AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami 2024: ಅಯೋಧ್ಯೆ ರಾಮನಿಗೆ ಅರ್ಪಣೆಯಾಗಲಿದೆ 1,11,111 ಕೆಜಿ ಲಡ್ಡು

ರಾಮ ನವಮಿ ಈ ವರ್ಷ ಹೆಚ್ಚು ವಿಶೇಷವಾಗಿದೆ. ಏಕೆಂದರೆ ಸರಿಸುಮಾರು 500 ವರ್ಷಗಳ ನಂತರ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನವಮಿ ಉತ್ಸವ ನಡೆಯುತ್ತಿದೆ. ಹಾಗಾಗಿ ಇದು ಹೆಚ್ಚು ವಿಶೇಷವಾಗಿದೆ. ಇನ್ನು ಈ ಸಂಭ್ರಮದಲ್ಲಿ ರಾಮ ಮಂದಿರಕ್ಕೆ 1,11,111 ಕಿ. ಗ್ರಾಂ. ಗಳಷ್ಟು ಲಡ್ಡುಗಳು ಪ್ರಸಾದವಾಗಿ ಬರಲಿದ್ದು ಆ ಮೂಲಕ ಭವ್ಯ ಆಚರಣೆಗೆ ಸಾಕ್ಷಿಯಾಗಲಿದೆ.

Ram Navami 2024: ಅಯೋಧ್ಯೆ ರಾಮನಿಗೆ ಅರ್ಪಣೆಯಾಗಲಿದೆ 1,11,111 ಕೆಜಿ ಲಡ್ಡು
ಪ್ರೀತಿ ಭಟ್​, ಗುಣವಂತೆ
| Edited By: |

Updated on:Apr 16, 2024 | 5:43 PM

Share

ಚೈತ್ರ ನವರಾತ್ರಿಯ ಒಂಬತ್ತನೇ ಅಥವಾ ಕೊನೆಯ ದಿನವಾದ ರಾಮ ನವಮಿ ಈ ವರ್ಷ ಹೆಚ್ಚು ವಿಶೇಷವಾಗಿದೆ. ಏಕೆಂದರೆ ಸರಿಸುಮಾರು 500 ವರ್ಷಗಳ ನಂತರ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನವಮಿ ಉತ್ಸವ ನಡೆಯುತ್ತಿದೆ. ಹಾಗಾಗಿ ಇದು ಹೆಚ್ಚು ವಿಶೇಷವಾಗಿದೆ. ಇನ್ನು ಈ ಸಂಭ್ರಮದಲ್ಲಿ ರಾಮ ಮಂದಿರಕ್ಕೆ 1,11,111 ಕಿ. ಗ್ರಾಂ. ಗಳಷ್ಟು ಲಡ್ಡುಗಳು ಪ್ರಸಾದವಾಗಿ ಬರಲಿದ್ದು ಆ ಮೂಲಕ ಭವ್ಯ ಆಚರಣೆಗೆ ಸಾಕ್ಷಿಯಾಗಲಿದೆ.

ರಾಮ ಮಂದಿರಕ್ಕೆ 1,11,111 ಕೆಜಿ ಲಡ್ಡುಗಳ ರವಾನೆ!

ರಾಮನವಮಿಯ ಸಂದರ್ಭದಲ್ಲಿ ದೇವ್ರಹ ಹನ್ಸ್ ಬಾಬಾ ಟ್ರಸ್ಟ್ ಎ. 17 ರಂದು ಅಯೋಧ್ಯೆಯ ರಾಮ ಮಂದಿರಕ್ಕೆ 1,11,111 ಕೆಜಿ ಲಡ್ಡುಗಳನ್ನು ಕಳುಹಿಸಲಿದೆ. ಈ ಟ್ರಸ್ಟ್ ಜ. 22ರ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾನಕ್ಕೆ 40,000 ಕೆಜಿ ಲಡ್ಡುಗಳನ್ನು ಕಳುಹಿಸಿತ್ತು. ತಿರುಪತಿ ಬಾಲಾಜಿ ದೇವಾಲಯ ಮತ್ತು ಕಾಶಿ ವಿಶ್ವನಾಥ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಿಗೆ ಲಡ್ಡುಗಳನ್ನು ಕಳುಹಿಸುವುದು ವಾಡಿಕೆ ಎಂದು ದೇವ್ರಹ ಹನ್ಸ್ ಬಾಬಾ ಟ್ರಸ್ಟ್ ನ ಟ್ರಸ್ಟಿ ಅತುಲ್ ಕುಮಾರ್ ಸಕ್ಸೇನಾ ಅವರು ಹೇಳಿದ್ದಾರೆ.

ಇದನ್ನೂ ಓದಿ : ಈ ನಿಗೂಢ ದೇವಾಲಯದಲ್ಲಿ ದೇವಿಯ ವಿಗ್ರಹ ದಿನಕ್ಕೆ ಮೂರು ಬಾರಿ ರೂಪ ಬದಲಾಯಿಸುತ್ತದೆ!

ರಾಮ ಲಲ್ಲಾಗೆ ಸುಮಾರು 56 ರೀತಿಯ ನೈವೇದ್ಯ!

ಶ್ರೀರಾಮ ಮಂದಿರದಲ್ಲಿ ನಡೆಯುತ್ತಿರುವ ರಾಮ ನವಮಿಯ ಬಗ್ಗೆ ಮಾತನಾಡಿದ ರಾಮ ಜನ್ಮಭೂಮಿ ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್, ದೇವಾಲಯದ ಟ್ರಸ್ಟ್ ಎಲ್ಲಾ ಸಿದ್ಧತೆಗಳನ್ನು ಮಾಡಿದೆ ಎಂದು ಹೇಳಿದರು. ರಾಮನವಮಿಯ ದಿನ ರಾಮ ಲಲ್ಲಾಗೆ ಸುಮಾರು 56 ರೀತಿಯ ನೈವೇದ್ಯ ಪ್ರಸಾದವನ್ನು ಸಹ ನೀಡಲಾಗುವುದು ಎಂದಿದ್ದಾರೆ.

ರಾಮ ಮಂದಿರ ಟ್ರಸ್ಟ್ ಸೋಮವಾರ ಭಕ್ತರಿಗೆ ರಾಮ ನವಮಿ ಆಚರಣೆಗಾಗಿ ಅಯೋಧ್ಯೆಗೆ ಭೇಟಿ ನೀಡದಂತೆ ಮನವಿ ಮಾಡಿದೆ. ಬದಲಿಗೆ ದೂರದರ್ಶನದಲ್ಲಿ ನೇರ ಪ್ರಸಾರವನ್ನು ವೀಕ್ಷಿಸಲು ಸೂಚಿಸಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:43 pm, Tue, 16 April 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ