ್ಮಿಕ ನಂಬಿಕೆಯಿದೆ. ಈ ದಿನ, ಪೂರ್ವಜರಿಗೆ ಪಿಂಡ ಪ್ರದಾನವನ್ನು ಸಹ ಮಾಡಲಾಗುತ್ತದೆ. ಈ ದಿನದಂದು ಮಾಡುವ ತರ್ಪಣ ಮತ್ತು ಪಿಂಡದಾನದ ಮೂಲಕ ಪೂರ್ವಜರು ಮೋಕ್ಷವನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ.

ಮೌನಿ ಅಮವಾಸ್ಯೆ ಯಾವಾಗ?

ಹಿಂದೂ ಕ್ಯಾಲೆಂಡರ್ ಪ್ರಕಾರ, ಮಾಘ ಮಾಸದ ಅಮಾವಾಸ್ಯೆಯ ದಿನವನ್ನು ಮೌನಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಈ ಬಾರಿ ಮಾಘ ಮಾಸದ ಅಮಾವಾಸ್ಯೆಯು ಜನವರಿ 28 ರಂದು ಸಂಜೆ 7.35 ಕ್ಕೆ ಪ್ರಾರಂಭವಾಗಲಿದೆ. ಈ ದಿನಾಂಕವು ಜನವರಿ 29 ರಂದು ಸಂಜೆ 6:05 ಕ್ಕೆ ಕೊನೆಗೊಳ್ಳುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಉದಯ ತಿಥಿಯ ಪ್ರಕಾರ ಜನವರಿ 29 ರಂದು ಮೌನಿ ಅಮವಾಸ್ಯೆಯನ್ನು ಆಚರಿಸಲಾಗುತ್ತದೆ. ಈ ದಿನ ಉಪವಾಸ ಇರುತ್ತದೆ. ಅದೇ ದಿನ ಮಹಾಕುಂಭದಲ್ಲಿ ಎರಡನೇ ಅಮೃತ ಸ್ನಾನ ಕೂಡ ನಡೆಯಲಿದೆ.

ಇದನ್ನೂ ಓದಿ: ಫೆ.02 ರಂದು ವಸಂತ ಪಂಚಮಿ; ವಿದ್ಯಾರ್ಥಿಗಳಿಗೆ ಈ ದಿನ ಏಕೆ ವಿಶೇಷ..?

ಈ ಕ್ರಮಗಳನ್ನು ಮಾಡಿ:

ಮೌನಿ ಅಮಾವಾಸ್ಯೆಯಂದು, ಕೆಲವು ಕಾರಣಗಳಿಂದ ನೀವು ಮಹಾಕುಂಭ ಅಥವಾ ಯಾವುದೇ ಸ್ಥಳಕ್ಕೆ ಹೋಗಲು ಸಾಧ್ಯವಾಗದಿದ್ದರೆ, ಮನೆಯಲ್ಲಿ ಸ್ನಾನ ಮಾಡುವಾಗ ನೀರಿನಲ್ಲಿ ಗಂಗಾಜಲವನ್ನು ಬೆರೆಸಿ. ನಂತರ ಆ ಗಂಗಾಜಲದಿಂದ ಸ್ನಾನ ಮಾಡಿ. ಸ್ನಾನದ ಸಮಯದಲ್ಲಿ ಗಂಗಾ, ಯಮುನೆ, ಗೋದಾವರಿ ಸರಸ್ವತಿ, ನರ್ಮದೇ ಸಿಂಧು ಕಾವೇರಿ ದಹನ ಅಸ್ಮಿನ್ ಸನ್ನಿಧಿಂ ಕುರು । ಈ ಗಂಗಾ ಮಂತ್ರವನ್ನು ಪಠಿಸಿ. ಹೀಗೆ ಮಾಡುವುದರಿಂದ ನೀವು ಮಹಾಕುಂಭದ ಅಮೃತ ಸ್ನಾನಕ್ಕೆ ಸಮಾನವಾದ ಪುಣ್ಯವನ್ನು ಪಡೆಯಬಹುದು.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ