AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami 2024: ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ “ಮಥಾಡಿ” ಮಹಾಪ್ರಸಾದ!

ಮೊದಲ ಬಾರಿಗೆ, 'ಮಥಾಡಿ' ಎಂದು ಕರೆಯಲ್ಪಡುವ ಮಹಾಪ್ರಸಾದವನ್ನು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀಕೃಷ್ಣನ ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ ಕಳುಹಿಸಲಾಗುತ್ತಿದೆ. ಈ ಯಾತ್ರೆ ಭಾನುವಾರ ಶ್ರೀನಾಥನ ದೇವಸ್ಥಾನದಿಂದ ಪ್ರಾರಂಭವಾಗಿದ್ದು ಇಂದು (ಎ. 17) ಶ್ರೀ ರಾಮ ನವಮಿಯಂದು ಅಯೋಧ್ಯೆಯನ್ನು ತಲುಪಲಿದೆ.

Ram Navami 2024: ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ ಮಥಾಡಿ ಮಹಾಪ್ರಸಾದ!
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 17, 2024 | 10:18 AM

Share

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಗವಾನ್ ರಾಮನ ಪಟ್ಟಾಭಿಷೇಕದ ನಂತರ ನಡೆಯಲಿರುವ ಮೊದಲ ಶ್ರೀರಾಮ ನವಮಿ ಆಚರಣೆಗೆ ಇಡೀ ದೇಶ ಸಜ್ಜಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಮೊದಲ ಬಾರಿಗೆ, ‘ಮಥಾಡಿ’ ಎಂದು ಕರೆಯಲ್ಪಡುವ ಮಹಾಪ್ರಸಾದವನ್ನು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀಕೃಷ್ಣನ ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ ಕಳುಹಿಸಲಾಗುತ್ತಿದೆ. ಈ ಯಾತ್ರೆ ಭಾನುವಾರ ಶ್ರೀನಾಥನ ದೇವಸ್ಥಾನದಿಂದ ಪ್ರಾರಂಭವಾಗಿದ್ದು ಇಂದು (ಎ. 17) ಶ್ರೀ ರಾಮ ನವಮಿಯಂದು ಅಯೋಧ್ಯೆಯನ್ನು ತಲುಪಲಿದೆ. ಈ ಮಥಾಡಿ ಪ್ರಸಾದವನ್ನು ಬಾಲರಾಮನಿಗೆ ನೈವೇದ್ಯ ಮಾಡಿದ ಬಳಿಕ, ದೇವಾಲಯಕ್ಕೆ ಬರುವ ಭಕ್ತರಿಗೆ ಪ್ರಸಾದವಾಗಿ ವಿತರಿಸಲಾಗುವುದು. ಈ ನಿಟ್ಟಿನಲ್ಲಿ, ಒಂದು ಲಕ್ಷ ಮಥಾಡಿ ಮಹಾಪ್ರಸಾದವನ್ನು ಅಯೋಧ್ಯೆಗೆ ಕಳುಹಿಸಲಾಗುತ್ತಿದೆ ಎಂದು ಶ್ರೀನಾಥ ದೇವಾಲಯದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

ಮಥಾಡಿ “ಮಹಾಪ್ರಸಾದಂ ಯಾತ್ರೆ”ಯು ನಾಥದ್ವಾರದಿಂದ ಪ್ರಾರಂಭವಾಗಿ ಭಿಲ್ವಾರಾ, ಜೈಪುರ, ಮಥುರಾ ಜತಿಪುರ ಮತ್ತು ಲಕ್ನೋ ಮೂಲಕ ಅಯೋಧ್ಯೆಯನ್ನು ತಲುಪುತ್ತದೆ. ರಾಮನವಮಿಯ ಸಂದರ್ಭದಲ್ಲಿ, ಅಯೋಧ್ಯೆಯಲ್ಲಿ ವಿತರಿಸಲಾಗುವ ಈ ಮಥಾಡಿ ಪ್ರಸಾದವನ್ನು ಶ್ರೀನಾಥ ದೇವಾಲಯದಲ್ಲಿ ಉಚಿತವಾಗಿ ವಿತರಿಸಲಾಗುವುದು.

ಇದನ್ನೂ ಓದಿ: ಅಯೋಧ್ಯೆ ರಾಮನಿಗೆ ಅರ್ಪಣೆಯಾಗಲಿದೆ 1,11,111 ಕೆಜಿ ಲಡ್ಡು

ಮಥಾಡಿ ಮಹಾಪ್ರಸಾದ ಎಂದರೇನು?

‘ಮಥಾಡಿ’ ಎಂಬ ಆಹಾರ ಪದಾರ್ಥವನ್ನು ಶ್ರೀಕೃಷ್ಣನ ಪ್ರಸಾದವಾಗಿ ನೀಡಲಾಗುತ್ತದೆ. ಇದು ಒಂದು ವಿಶೇಷ ಖಾದ್ಯ. ಇದನ್ನು ಉದಯಪುರ ನಾಥದ್ವಾರದ ಶ್ರೀನಾಥ ದೇವಸ್ಥಾನದಲ್ಲಿ ಮಾತ್ರ ತಯಾರಿಸಲಾಗುತ್ತದೆ. ಈ ಪ್ರಸಾದವು ದೇಶದ ಬೇರೆ ಯಾವುದೇ ದೇವಾಲಯದಲ್ಲಿ ಕಂಡುಬರುವುದಿಲ್ಲ ಎಂಬುದೇ ಇದರ ವಿಶೇಷ. ಈ ಮಥಾಡಿ ಪ್ರಸಾದವನ್ನು ಬೇಗನೆ ಹಾಳಾಗದಂತೆ ದೀರ್ಘಕಾಲದವರೆಗೆ ಸಂಗ್ರಹಿಸಿಟ್ಟುಕೊಳ್ಳಬಹುದಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More