AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami 2024: ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ “ಮಥಾಡಿ” ಮಹಾಪ್ರಸಾದ!

ಮೊದಲ ಬಾರಿಗೆ, 'ಮಥಾಡಿ' ಎಂದು ಕರೆಯಲ್ಪಡುವ ಮಹಾಪ್ರಸಾದವನ್ನು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀಕೃಷ್ಣನ ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ ಕಳುಹಿಸಲಾಗುತ್ತಿದೆ. ಈ ಯಾತ್ರೆ ಭಾನುವಾರ ಶ್ರೀನಾಥನ ದೇವಸ್ಥಾನದಿಂದ ಪ್ರಾರಂಭವಾಗಿದ್ದು ಇಂದು (ಎ. 17) ಶ್ರೀ ರಾಮ ನವಮಿಯಂದು ಅಯೋಧ್ಯೆಯನ್ನು ತಲುಪಲಿದೆ.

Ram Navami 2024: ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ ಮಥಾಡಿ ಮಹಾಪ್ರಸಾದ!
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Apr 17, 2024 | 10:18 AM

Share

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಗವಾನ್ ರಾಮನ ಪಟ್ಟಾಭಿಷೇಕದ ನಂತರ ನಡೆಯಲಿರುವ ಮೊದಲ ಶ್ರೀರಾಮ ನವಮಿ ಆಚರಣೆಗೆ ಇಡೀ ದೇಶ ಸಜ್ಜಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಮೊದಲ ಬಾರಿಗೆ, ‘ಮಥಾಡಿ’ ಎಂದು ಕರೆಯಲ್ಪಡುವ ಮಹಾಪ್ರಸಾದವನ್ನು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀಕೃಷ್ಣನ ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ ಕಳುಹಿಸಲಾಗುತ್ತಿದೆ. ಈ ಯಾತ್ರೆ ಭಾನುವಾರ ಶ್ರೀನಾಥನ ದೇವಸ್ಥಾನದಿಂದ ಪ್ರಾರಂಭವಾಗಿದ್ದು ಇಂದು (ಎ. 17) ಶ್ರೀ ರಾಮ ನವಮಿಯಂದು ಅಯೋಧ್ಯೆಯನ್ನು ತಲುಪಲಿದೆ. ಈ ಮಥಾಡಿ ಪ್ರಸಾದವನ್ನು ಬಾಲರಾಮನಿಗೆ ನೈವೇದ್ಯ ಮಾಡಿದ ಬಳಿಕ, ದೇವಾಲಯಕ್ಕೆ ಬರುವ ಭಕ್ತರಿಗೆ ಪ್ರಸಾದವಾಗಿ ವಿತರಿಸಲಾಗುವುದು. ಈ ನಿಟ್ಟಿನಲ್ಲಿ, ಒಂದು ಲಕ್ಷ ಮಥಾಡಿ ಮಹಾಪ್ರಸಾದವನ್ನು ಅಯೋಧ್ಯೆಗೆ ಕಳುಹಿಸಲಾಗುತ್ತಿದೆ ಎಂದು ಶ್ರೀನಾಥ ದೇವಾಲಯದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

ಮಥಾಡಿ “ಮಹಾಪ್ರಸಾದಂ ಯಾತ್ರೆ”ಯು ನಾಥದ್ವಾರದಿಂದ ಪ್ರಾರಂಭವಾಗಿ ಭಿಲ್ವಾರಾ, ಜೈಪುರ, ಮಥುರಾ ಜತಿಪುರ ಮತ್ತು ಲಕ್ನೋ ಮೂಲಕ ಅಯೋಧ್ಯೆಯನ್ನು ತಲುಪುತ್ತದೆ. ರಾಮನವಮಿಯ ಸಂದರ್ಭದಲ್ಲಿ, ಅಯೋಧ್ಯೆಯಲ್ಲಿ ವಿತರಿಸಲಾಗುವ ಈ ಮಥಾಡಿ ಪ್ರಸಾದವನ್ನು ಶ್ರೀನಾಥ ದೇವಾಲಯದಲ್ಲಿ ಉಚಿತವಾಗಿ ವಿತರಿಸಲಾಗುವುದು.

ಇದನ್ನೂ ಓದಿ: ಅಯೋಧ್ಯೆ ರಾಮನಿಗೆ ಅರ್ಪಣೆಯಾಗಲಿದೆ 1,11,111 ಕೆಜಿ ಲಡ್ಡು

ಮಥಾಡಿ ಮಹಾಪ್ರಸಾದ ಎಂದರೇನು?

‘ಮಥಾಡಿ’ ಎಂಬ ಆಹಾರ ಪದಾರ್ಥವನ್ನು ಶ್ರೀಕೃಷ್ಣನ ಪ್ರಸಾದವಾಗಿ ನೀಡಲಾಗುತ್ತದೆ. ಇದು ಒಂದು ವಿಶೇಷ ಖಾದ್ಯ. ಇದನ್ನು ಉದಯಪುರ ನಾಥದ್ವಾರದ ಶ್ರೀನಾಥ ದೇವಸ್ಥಾನದಲ್ಲಿ ಮಾತ್ರ ತಯಾರಿಸಲಾಗುತ್ತದೆ. ಈ ಪ್ರಸಾದವು ದೇಶದ ಬೇರೆ ಯಾವುದೇ ದೇವಾಲಯದಲ್ಲಿ ಕಂಡುಬರುವುದಿಲ್ಲ ಎಂಬುದೇ ಇದರ ವಿಶೇಷ. ಈ ಮಥಾಡಿ ಪ್ರಸಾದವನ್ನು ಬೇಗನೆ ಹಾಳಾಗದಂತೆ ದೀರ್ಘಕಾಲದವರೆಗೆ ಸಂಗ್ರಹಿಸಿಟ್ಟುಕೊಳ್ಳಬಹುದಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ