AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami 2024: ರಾಮ ನವಮಿಯ ದಿನ ಪಾನಕ ಮಾಡುವುದೇಕೆ? ಇದರ ಹಿಂದಿರುವ ಅಧ್ಯಾತ್ಮ ಕಾರಣವೇನು?

 ರಾಮ ನವಮಿ ಹಬ್ಬದ ದಿನ, ಕಡುಬು, ಪಾಯಸ, ಹೋಳಿಗೆ, ಚಕ್ಕುಲಿ ಮಾಡುವ ಬದಲು ಬೆಲ್ಲದ ಪಾನಕ, ಹೆಸರುಬೇಳೆ ಕೋಸಂಬರಿ ಅಥವಾ ಕಿಚಡಿ, ಮಜ್ಜಿಗೆಯನ್ನು ನೈವೇದ್ಯ ಮಾಡಿ ಬಳಿಕ ಶ್ರೀರಾಮನ ಭಕ್ತರಿಗೆ ವಿತರಿಸಲಾಗುತ್ತದೆ. ಪುರಾಣಗಳಲ್ಲಿ ಹೇಳಿರುವ ಪ್ರಕಾರ ಈ ದಿನದಂದು ರಾಮನಿಗೆ ಬೆಲ್ಲದ ಪಾನಕ, ಮಜ್ಜಿಗೆ ಹಾಗೂ ಹೆಸರು ಬೇಳೆ ನೈವೇದ್ಯ ಮಾಡಿದಲ್ಲಿ ಆತ ಸಂತೃಪ್ತನಾಗುತ್ತಾನೆ ಎನ್ನಲಾಗಿದೆ. ಹಾಗಾದರೆ ಯಾಕೆ ಇದೆ ರೀತಿಯ ನೈವೇದ್ಯವನ್ನು ರಾಮನಿಗೆ ಅರ್ಪಣೆ ಮಾಡಬೇಕು? ಇದರ ಹಿಂದಿರುವ ವೈಜ್ಞಾನಿಕ, ಧಾರ್ಮಿಕ ಕಾರಣವೇನು?

Ram Navami 2024: ರಾಮ ನವಮಿಯ ದಿನ ಪಾನಕ ಮಾಡುವುದೇಕೆ? ಇದರ ಹಿಂದಿರುವ ಅಧ್ಯಾತ್ಮ ಕಾರಣವೇನು?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Apr 17, 2024 | 11:15 AM

Share

ಚೈತ್ರ ನವರಾತ್ರಿಯ ಕೊನೆಯ ದಿನ ಅಂದರೆ ಈ ಬಾರಿ ಎ. 17 ರಂದು (ಇಂದು) ರಾಮ ನವಮಿಯನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ಈ ದಿನ ವಿಷ್ಣುವು ರಾಮನ ಅವತಾರ ತಾಳಿದನು ಎಂಬ ನಂಬಿಕೆ ಇದೆ. ಶ್ರೀರಾಮನು ಉತ್ತರ ಭಾರತದ ಅಯೋಧ್ಯೆಯಲ್ಲಿ ಸೂರ್ಯವಂಶಿ ಇಕ್ಷವಾಕು ವಂಶಕ್ಕೆ ಸೇರಿದವನು. ಈ ದಿನವು ತ್ರೇತಾ ಯುಗದಲ್ಲಿ ರಾಜ ದಶರಥ ಮತ್ತು ಅವನ ಮೊದಲ ಪತ್ನಿ, ರಾಣಿ ಕೌಸಲ್ಯೆಗೆ ಜನಿಸಿದ ಶ್ರೀರಾಮನ ಜನ್ಮದಿನವಾಗಿದೆ.

ಶ್ರೀರಾಮನವಮಿ ಚೈತ್ರ ಮಾಸದ ಶುಕ್ಲ ಪಕ್ಷದಲ್ಲಿ ಬರುವ ಹಬ್ಬ. ಈ ದಿನ ರಾಮನನ್ನು ಭಕ್ತಿಯಿಂದ ಪೂಜಿಸಿದರೆ ಕಷ್ಟ, ಕಾರ್ಪಣ್ಯಗಳು ದೂರವಾಗುತ್ತದೆ ಎಂಬ ನಂಬಿಕೆ ಇದೆ. ಇನ್ನು ನೈವೇದ್ಯದ ವಿಷಯಕ್ಕೆ ಬರುವುದಾದರೆ ಈ ಹಬ್ಬದ ದಿನ, ಕಡುಬು, ಪಾಯಸ, ಹೋಳಿಗೆ, ಚಕ್ಕುಲಿ ಮಾಡುವ ಬದಲು ಬೆಲ್ಲದ ಪಾನಕ, ಹೆಸರುಬೇಳೆ ಕೋಸಂಬರಿ ಅಥವಾ ಕಿಚಡಿ, ಮಜ್ಜಿಗೆಯನ್ನು ನೈವೇದ್ಯ ಮಾಡಿ ಬಳಿಕ ಶ್ರೀರಾಮನ ಭಕ್ತರಿಗೆ ವಿತರಿಸಲಾಗುತ್ತದೆ. ಪುರಾಣಗಳಲ್ಲಿ ಹೇಳಿರುವ ಪ್ರಕಾರ ಈ ದಿನದಂದು ರಾಮನಿಗೆ ಬೆಲ್ಲದ ಪಾನಕ, ಮಜ್ಜಿಗೆ ಹಾಗೂ ಹೆಸರು ಬೇಳೆ ನೈವೇದ್ಯ ಮಾಡಿದಲ್ಲಿ ಆತ ಸಂತೃಪ್ತನಾಗುತ್ತಾನೆ ಎನ್ನಲಾಗಿದೆ. ಹಾಗಾದರೆ ಯಾಕೆ ಇದೆ ರೀತಿಯ ನೈವೇದ್ಯವನ್ನು ರಾಮನಿಗೆ ಅರ್ಪಣೆ ಮಾಡಬೇಕು? ಇದರ ಹಿಂದಿರುವ ವೈಜ್ಞಾನಿಕ, ಧಾರ್ಮಿಕ ಕಾರಣವೇನು?

ಇದನ್ನೂ ಓದಿ: ಪ್ರಾಚೀನ ಶ್ರೀನಾಥ ದೇವಾಲಯದಿಂದ ಅಯೋಧ್ಯೆ ರಾಮನಿಗೆ “ಮಥಾಡಿ” ಮಹಾಪ್ರಸಾದ!

ಬೆಲ್ಲದ ಪಾನಕ ನೈವೇದ್ಯ ಮಾಡುವುದರ ಹಿಂದಿದೆ ವೈಜ್ಞಾನಿಕ, ಧಾರ್ಮಿಕ ಕಾರಣ!

ಚೈತ್ರಮಾಸ ಯಾವಾಗಲೂ ಅತ್ಯಂತ ಉಷ್ಣಾಂಶದಿಂದ ಕೂಡಿರುತ್ತದೆ. ಈ ಬಿಸಿಲ ಧಗೆಯಿಂದ ತತ್ತರಿಸುತ್ತಿರುವಾಗ ತಣ್ಣನೆಯ ಬೆಲ್ಲದ ಪಾನಕ, ಮಜ್ಜಿಗೆ, ಹೆಸರುಬೇಳೆ ಕಿಚಡಿ ಅಥವಾ ಕೋಸಂಬರಿಯ ಸೇವನೆ ಮಾಡುವುದರಿಂದ ಆರೋಗ್ಯ ಚೆನ್ನಾಗಿರುತ್ತದೆ ಜೊತೆಗೆ ಈ ಪದಾರ್ಥಗಳು ದೇಹವನ್ನು ತಂಪಾಗಿಸುತ್ತದೆ ಎಂಬುದು ಇದರ ಹಿಂದಿರುವ ವೈಜ್ಞಾನಿಕ ಕಾರಣವಾಗಿದೆ. ಇನ್ನು ವಿಷ್ಣು ಪಾನಕ ಪ್ರೀಯ. ಇದನ್ನು ಪುರಾಣಗಳಲ್ಲಿಯೂ ವರ್ಣಿಸಲಾಗಿದೆ. ರಾಮ ಅವನ ಅವತಾರವಾಗಿರುವುದರಿಂದ ಅವನಿಗೆ ಪಾನಕ, ಮಜ್ಜಿಗೆಯನ್ನು ಅರ್ಪಣೆ ಮಾಡಲಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:13 am, Wed, 17 April 24

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ