AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puttur Mahalingeshwar : ಆನೆಗಳು ಪುತ್ತೂರಿನ ನೀರು ಕುಡಿಯುವಂತಿಲ್ಲ ಯಾಕೆ? ಗಜರಾಜನ ದೇಹದ ಭಾಗದಿಂದಲ್ಲೇ ಸೃಷ್ಟಿಯಾದ ಊರುಗಳಿವು

ಹತ್ತೂರು ಬಿಟ್ಟರೂ ಪುತ್ತೂರು ಬಿಡೆ ಎಂಬ ಮಾತು ಪುತ್ತೂರಿಗೆ ಇರುವ ವಿಶೇಷತೆಯನ್ನು ತೋರಿಸುತ್ತದೆ. ಈ ದೇವಸ್ಥಾನದ ಜೊತೆಗೆ ಪುತ್ತೂರಿನ ಸುತ್ತಮುತ್ತ ಇರುವ ಊರಿನ ಹೆಸರಿನಲ್ಲೂ ವಿಶೇಷತೆ ಇದೆ ಎಂದರೆ ನಂಬುತ್ತೀರಾ? ಹೌದು. ಪುತ್ತೂರಿನ ಮಹಾಲಿಂಗೇಶ್ವರನಿಗೂ ಹಾಗೂ ಅಲ್ಲಿನ ಊರುಗಳಿಗೂ ಒಂದು ಸಂಬಂಧವಿದೆ ಮತ್ತು ಸಾವಿರಾರು ವರ್ಷಗಳ ಇತಿಹಾಸವಿದೆ. ಏನದು? ಇಲ್ಲಿದೆ ಮಾಹಿತಿ.

Puttur Mahalingeshwar : ಆನೆಗಳು ಪುತ್ತೂರಿನ ನೀರು ಕುಡಿಯುವಂತಿಲ್ಲ ಯಾಕೆ? ಗಜರಾಜನ ದೇಹದ ಭಾಗದಿಂದಲ್ಲೇ ಸೃಷ್ಟಿಯಾದ ಊರುಗಳಿವು
ಪುತ್ತೂರು, ಮಹಾಲಿಂಗೇಶ್ವರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 20, 2024 | 9:55 AM

Share

ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ (Puttur Mahalingeshwar) ಕ್ಷೇತ್ರದ ಹಿರಿಮೆ ಅಪಾರ. ಹತ್ತೂರು ಬಿಟ್ಟರೂ ಪುತ್ತೂರು ಬಿಡೆ ಎಂಬ ಮಾತು ಪುತ್ತೂರಿಗೆ ಇರುವ ವಿಶೇಷತೆಯನ್ನು ತೋರಿಸುತ್ತದೆ. ಈ ದೇವಸ್ಥಾನದ ಜೊತೆಗೆ ಪುತ್ತೂರಿನ ಸುತ್ತಮುತ್ತ ಇರುವ ಊರಿನ ಹೆಸರಿನಲ್ಲೂ ವಿಶೇಷತೆ ಇದೆ ಎಂದರೆ ನಂಬುತ್ತೀರಾ? ಹೌದು. ಪುತ್ತೂರಿನ ಮಹಾಲಿಂಗೇಶ್ವರನಿಗೂ ಹಾಗೂ ಅಲ್ಲಿನ ಊರುಗಳಿಗೂ ಒಂದು ಸಂಬಂಧವಿದೆ ಮತ್ತು ಸಾವಿರಾರು ವರ್ಷಗಳ ಇತಿಹಾಸವಿದೆ. ಏನದು? ಇಲ್ಲಿದೆ ಮಾಹಿತಿ.

ಬಹಳ ಹಿಂದೆ, ಬ್ರಾಹ್ಮಣೋತ್ತಮರೊಬ್ಬರು ಪ್ರಯಾಣ ಮಾಡುತ್ತಾ ಪುತ್ತೂರಿಗೆ ಬಂದರು. ಅಲ್ಲಿ ಅವರು ಕಾಶಿ ಕ್ಷೇತ್ರದಿಂದ ತಂದ ಶಿವಲಿಂಗವನ್ನು ಪೂಜಿಸುವ ಮೊದಲು ಕೆರೆಯಲ್ಲಿ ಸ್ನಾನ ಮಾಡಲು ತೆರಳಿದಾಗ ಮರೆತು ಶಿವಲಿಂಗವನ್ನು ಭೂಮಿಯ ಮೇಲೆ ಇಟ್ಟರು. ಬಳಿಕ ಅದನ್ನು ಎತ್ತಲು ಪ್ರಯತ್ನಿಸಿದರು. ಆದರೆ ಶಿವಲಿಂಗ ಮೇಲೆ ಬರಲಿಲ್ಲ. ಇನ್ನಷ್ಟು ಶಕ್ತಿಯಿಂದ ಮೇಲೆತ್ತಲು ಪ್ರಯತ್ನಿಸಿದರೂ, ಲಿಂಗವನ್ನು ಕದಲಿಸಲು ಸಾಧ್ಯವಾಗಲಿಲ್ಲ. ಆಗ ಬ್ರಾಹ್ಮಣೋತ್ತಮರು ಶಿವಾಪರಾಧವಾಯಿತೆಂದು ದುಃಖಿತರಾದರು. ಬಳಿಕ ಆ ಸ್ಥಳದಲ್ಲಿ ಹತ್ತಾರು ಜನ ಸೇರಿ, ಶಿವಲಿಂಗವನ್ನು ಕೀಳಲು ಪ್ರಯತ್ನಿಸಿದರು. ಆ ಸಮಯದಲ್ಲಿ ಅಲ್ಲಿಯ ಪ್ರದೇಶವನ್ನು ಆಳುತ್ತಿದ್ದ ರಾಜ ಬಂಗರಸ ತನ್ನ ಸಿಪಾಯಿಗಳನ್ನು ಕರೆದು ಲಿಂಗವನ್ನು ಕೀಳಲು ಮತ್ತೊಮ್ಮೆ ಪ್ರಯತ್ನಿಸಿದ. ಅವನ ಆಳುಕಾಳುಗಳು, ಪುರ ಜನರ ಎಲ್ಲಾ ಪ್ರಯತ್ನಗಳೂ ನಿಷ್ಪ್ರಯೋಜಕವಾದವು.

ಇದನ್ನೂ ಓದಿ; ಈ ದೇವಾಲಯದಲ್ಲಿರುವ ದೇವಿ ಬಂಜೆತನ ದೂರ ಮಾಡುತ್ತಾಳೆ! ಎಲ್ಲಿದೆ ಗೊತ್ತಾ?

ಬಳಿಕ ಬಂಗರಸನು ತನ್ನ ಪಟ್ಟದ ಆನೆಯನ್ನು ಕರೆತಂದು ಸರಪಳಿಯಿಂದ ಶಿವಲಿಂಗವನ್ನು ಬಿಗಿದು, ಆನೆಯಿಂದ ಲಿಂಗವನ್ನು ಎಳೆಸಿದ. ಆಗ ಚಿಕ್ಕದಾಗಿದ್ದ ಶಿವಲಿಂಗವು ಮಹಾಲಿಂಗೇಶ್ವರನಾಗಿ ಕಂಗೊಳಿಸಿದನು. ದುಷ್ಟರಿಗೆ ರುದ್ರರೂಪಿ, ಪ್ರಳಯಂತಕನಾಗಿ ಪ್ರಜ್ವಲಿಸಿದನು. ಇದಾವುದನ್ನು ಗಮನಿಸದ ಆನೆಯು ಇನ್ನೂ ಶಿವಲಿಂಗವನ್ನು ಎಳೆಯುತ್ತಿದ್ದುದರಿಂದ ನೋವು ತಾಳಲಾರದೆ ಭಯಂಕರವಾಗಿ ಘೀಳಿಡುತ್ತಾ ದೊಪ್ಪನೆ ಬಿದ್ದಿತು. ಆಗ, ಆನೆಯ ಅಂಗಾಗಳು ಛಿದ್ರೋಪಛಿದ್ರಗೊಂಡು ದೂರ ದೂರುಗಳಿಗೆ ಎಸೆಯಲ್ಪಟ್ಟವು ಆನೆಯ ಕೊಂಬು ಬಿದ್ದ ಸ್ಥಳವು ಮುಂದೆ ಕೊಂಬೆಟ್ಟು ಎಂದು ಕರೆಯಲ್ಪಟ್ಟಿತು. ಅದರಂತೆ ಕರಿ ಬಿದ್ದಲ್ಲಿ ಕರಿಯಾಲ, ಕಾಲು ಬಿದ್ದಲ್ಲಿ ಕಾರ್ಜಾಲ, ಕೈ ಬಿದ್ದಲ್ಲಿ ಕೈಪಳ, ಬಾಲ ಬಿದ್ದಲ್ಲಿ ಬೀದಿಮಜಲು ತಲೆ ಬಿದ್ದಲ್ಲಿ ತಾಲೆಪ್ಪಾಡಿ, ಬೆನ್ನು ಬಿದ್ದಲ್ಲಿ ಬೆರಿಪದವು ಎಂಬ ಹೆಸರುಗಳು ಬಂದವು. ಆನೆ ಬಿದ್ದ ಹೊಂಡವೇ ಈಗ ಕೆರೆಯಾಗಿ ಅಲ್ಲಿನ ನೀರು ಗಜ ಸಂತತಿಗೆ ವಿಷಪ್ರಾಯವಾಗಿದೆ. ಇಂದಿಗೂ ಅಲ್ಲಿಯ ನೀರನ್ನು ಆನೆಗಳಿಗೆ ಕುಡಿಸುವಂತಿಲ್ಲ. ಈ ರೀತಿಯಾಗಿ ಸುಪ್ರಸನ್ನನಾದ ಶಿವನು ಮಹಾಲಿಂಗೇಶ್ವರನಾಗಿ ಪುತ್ತೂರಿನ ಪುಣ್ಯಭೂಮಿಯಲ್ಲಿ ನೆಲೆಸಿದನು.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ