Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami 2024: ರಾಮ ನವಮಿಯ ದಿನ ಈ ವಿಧಾನದಿಂದ ರಾಮನನ್ನು ಪೂಜಿಸಿ!

ವಾಲ್ಮೀಕಿ ರಾಮಾಯಣದ ಪ್ರಕಾರ, ಭಗವಾನ್ ರಾಮನು ಕರ್ಕಾಟಕ ಲಗ್ನದಲ್ಲಿ ಮಧ್ಯಾಹ್ನ 12 ಗಂಟೆಗೆ ಜನಿಸಿದನು. ಹಾಗಾಗಿಯೇ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನವನ್ನು ಪವಿತ್ರ ದಿನಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಈ ಬಾರಿ ರಾಮನವಮಿಯಂದು ಬಹಳ ಅಪರೂಪದ ಯೋಗ ಕೂಡಿ ಬಂದಿದ್ದು, ಜನರಿಗೆ ಶುಭವಾಗಲಿದೆ.

Ram Navami 2024: ರಾಮ ನವಮಿಯ ದಿನ ಈ ವಿಧಾನದಿಂದ ರಾಮನನ್ನು ಪೂಜಿಸಿ!
Ram Navami 2024
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 16, 2024 | 10:53 AM

ಚೈತ್ರ ನವರಾತ್ರಿಯ ಕೊನೆಯ ದಿನ ಅಂದರೆ ಎ. 17 ರಂದು ರಾಮ ನವಮಿಯನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಈ ದಿನ ವಿಷ್ಣುವು ರಾಮನ ಅವತಾರ ತಾಳಿದನು ಎಂಬ ನಂಬಿಕೆ ಇದೆ. ವಾಲ್ಮೀಕಿ ರಾಮಾಯಣದ ಪ್ರಕಾರ, ಭಗವಾನ್ ರಾಮನು ಕರ್ಕಾಟಕ ಲಗ್ನದಲ್ಲಿ ಮಧ್ಯಾಹ್ನ 12 ಗಂಟೆಗೆ ಜನಿಸಿದನು. ಹಾಗಾಗಿಯೇ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನವನ್ನು ಪವಿತ್ರ ದಿನಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಈ ಬಾರಿ ರಾಮನವಮಿಯಂದು ಬಹಳ ಅಪರೂಪದ ಯೋಗ ಕೂಡಿ ಬಂದಿದ್ದು, ಜನರಿಗೆ ಶುಭವಾಗಲಿದೆ.

ರಾಮನವಮಿ ಪೂಜೆಗೆ ಶುಭ ಸಮಯ:

ಪಂಚಾಂಗದ ಪ್ರಕಾರ, ಎ. 17 ರಾಮನವಮಿಯ ದಿನ ಬೆಳಿಗ್ಗೆ 11:40 ರಿಂದ ಮಧ್ಯಾಹ್ನ 1:40 ರ ನಡುವೆ ಅಭಿಜಿತ್ ಮುಹೂರ್ತವಿದೆ. ಈ ಮಧ್ಯೆ, ರಾಮ ಜನ್ಮೋತ್ಸವವನ್ನು ಆಚರಿಸಿ, ಭಗವಾನ್ ರಾಮ ಲಲ್ಲಾನ ಪೂಜೆ ಮಾಡಿ. ಈ ದಿನ ಮನೆ ನಿರ್ಮಾಣ ಅಥವಾ ಉದ್ಘಾಟನೆ, ಅಂಗಡಿ ಉದ್ಘಾಟನೆ, ಕಾರ್ಖಾನೆಯ ಪೂಜೆ, ಅಂಗಡಿ ಪೂಜೆಯಂತಹ ಯಾವುದೇ ರೀತಿಯ ಧಾರ್ಮಿಕ ಕಾರ್ಯಗಳನ್ನು ಮಾಡಬಹುದಾಗಿದೆ.

ರಾಮ ನವಮಿ ಪೂಜಾ ಸಾಮಗ್ರಿಗಳು:

ಪೂಜೆಯಲ್ಲಿ ಶ್ರೀಗಂಧ, ತುಳಸಿ, ಅಕ್ಷತೆ, ಕರ್ಪೂರ, ಹೂವು, ಹಾರ, ಕುಂಕುಮವನ್ನು ಇಟ್ಟುಕೊಳ್ಳಿ. ನಿಮ್ಮ ಮನೆಯಲ್ಲಿರುವ ಶ್ರೀ ರಾಮನ ಹಿತ್ತಾಳೆ ಅಥವಾ ಬೆಳ್ಳಿಯ ವಿಗ್ರಹದ ಅಭಿಷೇಕಕ್ಕೆ ಹಾಲು, ಮೊಸರು, ಜೇನುತುಪ್ಪ, ಸಕ್ಕರೆ ಮತ್ತು ಗಂಗಾ ಜಲದ ವ್ಯವಸ್ಥೆ ಮಾಡಿಕೊಳ್ಳಿ. ಸಿಹಿತಿಂಡಿ, ಹಳದಿ ಬಟ್ಟೆ, ಧೂಪದ್ರವ್ಯ, ದೀಪ, ಸುಂದರಕಾಂಡ ಅಥವಾ ರಾಮಾಯಣ ಪುಸ್ತಕ, ವೀಳ್ಯದೆಲೆ, ಲವಂಗ, ಏಲಕ್ಕಿ ಎಲ್ಲವೂ ಪೂಜೆಗೆ ಬೇಕಾಗುತ್ತದೆ.

ಇದನ್ನೂ ಓದಿ: ಮನೆಯ ದೇವರ ಕೋಣೆಯಲ್ಲಿ ಈ ಮೂರು ವಿಗ್ರಹಗಳು ಇರಲೇಬೇಕು!

ರಾಮನವಮಿಯ ಪೂಜಾ ವಿಧಾನ:

ರಾಮನವಮಿಯ ದಿನ ಬ್ರಹ್ಮಮುಹೂರ್ತದಲ್ಲಿ ಎದ್ದು ಸ್ನಾನ ಮಾಡಿ, ತಾಮ್ರದ ಪಾತ್ರೆಯಲ್ಲಿ ಸೂರ್ಯ ದೇವರಿಗೆ ಅರ್ಘ್ಯವನ್ನು ಅರ್ಪಿಸಿ. ಭಗವಾನ್ ರಾಮನ ದರ್ಶನ ಪಡೆದ ನಂತರ, ಮನೆಗೆ ಬಂದು ಅಲ್ಲಿಯ ದೇವರನ್ನು ಅಲಂಕರಿಸಿ, ಗಣೇಶನಿಗೆ ಮೊದಲ ಪೂಜೆ ಮಾಡಿ. ನಂತರ ಶ್ರೀರಾಮನನ್ನು ಪೂಜಿಸಿರಿ. ದೇವರಿಗೆ ಹಾಲು ಮತ್ತು ಮೊಸರನ್ನು ಬೆರೆಸಿ ಅಭಿಷೇಕ ಮಾಡಿ. ಬಳಿಕ ವಿವಿಧ ರೀತಿಯ ಹೂವುಗಳಿಂದ ಮೂರ್ತಿಯನ್ನು ಅಲಂಕರಿಸಿ, ರಾಮನಾಮವನ್ನು 108 ಬಾರಿ ಪಠಿಸಿ. ಇದರ ನಂತರ, ಆರತಿ ಮಾಡಿ ಪ್ರಸಾದವನ್ನು ಎಲ್ಲರಿಗೂ ವಿತರಿಸಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:55 pm, Sun, 14 April 24

ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ