AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshaya Tritiya 2023: ನಾಳೆ ಶನಿವಾರ ಮಹಾಲಕ್ಷ್ಮೀ ನಿಮ್ಮ ಮನೆಗೆ ಬರಬೇಕು ಅಂದರೆ ಈ 8 ವಸ್ತುಗಳನ್ನು ಖರೀದಿ ಮಾಡಿ!

Gold purchase: ಆದಾಗ್ಯೂ ಅಕ್ಷಯ ತೃತೀಯ ದಿನದ ಚಿನ್ನ ಮಾತ್ರವೇ ಅಲ್ಲ. ಇತರೆ ಕೆಲವು ವಸ್ತುಗಳನ್ನು ಖರೀದಿಸುವುದು ಕೂಡ ಶುಭಪ್ರದವೆಂದು ಶಾಸ್ತ್ರಗಳು ಹೇಳುತ್ತವೆ.

Akshaya Tritiya 2023: ನಾಳೆ ಶನಿವಾರ ಮಹಾಲಕ್ಷ್ಮೀ ನಿಮ್ಮ ಮನೆಗೆ ಬರಬೇಕು ಅಂದರೆ ಈ 8 ವಸ್ತುಗಳನ್ನು ಖರೀದಿ ಮಾಡಿ!
ಮಹಾಲಕ್ಷ್ಮೀ ನಿಮ್ಮ ಮನೆಗೆ ಬರಬೇಕು ಅಂದರೆ..
TV9 Web
| Edited By: |

Updated on: Apr 21, 2023 | 9:34 AM

Share

Akshaya Tritiya: ಸನಾತನ ಹಿಂದೂ ಧರ್ಮದಲ್ಲಿ ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷ ಮೂರನೇ ದಿನ ಅಕ್ಷಯ ತೃತೀಯ (ಇದೇ ತಿಂಗಳು 22 ರಂದು ಶನಿವಾರ) ಆಚರಿಸುತ್ತಾರೆ. ಸಂಸ್ಕೃತ ಭಾಷೆಯಲ್ಲಿ ಅಕ್ಷಯ ಎಂದರೆ ‘ಶಾಶ್ವತವಾದ ಅಥವಾ ಅಂತ್ಯವಿಲ್ಲದ ಆನಂದ, ವಿಜಯ’ ಎಂದು ಅರ್ಥ (Auspicious). ಅಕ್ಷಯ ತೃತೀಯ ದಿನ ಹಿಂದೂಗಳು ಶ್ರೀ ಮಹಾ ವಿಷ್ಣು ಮತ್ತು ಮಹಾಲಕ್ಷ್ಮಿಗೆ ಪೂಜಾರ್ಚನೆ ಕಾರ್ಯಕ್ರಮಗಳನ್ನು ನಡೆಸುತ್ತಾರೆ.

ಅಕ್ಷಯ ತೃತೀಯ ಅಂದರೆ ಚಿನ್ನ ಖರೀದಿಸಲೇಬೇಕು ಎಂಬ ವಾಡಿಕೆಯ ಮಾತು ಮನೆ ಮಾಡಿದೆ. ಹಾಗಾಗಿ, ಈ ದಿನದಂದು ಒಂದು ಗ್ರಾಂ ಚಿನ್ನವಾದರೂ ಖರೀದಿಸಿದರೆ ಒಳ್ಳೆಯದೆಂದು ವೈದಿಕ ಪಂಡಿತರು ಹೇಳುತ್ತಾರೆ. ಆದಾಗ್ಯೂ ಅಕ್ಷಯ ತೃತೀಯ ದಿನದ ಚಿನ್ನ ಮಾತ್ರವೇ ಅಲ್ಲ. ಇತರೆ ಕೆಲವು ವಸ್ತುಗಳನ್ನು ಖರೀದಿಸುವುದು ಕೂಡ ಶುಭಪ್ರದವೆಂದು ಶಾಸ್ತ್ರಗಳು ಹೇಳುತ್ತವೆ. ಮರಿ ಹಿಂದೂ ಧರ್ಮ ಗ್ರಂಥಗಳ ಪ್ರಕಾರ ಅಕ್ಷಯ ತೃತೀಯ ದಿನದಂದು ಯಾವ ವಸ್ತುಗಳನ್ನು ಖರೀದಿಸುವುದು ಶ್ರೇಯಸ್ಕರ ಎಂಬುದನ್ನು ಈಗ ನೋಡೋಣ.

1. ಚಿನ್ನ, ಚಿನ್ನದ ಆಭರಣಗಳು 2. ಬೆಳ್ಳಿ ವಸ್ತುಗಳು 3. ಭೂಮಿ, ನಿವೇಶನಗಳು 4. ಹಣ ಹೂಡಿಕೆ 5. ಕೃಷಿ ಉಪಕರಣಗಳು 6. ವಾಹನಗಳು 7. ಉಡುಪು 8. ಪುಸ್ತಕಗಳು ಮತ್ತು ಗ್ರಂಥಗಳು

ಅಕ್ಷಯ ತೃತೀಯವನ್ನು ಯಾವಾಗ ಆಚರಿಸಲಾಗುತ್ತದೆ?

ಅಕ್ಷಯ ತೃತೀಯವನ್ನು ಹಿಂದೂ ಕ್ಯಾಲೆಂಡರ್ ಪ್ರಕಾರ ವೈಶಾಖ ಶುಕ್ಷ ಪಕ್ಷದ ಮೂರನೇ ದಿನದಂದು ಆಚರಿಸಲಾಗುತ್ತದೆ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ, ಇದು ಏಪ್ರಿಲ್-ಮೇ ತಿಂಗಳಲ್ಲಿ ಬರುತ್ತದೆ. ಈ ದಿನದಂದು ಸೂರ್ಯ ಮತ್ತು ಚಂದ್ರ ಇಬ್ಬರೂ ತಮ್ಮ ಗ್ರಹಗಳ ಅತ್ಯುತ್ತಮ ಸ್ಥಿತಿಯಲ್ಲಿರುತ್ತಾರೆ ಎಂದು ನಂಬಲಾಗಿದೆ. ಈ ಬಾರಿ ಏಪ್ರಿಲ್ 22 ಶನಿವಾರದಂದು ಅಕ್ಷಯ ತೃತೀಯವನ್ನು ಆಚರಿಸಲಾಗುತ್ತಿದೆ.

ಅಕ್ಷಯ ತೃತೀಯ ಇತಿಹಾಸ ಮತ್ತು ಮಹತ್ವ:

ಪುರಾಣ ಮತ್ತು ಪ್ರಾಚೀನ ಇತಿಹಾಸದ ಪ್ರಕಾರ, ಈ ಅಕ್ಷಯ ತೃತೀಯ ದಿನದಂದು ಬಹಳಷ್ಟು ಘಟನೆಗಳು ನಡೆದಿವೆ. ಈ ದಿನದ ಇತಿಹಾಸವನ್ನು ಹೇಳುವುದಾದರೆ, ಒಂದು ದಂತಕಥೆಯ ಪ್ರಕಾರ, ಅಕ್ಷಯ ತೃತೀಯ ದಿನದಂದು ನಾಲ್ಕು ಯುಗಗಳಲ್ಲಿ ಎರಡನೇ ಯುಗವಾದ ತ್ರೇತಾಯುಗವು ಪ್ರಾರಂಭವಾಯಿತು ಎಂದು ಹೇಳಲಾಗುತ್ತದೆ. ಭಗವಾನ್ ವಿಷ್ಣುವಿನ ಆರನೇ ಅವತಾರವಾದ ಪರಶುರಾಮನು ಅಕ್ಷಯ ತೃತೀಯ ದಿನದಂದು ಜನಿಸಿದರು ಎಂದು ಹೇಳಲಾಗುತ್ತದೆ.

ಈ ದಿನ ಮಹರ್ಷಿ ವೇದವ್ಯಾಸರು ಗಣೇಶನಿಗೆ ಮಹಾಕಾವ್ಯ ಮಹಾಭಾರತವನ್ನು ನಿರೂಪಿಸಲು ಪ್ರಾರಂಭಿಸಿದರು ಎಂದು ಹೇಳಲಾಗುತ್ತದೆ. ಈ ದಿನ, ಶ್ರೀ ಕೃಷ್ಣನು ತನ್ನ ಸಹಾಯಕ್ಕಾಗಿ ಬಂದ ತನ್ನ ಬಡ ಸ್ನೇಹಿತ ಸುಧಾಮನಿಗೆ ಸಂಪತ್ತು ಮತ್ತು ಹಣದ ಲಾಭವನ್ನು ದಯಪಾಲಿಸಿದ ದಿನವಾಗಿದೆ. ಮಹಾಭಾರತದ ಪ್ರಕಾರ, ಈ ದಿನದಂದು ಶ್ರೀ ಕೃಷ್ಣನು ಪಾಂಡವರಿಗೆ ವನವಾಸದಲ್ಲಿದ್ದಾಗ ಅವರಿಗೆ ಅಕ್ಷಯ ಪಾತ್ರೆಯನ್ನು ಅರ್ಪಿಸಿದನು ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: Akshaya Tritiya: ಅಕ್ಷಯ ತೃತೀಯದಂದು ನಿಮ್ಮ ಭಾಗ್ಯದ ಬಾಗಿಲು ತೆರೆಯಲು ಮತ್ತೆ ಬರುತ್ತಿದೆ ಭೀಮಾ ಜ್ಯುವೆಲರ್ಸ್, ಇಲ್ಲಿದೆ ಆಕರ್ಷಕ ಕೊಡುಗೆ

ಅಕ್ಷಯ ತೃತೀಯ ಸಂದರ್ಭದಲ್ಲಿನ ಆಚರಣೆಗಳು:

ಭಗವಾನ್ ವಿಷ್ಣುವಿನ ಭಕ್ತರು ಈ ದಿನದಂದು ಉಪವಾಸವನ್ನು ಆಚರಿಸುವ ಮೂಲಕ ದೇವರನ್ನು ಪೂಜಿಸುತ್ತಾರೆ. ನಂತರ ಬಡವರಿಗೆ ಅನ್ನ, ಉಪ್ಪು, ತುಪ್ಪ, ತರಕಾರಿ, ಹಣ್ಣು, ವಸ್ತ್ರವನ್ನು ದಾನ ಮಾಡುತ್ತಾರೆ. ವಿಷ್ಣುವಿನ ಸಂಕೇತವಾಗಿ ತುಳಸಿ ನೀರನ್ನು ಮನೆ ಸುತ್ತಲೂ ಚಿಮುಕಿಸಲಾಗುತ್ತದೆ.

ಹೊಸ ವ್ಯಾಪಾರ, ಉದ್ಯಮಗಳು, ನಿರ್ಮಾಣ ಕಾರ್ಯಗಳನ್ನು ಈ ವಿಶೇಷ ದಿನದಂದು ಪ್ರಾರಂಭಿಸಲಾಗುತ್ತದೆ. ಅಲ್ಲದೆ ಉದ್ಯಮಿಗಳು ಮುಂದಿನ ಆರ್ಥಿಕ ವರ್ಷಕ್ಕೆ ಹೊಸ ಆಡಿಟ್ ಪುಸ್ತಕವನ್ನು ಪ್ರಾರಂಭಿಸುವ ಮೊದಲು ಅಕ್ಷಯ ತೃತೀಯ ದಿನದಂದು ಗಣೇಶ ಮತ್ತು ಲಕ್ಷ್ಮೀ ದೇವಿಯನ್ನು ಪೂಜಿಸುತ್ತಾರೆ. ಇದನ್ನು ಹಲ್ಖಾತಾ ಎಂದು ಕರೆಯುತ್ತಾರೆ.

ಈ ದಿನ ಅನೇಕ ಜನರು ಚಿನ್ನಾಭರಣಗಳನ್ನು ಖರೀದಿಸುತ್ತಾರೆ. ಚಿನ್ನವು ಅದೃಷ್ಟ ಮತ್ತು ಸಂಪತ್ತಿನ ಸಂಕೇತವಾಗಿರುವುದರಿಂದ, ಈ ದಿನ ಚಿನ್ನವನ್ನು ಖರೀದಿಸುವುದು ಪುಣ್ಯವೆಂದು ಪರಿಗಣಿಸಲಾಗಿದೆ.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ