Puri Jagannath Temple: ಆಗಸ್ಟ್ 16ರಿಂದ ಪುರಿ ಜಗನ್ನಾಥ ದೇವಾಲಯ ಓಪನ್; ಭಕ್ತರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯ

Puri Jagannath Temple Reopen | ಆಗಸ್ಟ್ 16ರಿಂದ ಬೆಳಗ್ಗೆ 7ರಿಂದ ಸಂಜೆ 8 ಗಂಟೆಯವರೆಗೂ ಪುರಿ ಜಗನ್ನಾಥ ದೇವಾಲಯ ತೆರೆದಿರುತ್ತದೆ. ಭಕ್ತರು ಕೊವಿಡ್ ನೆಗೆಟಿವ್ ಆರ್​ಟಿ-ಪಿಸಿಆರ್ ವರದಿ ನೀಡುವುದು ಕಡ್ಡಾಯ.

Puri Jagannath Temple: ಆಗಸ್ಟ್ 16ರಿಂದ ಪುರಿ ಜಗನ್ನಾಥ ದೇವಾಲಯ ಓಪನ್; ಭಕ್ತರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯ
ಪುರಿ ಜಗನ್ನಾಥ ದೇಗುಲ
Follow us
| Updated By: ಸುಷ್ಮಾ ಚಕ್ರೆ

Updated on: Aug 05, 2021 | 3:36 PM

ಪುರಿ: ಕೊವಿಡ್ ಅಟ್ಟಹಾಸದಿಂದ ಮುಚ್ಚಲ್ಪಟ್ಟಿದ್ದ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಪುರಿ ಜಗನ್ನಾಥ ದೇವಸ್ಥಾನ ಆಗಸ್ಟ್ 16ರಿಂದ ಭಕ್ತರಿಗೆ ತೆರೆಯಲಿದೆ. ಆಗಸ್ಟ್​ 16ರಿಂದ ಸ್ಥಳೀಯರ ಭಕ್ತರು ಪುರಿ ಜಗನ್ನಾಥನ ದರ್ಶನ ಪಡೆಯಬಹುದು. ಆಗಸ್ಟ್ 23ರ ನಂತರ ಹೊರ ರಾಜ್ಯಗಳ ಭಕ್ತರ ಪ್ರವೇಶಕ್ಕೂ ಅವಕಾಶ ಕಲ್ಪಿಸಲಾಗುತ್ತದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಆಗಸ್ಟ್ 16ರಿಂದ ಬೆಳಗ್ಗೆ 7ರಿಂದ ಸಂಜೆ 8 ಗಂಟೆಯವರೆಗೂ ಪುರಿ ಜಗನ್ನಾಥ ದೇವಾಲಯ ತೆರೆದಿರುತ್ತದೆ. ಭಕ್ತರು ಕೊವಿಡ್ ನೆಗೆಟಿವ್ ಆರ್​ಟಿ-ಪಿಸಿಆರ್ ವರದಿ ನೀಡುವುದು ಕಡ್ಡಾಯ. ಈಗಾಗಲೇ 2 ಡೋಸ್ ಕೊರೊನಾ ಲಸಿಕೆ ಪಡೆದವರು ಲಸಿಕೆ ಪಡೆದ ಸರ್ಟಿಫಿಕೆಟ್ ತೋರಿಸಿದರೆ ಸಾಕು. ಒಂದೇ ಡೋಸ್ ಲಸಿಕೆ ಪಡೆದವರು 96 ಗಂಟೆಯೊಳಗಿನ ಕೊವಿಡ್ ನೆಗೆಟಿವ್ ವರದಿಯನ್ನು ತೋರಿಸಬೇಕು.

ಆಗಸ್ಟ್ 16ರಿಂದ 20ರವರೆಗೆ ಕೇವಲ ಪುರಿಯ ಸುತ್ತಮುತ್ತಲಿನ ಭಕ್ತರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗುವುದು. ಆಗಸ್ಟ್ 23ರಿಂದ ಎಲ್ಲರಿಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಶನಿವಾರ ಮತ್ತು ಭಾನುವಾರ ಒರಿಸ್ಸಾದಲ್ಲಿ ವೀಕೆಂಡ್ ಕರ್ಫ್ಯೂ ಇರುವುದರಿಂದ ಪುರಿ ಜಗನ್ನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಹಾಗೇ, ಆಗಸ್ಟ್ 30ರಂದು ಜನ್ಮಾಷ್ಟಮಿ ಉತ್ಸವದ 2 ದಿನಗಳು ಭಕ್ತರಿಗೆ ಪುರಿ ಜಗನ್ನಾಥ ದೇವಾಲಯದ ಪ್ರವೇಶವನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ವಾರಾಂತ್ಯದಲ್ಲಿ ಧರ್ಮಸ್ಥಳ, ಕಟೀಲು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರಿಗೆ ನಿಷೇಧ; ಹೊಸ ಸಮಯ, ನಿಯಮಗಳ ಮಾಹಿತಿ ಇಲ್ಲಿದೆ

ರಕ್ಷಾಬಂಧನ, ಗಣೇಶ ಚತುರ್ಥಿಗೆ ಪ್ರವಾಸ ಹೋಗೋ ಪ್ಲಾನ್ ಇದೆಯಾ?; ಮಿಸ್ ಮಾಡದೆ ಈ ಸುದ್ದಿ ಓದಿ

(Puri Jagannath temple to reopen from August 16 for Devotees Covid19 Negative Report Mandatory)

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್