Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami 2024: ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ “ಮಥಾಡಿ” ಮಹಾಪ್ರಸಾದ!

ಮೊದಲ ಬಾರಿಗೆ, 'ಮಥಾಡಿ' ಎಂದು ಕರೆಯಲ್ಪಡುವ ಮಹಾಪ್ರಸಾದವನ್ನು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀಕೃಷ್ಣನ ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ ಕಳುಹಿಸಲಾಗುತ್ತಿದೆ. ಈ ಯಾತ್ರೆ ಭಾನುವಾರ ಶ್ರೀನಾಥನ ದೇವಸ್ಥಾನದಿಂದ ಪ್ರಾರಂಭವಾಗಿದ್ದು ಇಂದು (ಎ. 17) ಶ್ರೀ ರಾಮ ನವಮಿಯಂದು ಅಯೋಧ್ಯೆಯನ್ನು ತಲುಪಲಿದೆ.

Ram Navami 2024: ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ ಮಥಾಡಿ ಮಹಾಪ್ರಸಾದ!
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 17, 2024 | 10:18 AM

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಗವಾನ್ ರಾಮನ ಪಟ್ಟಾಭಿಷೇಕದ ನಂತರ ನಡೆಯಲಿರುವ ಮೊದಲ ಶ್ರೀರಾಮ ನವಮಿ ಆಚರಣೆಗೆ ಇಡೀ ದೇಶ ಸಜ್ಜಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಮೊದಲ ಬಾರಿಗೆ, ‘ಮಥಾಡಿ’ ಎಂದು ಕರೆಯಲ್ಪಡುವ ಮಹಾಪ್ರಸಾದವನ್ನು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀಕೃಷ್ಣನ ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ ಕಳುಹಿಸಲಾಗುತ್ತಿದೆ. ಈ ಯಾತ್ರೆ ಭಾನುವಾರ ಶ್ರೀನಾಥನ ದೇವಸ್ಥಾನದಿಂದ ಪ್ರಾರಂಭವಾಗಿದ್ದು ಇಂದು (ಎ. 17) ಶ್ರೀ ರಾಮ ನವಮಿಯಂದು ಅಯೋಧ್ಯೆಯನ್ನು ತಲುಪಲಿದೆ. ಈ ಮಥಾಡಿ ಪ್ರಸಾದವನ್ನು ಬಾಲರಾಮನಿಗೆ ನೈವೇದ್ಯ ಮಾಡಿದ ಬಳಿಕ, ದೇವಾಲಯಕ್ಕೆ ಬರುವ ಭಕ್ತರಿಗೆ ಪ್ರಸಾದವಾಗಿ ವಿತರಿಸಲಾಗುವುದು. ಈ ನಿಟ್ಟಿನಲ್ಲಿ, ಒಂದು ಲಕ್ಷ ಮಥಾಡಿ ಮಹಾಪ್ರಸಾದವನ್ನು ಅಯೋಧ್ಯೆಗೆ ಕಳುಹಿಸಲಾಗುತ್ತಿದೆ ಎಂದು ಶ್ರೀನಾಥ ದೇವಾಲಯದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

ಮಥಾಡಿ “ಮಹಾಪ್ರಸಾದಂ ಯಾತ್ರೆ”ಯು ನಾಥದ್ವಾರದಿಂದ ಪ್ರಾರಂಭವಾಗಿ ಭಿಲ್ವಾರಾ, ಜೈಪುರ, ಮಥುರಾ ಜತಿಪುರ ಮತ್ತು ಲಕ್ನೋ ಮೂಲಕ ಅಯೋಧ್ಯೆಯನ್ನು ತಲುಪುತ್ತದೆ. ರಾಮನವಮಿಯ ಸಂದರ್ಭದಲ್ಲಿ, ಅಯೋಧ್ಯೆಯಲ್ಲಿ ವಿತರಿಸಲಾಗುವ ಈ ಮಥಾಡಿ ಪ್ರಸಾದವನ್ನು ಶ್ರೀನಾಥ ದೇವಾಲಯದಲ್ಲಿ ಉಚಿತವಾಗಿ ವಿತರಿಸಲಾಗುವುದು.

ಇದನ್ನೂ ಓದಿ: ಅಯೋಧ್ಯೆ ರಾಮನಿಗೆ ಅರ್ಪಣೆಯಾಗಲಿದೆ 1,11,111 ಕೆಜಿ ಲಡ್ಡು

ಮಥಾಡಿ ಮಹಾಪ್ರಸಾದ ಎಂದರೇನು?

‘ಮಥಾಡಿ’ ಎಂಬ ಆಹಾರ ಪದಾರ್ಥವನ್ನು ಶ್ರೀಕೃಷ್ಣನ ಪ್ರಸಾದವಾಗಿ ನೀಡಲಾಗುತ್ತದೆ. ಇದು ಒಂದು ವಿಶೇಷ ಖಾದ್ಯ. ಇದನ್ನು ಉದಯಪುರ ನಾಥದ್ವಾರದ ಶ್ರೀನಾಥ ದೇವಸ್ಥಾನದಲ್ಲಿ ಮಾತ್ರ ತಯಾರಿಸಲಾಗುತ್ತದೆ. ಈ ಪ್ರಸಾದವು ದೇಶದ ಬೇರೆ ಯಾವುದೇ ದೇವಾಲಯದಲ್ಲಿ ಕಂಡುಬರುವುದಿಲ್ಲ ಎಂಬುದೇ ಇದರ ವಿಶೇಷ. ಈ ಮಥಾಡಿ ಪ್ರಸಾದವನ್ನು ಬೇಗನೆ ಹಾಳಾಗದಂತೆ ದೀರ್ಘಕಾಲದವರೆಗೆ ಸಂಗ್ರಹಿಸಿಟ್ಟುಕೊಳ್ಳಬಹುದಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ