Ram Navami 2024: ಅಯೋಧ್ಯೆ ರಾಮನಿಗೆ ಅರ್ಪಣೆಯಾಗಲಿದೆ 1,11,111 ಕೆಜಿ ಲಡ್ಡು

ರಾಮ ನವಮಿ ಈ ವರ್ಷ ಹೆಚ್ಚು ವಿಶೇಷವಾಗಿದೆ. ಏಕೆಂದರೆ ಸರಿಸುಮಾರು 500 ವರ್ಷಗಳ ನಂತರ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನವಮಿ ಉತ್ಸವ ನಡೆಯುತ್ತಿದೆ. ಹಾಗಾಗಿ ಇದು ಹೆಚ್ಚು ವಿಶೇಷವಾಗಿದೆ. ಇನ್ನು ಈ ಸಂಭ್ರಮದಲ್ಲಿ ರಾಮ ಮಂದಿರಕ್ಕೆ 1,11,111 ಕಿ. ಗ್ರಾಂ. ಗಳಷ್ಟು ಲಡ್ಡುಗಳು ಪ್ರಸಾದವಾಗಿ ಬರಲಿದ್ದು ಆ ಮೂಲಕ ಭವ್ಯ ಆಚರಣೆಗೆ ಸಾಕ್ಷಿಯಾಗಲಿದೆ.

Ram Navami 2024: ಅಯೋಧ್ಯೆ ರಾಮನಿಗೆ ಅರ್ಪಣೆಯಾಗಲಿದೆ 1,11,111 ಕೆಜಿ ಲಡ್ಡು
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 16, 2024 | 5:43 PM

ಚೈತ್ರ ನವರಾತ್ರಿಯ ಒಂಬತ್ತನೇ ಅಥವಾ ಕೊನೆಯ ದಿನವಾದ ರಾಮ ನವಮಿ ಈ ವರ್ಷ ಹೆಚ್ಚು ವಿಶೇಷವಾಗಿದೆ. ಏಕೆಂದರೆ ಸರಿಸುಮಾರು 500 ವರ್ಷಗಳ ನಂತರ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನವಮಿ ಉತ್ಸವ ನಡೆಯುತ್ತಿದೆ. ಹಾಗಾಗಿ ಇದು ಹೆಚ್ಚು ವಿಶೇಷವಾಗಿದೆ. ಇನ್ನು ಈ ಸಂಭ್ರಮದಲ್ಲಿ ರಾಮ ಮಂದಿರಕ್ಕೆ 1,11,111 ಕಿ. ಗ್ರಾಂ. ಗಳಷ್ಟು ಲಡ್ಡುಗಳು ಪ್ರಸಾದವಾಗಿ ಬರಲಿದ್ದು ಆ ಮೂಲಕ ಭವ್ಯ ಆಚರಣೆಗೆ ಸಾಕ್ಷಿಯಾಗಲಿದೆ.

ರಾಮ ಮಂದಿರಕ್ಕೆ 1,11,111 ಕೆಜಿ ಲಡ್ಡುಗಳ ರವಾನೆ!

ರಾಮನವಮಿಯ ಸಂದರ್ಭದಲ್ಲಿ ದೇವ್ರಹ ಹನ್ಸ್ ಬಾಬಾ ಟ್ರಸ್ಟ್ ಎ. 17 ರಂದು ಅಯೋಧ್ಯೆಯ ರಾಮ ಮಂದಿರಕ್ಕೆ 1,11,111 ಕೆಜಿ ಲಡ್ಡುಗಳನ್ನು ಕಳುಹಿಸಲಿದೆ. ಈ ಟ್ರಸ್ಟ್ ಜ. 22ರ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾನಕ್ಕೆ 40,000 ಕೆಜಿ ಲಡ್ಡುಗಳನ್ನು ಕಳುಹಿಸಿತ್ತು. ತಿರುಪತಿ ಬಾಲಾಜಿ ದೇವಾಲಯ ಮತ್ತು ಕಾಶಿ ವಿಶ್ವನಾಥ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಿಗೆ ಲಡ್ಡುಗಳನ್ನು ಕಳುಹಿಸುವುದು ವಾಡಿಕೆ ಎಂದು ದೇವ್ರಹ ಹನ್ಸ್ ಬಾಬಾ ಟ್ರಸ್ಟ್ ನ ಟ್ರಸ್ಟಿ ಅತುಲ್ ಕುಮಾರ್ ಸಕ್ಸೇನಾ ಅವರು ಹೇಳಿದ್ದಾರೆ.

ಇದನ್ನೂ ಓದಿ : ಈ ನಿಗೂಢ ದೇವಾಲಯದಲ್ಲಿ ದೇವಿಯ ವಿಗ್ರಹ ದಿನಕ್ಕೆ ಮೂರು ಬಾರಿ ರೂಪ ಬದಲಾಯಿಸುತ್ತದೆ!

ರಾಮ ಲಲ್ಲಾಗೆ ಸುಮಾರು 56 ರೀತಿಯ ನೈವೇದ್ಯ!

ಶ್ರೀರಾಮ ಮಂದಿರದಲ್ಲಿ ನಡೆಯುತ್ತಿರುವ ರಾಮ ನವಮಿಯ ಬಗ್ಗೆ ಮಾತನಾಡಿದ ರಾಮ ಜನ್ಮಭೂಮಿ ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್, ದೇವಾಲಯದ ಟ್ರಸ್ಟ್ ಎಲ್ಲಾ ಸಿದ್ಧತೆಗಳನ್ನು ಮಾಡಿದೆ ಎಂದು ಹೇಳಿದರು. ರಾಮನವಮಿಯ ದಿನ ರಾಮ ಲಲ್ಲಾಗೆ ಸುಮಾರು 56 ರೀತಿಯ ನೈವೇದ್ಯ ಪ್ರಸಾದವನ್ನು ಸಹ ನೀಡಲಾಗುವುದು ಎಂದಿದ್ದಾರೆ.

ರಾಮ ಮಂದಿರ ಟ್ರಸ್ಟ್ ಸೋಮವಾರ ಭಕ್ತರಿಗೆ ರಾಮ ನವಮಿ ಆಚರಣೆಗಾಗಿ ಅಯೋಧ್ಯೆಗೆ ಭೇಟಿ ನೀಡದಂತೆ ಮನವಿ ಮಾಡಿದೆ. ಬದಲಿಗೆ ದೂರದರ್ಶನದಲ್ಲಿ ನೇರ ಪ್ರಸಾರವನ್ನು ವೀಕ್ಷಿಸಲು ಸೂಚಿಸಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:43 pm, Tue, 16 April 24

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!