AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami 2024: ಅಯೋಧ್ಯೆ ರಾಮನಿಗೆ ಅರ್ಪಣೆಯಾಗಲಿದೆ 1,11,111 ಕೆಜಿ ಲಡ್ಡು

ರಾಮ ನವಮಿ ಈ ವರ್ಷ ಹೆಚ್ಚು ವಿಶೇಷವಾಗಿದೆ. ಏಕೆಂದರೆ ಸರಿಸುಮಾರು 500 ವರ್ಷಗಳ ನಂತರ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನವಮಿ ಉತ್ಸವ ನಡೆಯುತ್ತಿದೆ. ಹಾಗಾಗಿ ಇದು ಹೆಚ್ಚು ವಿಶೇಷವಾಗಿದೆ. ಇನ್ನು ಈ ಸಂಭ್ರಮದಲ್ಲಿ ರಾಮ ಮಂದಿರಕ್ಕೆ 1,11,111 ಕಿ. ಗ್ರಾಂ. ಗಳಷ್ಟು ಲಡ್ಡುಗಳು ಪ್ರಸಾದವಾಗಿ ಬರಲಿದ್ದು ಆ ಮೂಲಕ ಭವ್ಯ ಆಚರಣೆಗೆ ಸಾಕ್ಷಿಯಾಗಲಿದೆ.

Ram Navami 2024: ಅಯೋಧ್ಯೆ ರಾಮನಿಗೆ ಅರ್ಪಣೆಯಾಗಲಿದೆ 1,11,111 ಕೆಜಿ ಲಡ್ಡು
ಪ್ರೀತಿ ಭಟ್​, ಗುಣವಂತೆ
| Edited By: |

Updated on:Apr 16, 2024 | 5:43 PM

Share

ಚೈತ್ರ ನವರಾತ್ರಿಯ ಒಂಬತ್ತನೇ ಅಥವಾ ಕೊನೆಯ ದಿನವಾದ ರಾಮ ನವಮಿ ಈ ವರ್ಷ ಹೆಚ್ಚು ವಿಶೇಷವಾಗಿದೆ. ಏಕೆಂದರೆ ಸರಿಸುಮಾರು 500 ವರ್ಷಗಳ ನಂತರ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನವಮಿ ಉತ್ಸವ ನಡೆಯುತ್ತಿದೆ. ಹಾಗಾಗಿ ಇದು ಹೆಚ್ಚು ವಿಶೇಷವಾಗಿದೆ. ಇನ್ನು ಈ ಸಂಭ್ರಮದಲ್ಲಿ ರಾಮ ಮಂದಿರಕ್ಕೆ 1,11,111 ಕಿ. ಗ್ರಾಂ. ಗಳಷ್ಟು ಲಡ್ಡುಗಳು ಪ್ರಸಾದವಾಗಿ ಬರಲಿದ್ದು ಆ ಮೂಲಕ ಭವ್ಯ ಆಚರಣೆಗೆ ಸಾಕ್ಷಿಯಾಗಲಿದೆ.

ರಾಮ ಮಂದಿರಕ್ಕೆ 1,11,111 ಕೆಜಿ ಲಡ್ಡುಗಳ ರವಾನೆ!

ರಾಮನವಮಿಯ ಸಂದರ್ಭದಲ್ಲಿ ದೇವ್ರಹ ಹನ್ಸ್ ಬಾಬಾ ಟ್ರಸ್ಟ್ ಎ. 17 ರಂದು ಅಯೋಧ್ಯೆಯ ರಾಮ ಮಂದಿರಕ್ಕೆ 1,11,111 ಕೆಜಿ ಲಡ್ಡುಗಳನ್ನು ಕಳುಹಿಸಲಿದೆ. ಈ ಟ್ರಸ್ಟ್ ಜ. 22ರ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾನಕ್ಕೆ 40,000 ಕೆಜಿ ಲಡ್ಡುಗಳನ್ನು ಕಳುಹಿಸಿತ್ತು. ತಿರುಪತಿ ಬಾಲಾಜಿ ದೇವಾಲಯ ಮತ್ತು ಕಾಶಿ ವಿಶ್ವನಾಥ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಿಗೆ ಲಡ್ಡುಗಳನ್ನು ಕಳುಹಿಸುವುದು ವಾಡಿಕೆ ಎಂದು ದೇವ್ರಹ ಹನ್ಸ್ ಬಾಬಾ ಟ್ರಸ್ಟ್ ನ ಟ್ರಸ್ಟಿ ಅತುಲ್ ಕುಮಾರ್ ಸಕ್ಸೇನಾ ಅವರು ಹೇಳಿದ್ದಾರೆ.

ಇದನ್ನೂ ಓದಿ : ಈ ನಿಗೂಢ ದೇವಾಲಯದಲ್ಲಿ ದೇವಿಯ ವಿಗ್ರಹ ದಿನಕ್ಕೆ ಮೂರು ಬಾರಿ ರೂಪ ಬದಲಾಯಿಸುತ್ತದೆ!

ರಾಮ ಲಲ್ಲಾಗೆ ಸುಮಾರು 56 ರೀತಿಯ ನೈವೇದ್ಯ!

ಶ್ರೀರಾಮ ಮಂದಿರದಲ್ಲಿ ನಡೆಯುತ್ತಿರುವ ರಾಮ ನವಮಿಯ ಬಗ್ಗೆ ಮಾತನಾಡಿದ ರಾಮ ಜನ್ಮಭೂಮಿ ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್, ದೇವಾಲಯದ ಟ್ರಸ್ಟ್ ಎಲ್ಲಾ ಸಿದ್ಧತೆಗಳನ್ನು ಮಾಡಿದೆ ಎಂದು ಹೇಳಿದರು. ರಾಮನವಮಿಯ ದಿನ ರಾಮ ಲಲ್ಲಾಗೆ ಸುಮಾರು 56 ರೀತಿಯ ನೈವೇದ್ಯ ಪ್ರಸಾದವನ್ನು ಸಹ ನೀಡಲಾಗುವುದು ಎಂದಿದ್ದಾರೆ.

ರಾಮ ಮಂದಿರ ಟ್ರಸ್ಟ್ ಸೋಮವಾರ ಭಕ್ತರಿಗೆ ರಾಮ ನವಮಿ ಆಚರಣೆಗಾಗಿ ಅಯೋಧ್ಯೆಗೆ ಭೇಟಿ ನೀಡದಂತೆ ಮನವಿ ಮಾಡಿದೆ. ಬದಲಿಗೆ ದೂರದರ್ಶನದಲ್ಲಿ ನೇರ ಪ್ರಸಾರವನ್ನು ವೀಕ್ಷಿಸಲು ಸೂಚಿಸಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:43 pm, Tue, 16 April 24

ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ