AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami 2024: ಅಯೋಧ್ಯೆ ರಾಮನಿಗೆ ಅರ್ಪಣೆಯಾಗಲಿದೆ 1,11,111 ಕೆಜಿ ಲಡ್ಡು

ರಾಮ ನವಮಿ ಈ ವರ್ಷ ಹೆಚ್ಚು ವಿಶೇಷವಾಗಿದೆ. ಏಕೆಂದರೆ ಸರಿಸುಮಾರು 500 ವರ್ಷಗಳ ನಂತರ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನವಮಿ ಉತ್ಸವ ನಡೆಯುತ್ತಿದೆ. ಹಾಗಾಗಿ ಇದು ಹೆಚ್ಚು ವಿಶೇಷವಾಗಿದೆ. ಇನ್ನು ಈ ಸಂಭ್ರಮದಲ್ಲಿ ರಾಮ ಮಂದಿರಕ್ಕೆ 1,11,111 ಕಿ. ಗ್ರಾಂ. ಗಳಷ್ಟು ಲಡ್ಡುಗಳು ಪ್ರಸಾದವಾಗಿ ಬರಲಿದ್ದು ಆ ಮೂಲಕ ಭವ್ಯ ಆಚರಣೆಗೆ ಸಾಕ್ಷಿಯಾಗಲಿದೆ.

Ram Navami 2024: ಅಯೋಧ್ಯೆ ರಾಮನಿಗೆ ಅರ್ಪಣೆಯಾಗಲಿದೆ 1,11,111 ಕೆಜಿ ಲಡ್ಡು
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 16, 2024 | 5:43 PM

ಚೈತ್ರ ನವರಾತ್ರಿಯ ಒಂಬತ್ತನೇ ಅಥವಾ ಕೊನೆಯ ದಿನವಾದ ರಾಮ ನವಮಿ ಈ ವರ್ಷ ಹೆಚ್ಚು ವಿಶೇಷವಾಗಿದೆ. ಏಕೆಂದರೆ ಸರಿಸುಮಾರು 500 ವರ್ಷಗಳ ನಂತರ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನವಮಿ ಉತ್ಸವ ನಡೆಯುತ್ತಿದೆ. ಹಾಗಾಗಿ ಇದು ಹೆಚ್ಚು ವಿಶೇಷವಾಗಿದೆ. ಇನ್ನು ಈ ಸಂಭ್ರಮದಲ್ಲಿ ರಾಮ ಮಂದಿರಕ್ಕೆ 1,11,111 ಕಿ. ಗ್ರಾಂ. ಗಳಷ್ಟು ಲಡ್ಡುಗಳು ಪ್ರಸಾದವಾಗಿ ಬರಲಿದ್ದು ಆ ಮೂಲಕ ಭವ್ಯ ಆಚರಣೆಗೆ ಸಾಕ್ಷಿಯಾಗಲಿದೆ.

ರಾಮ ಮಂದಿರಕ್ಕೆ 1,11,111 ಕೆಜಿ ಲಡ್ಡುಗಳ ರವಾನೆ!

ರಾಮನವಮಿಯ ಸಂದರ್ಭದಲ್ಲಿ ದೇವ್ರಹ ಹನ್ಸ್ ಬಾಬಾ ಟ್ರಸ್ಟ್ ಎ. 17 ರಂದು ಅಯೋಧ್ಯೆಯ ರಾಮ ಮಂದಿರಕ್ಕೆ 1,11,111 ಕೆಜಿ ಲಡ್ಡುಗಳನ್ನು ಕಳುಹಿಸಲಿದೆ. ಈ ಟ್ರಸ್ಟ್ ಜ. 22ರ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾನಕ್ಕೆ 40,000 ಕೆಜಿ ಲಡ್ಡುಗಳನ್ನು ಕಳುಹಿಸಿತ್ತು. ತಿರುಪತಿ ಬಾಲಾಜಿ ದೇವಾಲಯ ಮತ್ತು ಕಾಶಿ ವಿಶ್ವನಾಥ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಿಗೆ ಲಡ್ಡುಗಳನ್ನು ಕಳುಹಿಸುವುದು ವಾಡಿಕೆ ಎಂದು ದೇವ್ರಹ ಹನ್ಸ್ ಬಾಬಾ ಟ್ರಸ್ಟ್ ನ ಟ್ರಸ್ಟಿ ಅತುಲ್ ಕುಮಾರ್ ಸಕ್ಸೇನಾ ಅವರು ಹೇಳಿದ್ದಾರೆ.

ಇದನ್ನೂ ಓದಿ : ಈ ನಿಗೂಢ ದೇವಾಲಯದಲ್ಲಿ ದೇವಿಯ ವಿಗ್ರಹ ದಿನಕ್ಕೆ ಮೂರು ಬಾರಿ ರೂಪ ಬದಲಾಯಿಸುತ್ತದೆ!

ರಾಮ ಲಲ್ಲಾಗೆ ಸುಮಾರು 56 ರೀತಿಯ ನೈವೇದ್ಯ!

ಶ್ರೀರಾಮ ಮಂದಿರದಲ್ಲಿ ನಡೆಯುತ್ತಿರುವ ರಾಮ ನವಮಿಯ ಬಗ್ಗೆ ಮಾತನಾಡಿದ ರಾಮ ಜನ್ಮಭೂಮಿ ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್, ದೇವಾಲಯದ ಟ್ರಸ್ಟ್ ಎಲ್ಲಾ ಸಿದ್ಧತೆಗಳನ್ನು ಮಾಡಿದೆ ಎಂದು ಹೇಳಿದರು. ರಾಮನವಮಿಯ ದಿನ ರಾಮ ಲಲ್ಲಾಗೆ ಸುಮಾರು 56 ರೀತಿಯ ನೈವೇದ್ಯ ಪ್ರಸಾದವನ್ನು ಸಹ ನೀಡಲಾಗುವುದು ಎಂದಿದ್ದಾರೆ.

ರಾಮ ಮಂದಿರ ಟ್ರಸ್ಟ್ ಸೋಮವಾರ ಭಕ್ತರಿಗೆ ರಾಮ ನವಮಿ ಆಚರಣೆಗಾಗಿ ಅಯೋಧ್ಯೆಗೆ ಭೇಟಿ ನೀಡದಂತೆ ಮನವಿ ಮಾಡಿದೆ. ಬದಲಿಗೆ ದೂರದರ್ಶನದಲ್ಲಿ ನೇರ ಪ್ರಸಾರವನ್ನು ವೀಕ್ಷಿಸಲು ಸೂಚಿಸಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:43 pm, Tue, 16 April 24

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ