AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸಾದ ತಯಾರಿಸುವಾಗ ಅದರಲ್ಲಿ ಕೂದಲು ಬಿದ್ದರೆ ಏನು ಮಾಡಬೇಕು? ಪ್ರೇಮಾನಂದ ಮಹಾರಾಜ್ ಹೇಳುವುದೇನು?

ವೃಂದಾವನದ ಆಧ್ಯಾತ್ಮಿಕ ಗುರು ಪ್ರೇಮಾನಂದ ಜೀ ಮಹಾರಾಜರು, ಪ್ರಸಾದ ತಯಾರಿಕೆಯಲ್ಲಿನ ಶುಚಿತ್ವದ ಮಹತ್ವವನ್ನು ವಿವರಿಸಿದ್ದಾರೆ. ಪ್ರಸಾದಕ್ಕೆ ಕೂದಲು ಅಥವಾ ಕೀಟ ಬಿದ್ದರೆ ಅದನ್ನು ಮತ್ತೆ ತಯಾರಿಸಬೇಕು. ನೈವೇದ್ಯ ಮಾಡುವಾಗ ಕೂದಲು, ಕೀಟಗಳು ಬೀಳದಂತೆ ಎಚ್ಚರವಹಿಸಿ. ಆಹಾರ ತಯಾರಿಸುವಾಗ ಅತಿಯಾಗಿ ಮಾತನಾಡುವುದನ್ನು ತಪ್ಪಿಸಿ ಶುದ್ಧತೆ ಕಾಪಾಡಿ ಎಂದು ಅವರು ಭಕ್ತರಿಗೆ ಸಲಹೆ ನೀಡಿದ್ದಾರೆ.

ಪ್ರಸಾದ ತಯಾರಿಸುವಾಗ ಅದರಲ್ಲಿ  ಕೂದಲು ಬಿದ್ದರೆ ಏನು ಮಾಡಬೇಕು? ಪ್ರೇಮಾನಂದ ಮಹಾರಾಜ್ ಹೇಳುವುದೇನು?
ಆಧ್ಯಾತ್ಮಿಕ ಗುರು ಪ್ರೇಮಾನಂದ ಜೀ ಮಹಾರಾಜರು
ಅಕ್ಷತಾ ವರ್ಕಾಡಿ
|

Updated on:Sep 28, 2025 | 12:41 PM

Share

ವೃಂದಾವನದ ಆಧ್ಯಾತ್ಮಿಕ ಗುರು ಪ್ರೇಮಾನಂದ ಜೀ ಮಹಾರಾಜರನ್ನು ನೋಡಲು ಪ್ರತಿದಿನ ಸಾಕಷ್ಟು ಜನರು ಅವರ ಆಶ್ರಮಕ್ಕೆ ಭೇಟಿ ನೀಡುತ್ತಾರೆ. ಇಲ್ಲಿಗೆ ಭೇಟಿ ನೀಡುವುದರಿಂದ ತಮ್ಮ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂಬ ನಂಬಿಕೆ ಜನರಲ್ಲಿದೆ. ಮನಸ್ಸಿನಲ್ಲಿನ ಗೊಂದಲ, ಸಮಸ್ಯೆಗಳು, ದೇವರ ಕೃಪೆಗೆ ಹೇಗೆ ಪಾತ್ರರಾಗುವುದು ಹೀಗೆ ಹಲವು ಪ್ರಶ್ನೆಗಳಿಗೆ ಪ್ರೇಮಾನಂದರು ಬಹಳ ಸುಲಭವಾಗಿ ಉತ್ತರಿಸುತ್ತಾರೆ.

ಅದರಂತೆ ಇದೀಗ ಭಕ್ತರೊಬ್ಬರು ಪ್ರಸಾದ ತಯಾರಿಕೆಯ ವೇಳೆ ಅದಕ್ಕೆ ಕೂದಲು ಬಿದ್ದರೆ ಏನು ಮಾಡಬೇಕು ಎಂಬ ಪ್ರಶ್ನೆಯನ್ನು ಕೇಳಿದ್ದು, ಇದಕ್ಕೆ ಪ್ರೇಮಾನಂದರು ಉತ್ತರವನ್ನು ನೀಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

‘ದೇವರಿಗೆ ಪ್ರಸಾದ ತಯಾರಿಸುವಾಗ, ತಪ್ಪಾಗಿ ಕೂದಲು ಅಥವಾ ಕೀಟ ಅದರೊಳಗೆ ಬಿದ್ದರೆ, ಪ್ರಸಾದವನ್ನು ಮತ್ತೆ ತಯಾರಿಸಬೇಕಾಗುತ್ತದೆ. ಪ್ರತಿ ಸಲ ನೀವು ನೈವೇದ್ಯಗಳನ್ನು ತಯಾರಿಸುವಾಗ ಜಾಗರೂಕರಾಗಿರಬೇಕು. ಆಹಾರ ತಯಾರಿಸುವಾಗ, ನಿಮ್ಮ ಕೂದಲನ್ನು ಬಟ್ಟೆಯಿಂದ ಕಟ್ಟಿಕೊಳ್ಳಿ. ಅಲ್ಲದೆ, ಕೂದಲು ಅಥವಾ ಇತರ ಕೀಟಗಳು ಅಥವಾ ಸೊಳ್ಳೆಗಳು ಆಹಾರದೊಳಗೆ ಬೀಳದಂತೆ ಎಚ್ಚರವಹಿಸಿ ಎಂದು ಗುರು ಪ್ರೇಮಾನಂದರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ನವರಾತ್ರಿಯ ಸಮಯದಲ್ಲಿ ದುರ್ಗಾ ದೇವಿಗೆ ಎಂದಿಗೂ ಈ ಹಣ್ಣುಗಳನ್ನು ಅರ್ಪಿಸಬೇಡಿ

ಇದಲ್ಲದೇ ಆಹಾರವನ್ನು ತಯಾರಿಸುವಾಗ ಅತಿಯಾಗಿ ಮಾತನಾಡುವುದನ್ನು ತಪ್ಪಿಸಿ, ಏಕೆಂದರೆ ಇದು ಆಹಾರದೊಳಗೆ ಲಾಲಾರಸ ಬೀಳಲು ಕಾರಣವಾಗಬಹುದು. ದೇವರಿಗೆ ಆಹಾರವನ್ನು ಅರ್ಪಿಸುವಾಗ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:40 pm, Sun, 28 September 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?