AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami 2024: ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ “ಮಥಾಡಿ” ಮಹಾಪ್ರಸಾದ!

ಮೊದಲ ಬಾರಿಗೆ, 'ಮಥಾಡಿ' ಎಂದು ಕರೆಯಲ್ಪಡುವ ಮಹಾಪ್ರಸಾದವನ್ನು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀಕೃಷ್ಣನ ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ ಕಳುಹಿಸಲಾಗುತ್ತಿದೆ. ಈ ಯಾತ್ರೆ ಭಾನುವಾರ ಶ್ರೀನಾಥನ ದೇವಸ್ಥಾನದಿಂದ ಪ್ರಾರಂಭವಾಗಿದ್ದು ಇಂದು (ಎ. 17) ಶ್ರೀ ರಾಮ ನವಮಿಯಂದು ಅಯೋಧ್ಯೆಯನ್ನು ತಲುಪಲಿದೆ.

Ram Navami 2024: ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ ಮಥಾಡಿ ಮಹಾಪ್ರಸಾದ!
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 17, 2024 | 10:18 AM

Share

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಗವಾನ್ ರಾಮನ ಪಟ್ಟಾಭಿಷೇಕದ ನಂತರ ನಡೆಯಲಿರುವ ಮೊದಲ ಶ್ರೀರಾಮ ನವಮಿ ಆಚರಣೆಗೆ ಇಡೀ ದೇಶ ಸಜ್ಜಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಮೊದಲ ಬಾರಿಗೆ, ‘ಮಥಾಡಿ’ ಎಂದು ಕರೆಯಲ್ಪಡುವ ಮಹಾಪ್ರಸಾದವನ್ನು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀಕೃಷ್ಣನ ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ ಕಳುಹಿಸಲಾಗುತ್ತಿದೆ. ಈ ಯಾತ್ರೆ ಭಾನುವಾರ ಶ್ರೀನಾಥನ ದೇವಸ್ಥಾನದಿಂದ ಪ್ರಾರಂಭವಾಗಿದ್ದು ಇಂದು (ಎ. 17) ಶ್ರೀ ರಾಮ ನವಮಿಯಂದು ಅಯೋಧ್ಯೆಯನ್ನು ತಲುಪಲಿದೆ. ಈ ಮಥಾಡಿ ಪ್ರಸಾದವನ್ನು ಬಾಲರಾಮನಿಗೆ ನೈವೇದ್ಯ ಮಾಡಿದ ಬಳಿಕ, ದೇವಾಲಯಕ್ಕೆ ಬರುವ ಭಕ್ತರಿಗೆ ಪ್ರಸಾದವಾಗಿ ವಿತರಿಸಲಾಗುವುದು. ಈ ನಿಟ್ಟಿನಲ್ಲಿ, ಒಂದು ಲಕ್ಷ ಮಥಾಡಿ ಮಹಾಪ್ರಸಾದವನ್ನು ಅಯೋಧ್ಯೆಗೆ ಕಳುಹಿಸಲಾಗುತ್ತಿದೆ ಎಂದು ಶ್ರೀನಾಥ ದೇವಾಲಯದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

ಮಥಾಡಿ “ಮಹಾಪ್ರಸಾದಂ ಯಾತ್ರೆ”ಯು ನಾಥದ್ವಾರದಿಂದ ಪ್ರಾರಂಭವಾಗಿ ಭಿಲ್ವಾರಾ, ಜೈಪುರ, ಮಥುರಾ ಜತಿಪುರ ಮತ್ತು ಲಕ್ನೋ ಮೂಲಕ ಅಯೋಧ್ಯೆಯನ್ನು ತಲುಪುತ್ತದೆ. ರಾಮನವಮಿಯ ಸಂದರ್ಭದಲ್ಲಿ, ಅಯೋಧ್ಯೆಯಲ್ಲಿ ವಿತರಿಸಲಾಗುವ ಈ ಮಥಾಡಿ ಪ್ರಸಾದವನ್ನು ಶ್ರೀನಾಥ ದೇವಾಲಯದಲ್ಲಿ ಉಚಿತವಾಗಿ ವಿತರಿಸಲಾಗುವುದು.

ಇದನ್ನೂ ಓದಿ: ಅಯೋಧ್ಯೆ ರಾಮನಿಗೆ ಅರ್ಪಣೆಯಾಗಲಿದೆ 1,11,111 ಕೆಜಿ ಲಡ್ಡು

ಮಥಾಡಿ ಮಹಾಪ್ರಸಾದ ಎಂದರೇನು?

‘ಮಥಾಡಿ’ ಎಂಬ ಆಹಾರ ಪದಾರ್ಥವನ್ನು ಶ್ರೀಕೃಷ್ಣನ ಪ್ರಸಾದವಾಗಿ ನೀಡಲಾಗುತ್ತದೆ. ಇದು ಒಂದು ವಿಶೇಷ ಖಾದ್ಯ. ಇದನ್ನು ಉದಯಪುರ ನಾಥದ್ವಾರದ ಶ್ರೀನಾಥ ದೇವಸ್ಥಾನದಲ್ಲಿ ಮಾತ್ರ ತಯಾರಿಸಲಾಗುತ್ತದೆ. ಈ ಪ್ರಸಾದವು ದೇಶದ ಬೇರೆ ಯಾವುದೇ ದೇವಾಲಯದಲ್ಲಿ ಕಂಡುಬರುವುದಿಲ್ಲ ಎಂಬುದೇ ಇದರ ವಿಶೇಷ. ಈ ಮಥಾಡಿ ಪ್ರಸಾದವನ್ನು ಬೇಗನೆ ಹಾಳಾಗದಂತೆ ದೀರ್ಘಕಾಲದವರೆಗೆ ಸಂಗ್ರಹಿಸಿಟ್ಟುಕೊಳ್ಳಬಹುದಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ