AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami 2024: ರಾಮ ನವಮಿಯ ದಿನ ಪಾನಕ ಮಾಡುವುದೇಕೆ? ಇದರ ಹಿಂದಿರುವ ಅಧ್ಯಾತ್ಮ ಕಾರಣವೇನು?

 ರಾಮ ನವಮಿ ಹಬ್ಬದ ದಿನ, ಕಡುಬು, ಪಾಯಸ, ಹೋಳಿಗೆ, ಚಕ್ಕುಲಿ ಮಾಡುವ ಬದಲು ಬೆಲ್ಲದ ಪಾನಕ, ಹೆಸರುಬೇಳೆ ಕೋಸಂಬರಿ ಅಥವಾ ಕಿಚಡಿ, ಮಜ್ಜಿಗೆಯನ್ನು ನೈವೇದ್ಯ ಮಾಡಿ ಬಳಿಕ ಶ್ರೀರಾಮನ ಭಕ್ತರಿಗೆ ವಿತರಿಸಲಾಗುತ್ತದೆ. ಪುರಾಣಗಳಲ್ಲಿ ಹೇಳಿರುವ ಪ್ರಕಾರ ಈ ದಿನದಂದು ರಾಮನಿಗೆ ಬೆಲ್ಲದ ಪಾನಕ, ಮಜ್ಜಿಗೆ ಹಾಗೂ ಹೆಸರು ಬೇಳೆ ನೈವೇದ್ಯ ಮಾಡಿದಲ್ಲಿ ಆತ ಸಂತೃಪ್ತನಾಗುತ್ತಾನೆ ಎನ್ನಲಾಗಿದೆ. ಹಾಗಾದರೆ ಯಾಕೆ ಇದೆ ರೀತಿಯ ನೈವೇದ್ಯವನ್ನು ರಾಮನಿಗೆ ಅರ್ಪಣೆ ಮಾಡಬೇಕು? ಇದರ ಹಿಂದಿರುವ ವೈಜ್ಞಾನಿಕ, ಧಾರ್ಮಿಕ ಕಾರಣವೇನು?

Ram Navami 2024: ರಾಮ ನವಮಿಯ ದಿನ ಪಾನಕ ಮಾಡುವುದೇಕೆ? ಇದರ ಹಿಂದಿರುವ ಅಧ್ಯಾತ್ಮ ಕಾರಣವೇನು?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Apr 17, 2024 | 11:15 AM

Share

ಚೈತ್ರ ನವರಾತ್ರಿಯ ಕೊನೆಯ ದಿನ ಅಂದರೆ ಈ ಬಾರಿ ಎ. 17 ರಂದು (ಇಂದು) ರಾಮ ನವಮಿಯನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ಈ ದಿನ ವಿಷ್ಣುವು ರಾಮನ ಅವತಾರ ತಾಳಿದನು ಎಂಬ ನಂಬಿಕೆ ಇದೆ. ಶ್ರೀರಾಮನು ಉತ್ತರ ಭಾರತದ ಅಯೋಧ್ಯೆಯಲ್ಲಿ ಸೂರ್ಯವಂಶಿ ಇಕ್ಷವಾಕು ವಂಶಕ್ಕೆ ಸೇರಿದವನು. ಈ ದಿನವು ತ್ರೇತಾ ಯುಗದಲ್ಲಿ ರಾಜ ದಶರಥ ಮತ್ತು ಅವನ ಮೊದಲ ಪತ್ನಿ, ರಾಣಿ ಕೌಸಲ್ಯೆಗೆ ಜನಿಸಿದ ಶ್ರೀರಾಮನ ಜನ್ಮದಿನವಾಗಿದೆ.

ಶ್ರೀರಾಮನವಮಿ ಚೈತ್ರ ಮಾಸದ ಶುಕ್ಲ ಪಕ್ಷದಲ್ಲಿ ಬರುವ ಹಬ್ಬ. ಈ ದಿನ ರಾಮನನ್ನು ಭಕ್ತಿಯಿಂದ ಪೂಜಿಸಿದರೆ ಕಷ್ಟ, ಕಾರ್ಪಣ್ಯಗಳು ದೂರವಾಗುತ್ತದೆ ಎಂಬ ನಂಬಿಕೆ ಇದೆ. ಇನ್ನು ನೈವೇದ್ಯದ ವಿಷಯಕ್ಕೆ ಬರುವುದಾದರೆ ಈ ಹಬ್ಬದ ದಿನ, ಕಡುಬು, ಪಾಯಸ, ಹೋಳಿಗೆ, ಚಕ್ಕುಲಿ ಮಾಡುವ ಬದಲು ಬೆಲ್ಲದ ಪಾನಕ, ಹೆಸರುಬೇಳೆ ಕೋಸಂಬರಿ ಅಥವಾ ಕಿಚಡಿ, ಮಜ್ಜಿಗೆಯನ್ನು ನೈವೇದ್ಯ ಮಾಡಿ ಬಳಿಕ ಶ್ರೀರಾಮನ ಭಕ್ತರಿಗೆ ವಿತರಿಸಲಾಗುತ್ತದೆ. ಪುರಾಣಗಳಲ್ಲಿ ಹೇಳಿರುವ ಪ್ರಕಾರ ಈ ದಿನದಂದು ರಾಮನಿಗೆ ಬೆಲ್ಲದ ಪಾನಕ, ಮಜ್ಜಿಗೆ ಹಾಗೂ ಹೆಸರು ಬೇಳೆ ನೈವೇದ್ಯ ಮಾಡಿದಲ್ಲಿ ಆತ ಸಂತೃಪ್ತನಾಗುತ್ತಾನೆ ಎನ್ನಲಾಗಿದೆ. ಹಾಗಾದರೆ ಯಾಕೆ ಇದೆ ರೀತಿಯ ನೈವೇದ್ಯವನ್ನು ರಾಮನಿಗೆ ಅರ್ಪಣೆ ಮಾಡಬೇಕು? ಇದರ ಹಿಂದಿರುವ ವೈಜ್ಞಾನಿಕ, ಧಾರ್ಮಿಕ ಕಾರಣವೇನು?

ಇದನ್ನೂ ಓದಿ: ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ “ಮಥಾಡಿ” ಮಹಾಪ್ರಸಾದ!

ಬೆಲ್ಲದ ಪಾನಕ ನೈವೇದ್ಯ ಮಾಡುವುದರ ಹಿಂದಿದೆ ವೈಜ್ಞಾನಿಕ, ಧಾರ್ಮಿಕ ಕಾರಣ!

ಚೈತ್ರಮಾಸ ಯಾವಾಗಲೂ ಅತ್ಯಂತ ಉಷ್ಣಾಂಶದಿಂದ ಕೂಡಿರುತ್ತದೆ. ಈ ಬಿಸಿಲ ಧಗೆಯಿಂದ ತತ್ತರಿಸುತ್ತಿರುವಾಗ ತಣ್ಣನೆಯ ಬೆಲ್ಲದ ಪಾನಕ, ಮಜ್ಜಿಗೆ, ಹೆಸರುಬೇಳೆ ಕಿಚಡಿ ಅಥವಾ ಕೋಸಂಬರಿಯ ಸೇವನೆ ಮಾಡುವುದರಿಂದ ಆರೋಗ್ಯ ಚೆನ್ನಾಗಿರುತ್ತದೆ ಜೊತೆಗೆ ಈ ಪದಾರ್ಥಗಳು ದೇಹವನ್ನು ತಂಪಾಗಿಸುತ್ತದೆ ಎಂಬುದು ಇದರ ಹಿಂದಿರುವ ವೈಜ್ಞಾನಿಕ ಕಾರಣವಾಗಿದೆ. ಇನ್ನು ವಿಷ್ಣು ಪಾನಕ ಪ್ರೀಯ. ಇದನ್ನು ಪುರಾಣಗಳಲ್ಲಿಯೂ ವರ್ಣಿಸಲಾಗಿದೆ. ರಾಮ ಅವನ ಅವತಾರವಾಗಿರುವುದರಿಂದ ಅವನಿಗೆ ಪಾನಕ, ಮಜ್ಜಿಗೆಯನ್ನು ಅರ್ಪಣೆ ಮಾಡಲಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:13 am, Wed, 17 April 24

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ