Ram Navami 2024: ಅಯೋಧ್ಯೆ ರಾಮನಿಗೆ ಅರ್ಪಣೆಯಾಗಲಿದೆ 1,11,111 ಕೆಜಿ ಲಡ್ಡು

ರಾಮ ನವಮಿ ಈ ವರ್ಷ ಹೆಚ್ಚು ವಿಶೇಷವಾಗಿದೆ. ಏಕೆಂದರೆ ಸರಿಸುಮಾರು 500 ವರ್ಷಗಳ ನಂತರ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನವಮಿ ಉತ್ಸವ ನಡೆಯುತ್ತಿದೆ. ಹಾಗಾಗಿ ಇದು ಹೆಚ್ಚು ವಿಶೇಷವಾಗಿದೆ. ಇನ್ನು ಈ ಸಂಭ್ರಮದಲ್ಲಿ ರಾಮ ಮಂದಿರಕ್ಕೆ 1,11,111 ಕಿ. ಗ್ರಾಂ. ಗಳಷ್ಟು ಲಡ್ಡುಗಳು ಪ್ರಸಾದವಾಗಿ ಬರಲಿದ್ದು ಆ ಮೂಲಕ ಭವ್ಯ ಆಚರಣೆಗೆ ಸಾಕ್ಷಿಯಾಗಲಿದೆ.

Ram Navami 2024: ಅಯೋಧ್ಯೆ ರಾಮನಿಗೆ ಅರ್ಪಣೆಯಾಗಲಿದೆ 1,11,111 ಕೆಜಿ ಲಡ್ಡು
Edited By:

Updated on: Apr 16, 2024 | 5:43 PM

ಚೈತ್ರ ನವರಾತ್ರಿಯ ಒಂಬತ್ತನೇ ಅಥವಾ ಕೊನೆಯ ದಿನವಾದ ರಾಮ ನವಮಿ ಈ ವರ್ಷ ಹೆಚ್ಚು ವಿಶೇಷವಾಗಿದೆ. ಏಕೆಂದರೆ ಸರಿಸುಮಾರು 500 ವರ್ಷಗಳ ನಂತರ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನವಮಿ ಉತ್ಸವ ನಡೆಯುತ್ತಿದೆ. ಹಾಗಾಗಿ ಇದು ಹೆಚ್ಚು ವಿಶೇಷವಾಗಿದೆ. ಇನ್ನು ಈ ಸಂಭ್ರಮದಲ್ಲಿ ರಾಮ ಮಂದಿರಕ್ಕೆ 1,11,111 ಕಿ. ಗ್ರಾಂ. ಗಳಷ್ಟು ಲಡ್ಡುಗಳು ಪ್ರಸಾದವಾಗಿ ಬರಲಿದ್ದು ಆ ಮೂಲಕ ಭವ್ಯ ಆಚರಣೆಗೆ ಸಾಕ್ಷಿಯಾಗಲಿದೆ.

ರಾಮ ಮಂದಿರಕ್ಕೆ 1,11,111 ಕೆಜಿ ಲಡ್ಡುಗಳ ರವಾನೆ!

ರಾಮನವಮಿಯ ಸಂದರ್ಭದಲ್ಲಿ ದೇವ್ರಹ ಹನ್ಸ್ ಬಾಬಾ ಟ್ರಸ್ಟ್ ಎ. 17 ರಂದು ಅಯೋಧ್ಯೆಯ ರಾಮ ಮಂದಿರಕ್ಕೆ 1,11,111 ಕೆಜಿ ಲಡ್ಡುಗಳನ್ನು ಕಳುಹಿಸಲಿದೆ. ಈ ಟ್ರಸ್ಟ್ ಜ. 22ರ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾನಕ್ಕೆ 40,000 ಕೆಜಿ ಲಡ್ಡುಗಳನ್ನು ಕಳುಹಿಸಿತ್ತು. ತಿರುಪತಿ ಬಾಲಾಜಿ ದೇವಾಲಯ ಮತ್ತು ಕಾಶಿ ವಿಶ್ವನಾಥ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಿಗೆ ಲಡ್ಡುಗಳನ್ನು ಕಳುಹಿಸುವುದು ವಾಡಿಕೆ ಎಂದು ದೇವ್ರಹ ಹನ್ಸ್ ಬಾಬಾ ಟ್ರಸ್ಟ್ ನ ಟ್ರಸ್ಟಿ ಅತುಲ್ ಕುಮಾರ್ ಸಕ್ಸೇನಾ ಅವರು ಹೇಳಿದ್ದಾರೆ.

ಇದನ್ನೂ ಓದಿ : ಈ ನಿಗೂಢ ದೇವಾಲಯದಲ್ಲಿ ದೇವಿಯ ವಿಗ್ರಹ ದಿನಕ್ಕೆ ಮೂರು ಬಾರಿ ರೂಪ ಬದಲಾಯಿಸುತ್ತದೆ!

ರಾಮ ಲಲ್ಲಾಗೆ ಸುಮಾರು 56 ರೀತಿಯ ನೈವೇದ್ಯ!

ಶ್ರೀರಾಮ ಮಂದಿರದಲ್ಲಿ ನಡೆಯುತ್ತಿರುವ ರಾಮ ನವಮಿಯ ಬಗ್ಗೆ ಮಾತನಾಡಿದ ರಾಮ ಜನ್ಮಭೂಮಿ ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್, ದೇವಾಲಯದ ಟ್ರಸ್ಟ್ ಎಲ್ಲಾ ಸಿದ್ಧತೆಗಳನ್ನು ಮಾಡಿದೆ ಎಂದು ಹೇಳಿದರು. ರಾಮನವಮಿಯ ದಿನ ರಾಮ ಲಲ್ಲಾಗೆ ಸುಮಾರು 56 ರೀತಿಯ ನೈವೇದ್ಯ ಪ್ರಸಾದವನ್ನು ಸಹ ನೀಡಲಾಗುವುದು ಎಂದಿದ್ದಾರೆ.

ರಾಮ ಮಂದಿರ ಟ್ರಸ್ಟ್ ಸೋಮವಾರ ಭಕ್ತರಿಗೆ ರಾಮ ನವಮಿ ಆಚರಣೆಗಾಗಿ ಅಯೋಧ್ಯೆಗೆ ಭೇಟಿ ನೀಡದಂತೆ ಮನವಿ ಮಾಡಿದೆ. ಬದಲಿಗೆ ದೂರದರ್ಶನದಲ್ಲಿ ನೇರ ಪ್ರಸಾರವನ್ನು ವೀಕ್ಷಿಸಲು ಸೂಚಿಸಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:43 pm, Tue, 16 April 24

Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us