ಪ್ರಯಾಗರಾಜ್ನಲ್ಲಿ ಮಹಾಕುಂಭ ನಡೆಯುತ್ತಿದೆ. ಈ ಮಹಾಕುಂಭದಲ್ಲಿ ಅಮೃತ ಸ್ನಾನ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಮೊದಲ ಅಮೃತ ಸ್ನಾನವನ್ನು ಮಕರ ಸಂಕ್ರಾಂತಿಯಂದು ಅಂದರೆ ಜನವರಿ 14 ರಂದು ನಡೆದಿದೆ. ಇದೀಗ ಎರಡನೇ ಅಮೃತ ಸ್ನಾನ ಮೌನಿ ಅಮವಾಸ್ಯೆಯ ದಿನದಂದು ನಡೆಯಲಿದೆ. ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಮೌನಿ ಅಮವಾಸ್ಯೆಗೆ ವಿಶೇಷ ಮಹತ್ವವಿದೆ.
ಮೌನಿ ಅಮಾವಾಸ್ಯೆಯಂದು ಸ್ನಾನ ಮತ್ತು ದಾನ ಮಾಡುವುದರಿಂದ ಪುಣ್ಯ ಫಲ ಸಿಗುತ್ತದೆ ಎಂಬ ಹಿಂದೂ ಧಾರ್ಮಿಕ ನಂಬಿಕೆಯಿದೆ. ಈ ದಿನ, ಪೂರ್ವಜರಿಗೆ ಪಿಂಡ ಪ್ರದಾನವನ್ನು ಸಹ ಮಾಡಲಾಗುತ್ತದೆ. ಈ ದಿನದಂದು ಮಾಡುವ ತರ್ಪಣ ಮತ್ತು ಪಿಂಡದಾನದ ಮೂಲಕ ಪೂರ್ವಜರು ಮೋಕ್ಷವನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ.
ಹಿಂದೂ ಕ್ಯಾಲೆಂಡರ್ ಪ್ರಕಾರ, ಮಾಘ ಮಾಸದ ಅಮಾವಾಸ್ಯೆಯ ದಿನವನ್ನು ಮೌನಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಈ ಬಾರಿ ಮಾಘ ಮಾಸದ ಅಮಾವಾಸ್ಯೆಯು ಜನವರಿ 28 ರಂದು ಸಂಜೆ 7.35 ಕ್ಕೆ ಪ್ರಾರಂಭವಾಗಲಿದೆ. ಈ ದಿನಾಂಕವು ಜನವರಿ 29 ರಂದು ಸಂಜೆ 6:05 ಕ್ಕೆ ಕೊನೆಗೊಳ್ಳುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಉದಯ ತಿಥಿಯ ಪ್ರಕಾರ ಜನವರಿ 29 ರಂದು ಮೌನಿ ಅಮವಾಸ್ಯೆಯನ್ನು ಆಚರಿಸಲಾಗುತ್ತದೆ. ಈ ದಿನ ಉಪವಾಸ ಇರುತ್ತದೆ. ಅದೇ ದಿನ ಮಹಾಕುಂಭದಲ್ಲಿ ಎರಡನೇ ಅಮೃತ ಸ್ನಾನ ಕೂಡ ನಡೆಯಲಿದೆ.
ಇದನ್ನೂ ಓದಿ: ಫೆ.02 ರಂದು ವಸಂತ ಪಂಚಮಿ; ವಿದ್ಯಾರ್ಥಿಗಳಿಗೆ ಈ ದಿನ ಏಕೆ ವಿಶೇಷ..?
ಮೌನಿ ಅಮಾವಾಸ್ಯೆಯಂದು, ಕೆಲವು ಕಾರಣಗಳಿಂದ ನೀವು ಮಹಾಕುಂಭ ಅಥವಾ ಯಾವುದೇ ಸ್ಥಳಕ್ಕೆ ಹೋಗಲು ಸಾಧ್ಯವಾಗದಿದ್ದರೆ, ಮನೆಯಲ್ಲಿ ಸ್ನಾನ ಮಾಡುವಾಗ ನೀರಿನಲ್ಲಿ ಗಂಗಾಜಲವನ್ನು ಬೆರೆಸಿ. ನಂತರ ಆ ಗಂಗಾಜಲದಿಂದ ಸ್ನಾನ ಮಾಡಿ. ಸ್ನಾನದ ಸಮಯದಲ್ಲಿ ಗಂಗಾ, ಯಮುನೆ, ಗೋದಾವರಿ ಸರಸ್ವತಿ, ನರ್ಮದೇ ಸಿಂಧು ಕಾವೇರಿ ದಹನ ಅಸ್ಮಿನ್ ಸನ್ನಿಧಿಂ ಕುರು । ಈ ಗಂಗಾ ಮಂತ್ರವನ್ನು ಪಠಿಸಿ. ಹೀಗೆ ಮಾಡುವುದರಿಂದ ನೀವು ಮಹಾಕುಂಭದ ಅಮೃತ ಸ್ನಾನಕ್ಕೆ ಸಮಾನವಾದ ಪುಣ್ಯವನ್ನು ಪಡೆಯಬಹುದು.
ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ