AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami 2025: ವಿವಾಹದಲ್ಲಿ ಅಡೆತಡೆ ಅಥವಾ ವಿಳಂಬವಾಗುತ್ತಿದೆಯೇ? ರಾಮನವಮಿಯಂದು ಈ ಪರಿಹಾರ ಮಾಡಿ

ರಾಮನವಮಿಯಂದು ವಿವಿಧ ಪರಿಹಾರಗಳನ್ನು ಮಾಡುವುದರಿಂದ ಮದುವೆಯಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ ಎಂದು ನಂಬಲಾಗಿದೆ. ಸೀತಾ ದೇವಿಗೆ ಅರಿಶಿನ, ಶ್ರೀಗಂಧ, ಕುಂಕುಮ ಅರ್ಪಿಸುವುದು, 11 ದೀಪಗಳನ್ನು ಬೆಳಗಿಸುವುದು, ಹನುಮಂತನ ಪೂಜೆ ಮತ್ತು ಹನುಮಾನ್ ಚಾಲೀಸಾ ಪಠಣ ಇತ್ಯಾದಿಗಳನ್ನು ಮಾಡುವುದರಿಂದ ಸಂತೋಷ, ಸಮೃದ್ಧಿ, ಆರೋಗ್ಯ ಮತ್ತು ಮಕ್ಕಳಿಗೆ ಅನುಗ್ರಹ ದೊರೆಯುತ್ತದೆ ಎಂದು ಹೇಳಲಾಗುತ್ತದೆ.

Ram Navami 2025: ವಿವಾಹದಲ್ಲಿ ಅಡೆತಡೆ ಅಥವಾ ವಿಳಂಬವಾಗುತ್ತಿದೆಯೇ? ರಾಮನವಮಿಯಂದು ಈ ಪರಿಹಾರ ಮಾಡಿ
Ram Navami 2025Image Credit source: Pinterest
ಅಕ್ಷತಾ ವರ್ಕಾಡಿ
|

Updated on:Apr 04, 2025 | 7:50 AM

Share

ಎಲ್ಲಾ ತಂದೆ, ತಾಯಂದಿರೂ ತಮ್ಮ ಮಕ್ಕಳಿಗೆ ಸೂಕ್ತ ವಯಸ್ಸಿನಲ್ಲಿ ಮದುವೆ ಮಾಡಬೇಕೆಂದು ಇಚ್ಛಿಸುತ್ತಾರೆ. ಕೆಲವರಿಗೆ ಮದುವೆಯಾಗಬೇಕೆಂದು ಹೊರಟಾಗಲೇ ಸಾಕಷ್ಟು ಅಡೆತಡೆಗಳು ಎದುರಾಗಿಬಿಡುತ್ತವೆ. ಎಷ್ಟೇ ಪ್ರಯತ್ನಿಸಿದರೂ ಮದುವೆ ಪ್ರಸ್ತಾವ ಪದೇ ಪದೇ ಚಿಕ್ಕ ಪುಟ್ಟ ಕಾರಣಕ್ಕೆ ಮುಂದೂಡಲಾಗುತ್ತದೆ. ನಿಮಗೆ ಅಥವಾ ನಿಮ್ಮ ಹತ್ತಿರದವರಿಗೆ ಈ ಅನುಭವ ಆಗಿದ್ದರೆ ಈ ರಾಮನವಮಿಯಂದು ಕೆಲ ಸರಳ ಮಾರ್ಗಗಳನ್ನು ಪಾಲಿಸಿ ಸಮಸ್ಯೆ ನಿವಾರಿಸಿಕೊಳ್ಳಲು ಪ್ರಯತ್ನಿಸಿ.

ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯನ್ನು ಹಿಂದೂ ಧರ್ಮದಲ್ಲಿ ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಏಕೆಂದರೆ ಈ ದಿನದಂದು ರಾಮನ ಜನ್ಮದಿನವನ್ನು ಆಚರಿಸಲಾಗುತ್ತದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಈ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿ ಏಪ್ರಿಲ್ 5 ರಂದು ಸಂಜೆ 7:26 ಕ್ಕೆ ಪ್ರಾರಂಭವಾಗುತ್ತದೆ. ಆ ತಿಧಿಯು ಮರುದಿನ, ಏಪ್ರಿಲ್ 6 ರಂದು ಸಂಜೆ 7:22 ಕ್ಕೆ ಕೊನೆಗೊಳ್ಳುತ್ತದೆ. ಶ್ರೀರಾಮ ನವಮಿಯನ್ನು ಏಪ್ರಿಲ್ 6 ರಂದು ಉದಯ ತಿಥಿಯ ಪ್ರಕಾರ ಆಚರಿಸಲಾಗುತ್ತದೆ.

ಶ್ರೀ ರಾಮ ನವಮಿಯಂದು ಮಾಡಬೇಕಾದ ಪರಿಹಾರಗಳು:

ಮದುವೆ ವಿಳಂಬ: 

ಇದನ್ನೂ ಓದಿ
Image
ಸೀತಾ ದೇವಿಯು ಭೂಮಿಯನ್ನು ಸೇರಿದ ಪವಿತ್ರ ಸ್ಥಳ ಎಲ್ಲಿದೆ ಗೊತ್ತಾ?
Image
ಈ ವರ್ಷ ರಾಮ ನವಮಿ ಯಾವಾಗ ಆಚರಿಸಲಾಗುತ್ತದೆ?ಪುರಾಣ ಕಥೆ ಹಾಗೂ ಮಹತ್ವ ಇಲ್ಲಿದೆ
Image
ರಾಮ ನವಮಿಯಂದು ಈ ವಸ್ತುಗಳನ್ನು ಮನೆಗೆ ತರುವುದು ತುಂಬಾ ಒಳ್ಳೆಯದು!
Image
ಕನಸಿನಲ್ಲಿ ನವಿಲು ಕಂಡರೆ ಏನರ್ಥ? ಶುಭವೋ, ಅಶುಭವೋ?

ಯಾರಾದರೂ ತಮ್ಮ ಮದುವೆಯಲ್ಲಿ ಪದೇ ಪದೇ ಅಡೆತಡೆಗಳನ್ನು ಎದುರಿಸುತ್ತಿದ್ದರೆ, ಶ್ರೀ ರಾಮ ನವಮಿಯ ಸಂಜೆ ಸೀತಾ ದೇವಿಗೆ ಅರಿಶಿನ, ಶ್ರೀಗಂಧ ಮತ್ತು ಕುಂಕುಮವನ್ನು ಅರ್ಪಿಸಿ. ಹೀಗೆ ಮಾಡುವುದರಿಂದ ಮದುವೆಯಲ್ಲಿನ ಅಡೆತಡೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ. ಅಷ್ಟೇ ಅಲ್ಲ, ನೀವು ಬಯಸುವ ಜೀವನ ಸಂಗಾತಿಯನ್ನು ಸಹ ಪಡೆಯಬಹುದು.

ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ:

ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತಿಗಾಗಿ, ರಾಮ ನವಮಿಯ ದಿನದಂದು ಶ್ರೀ ರಾಮನನ್ನು ಪೂಜಿಸಿ ಮತ್ತು ಮನೆಯ ಮುಖ್ಯ ದ್ವಾರದಲ್ಲಿ 11 ದೀಪಗಳನ್ನು ಬೆಳಗಿಸಿ.

ಇದನ್ನೂ ಓದಿ: ರಾಮ ನವಮಿಯಂದು ಈ ವಸ್ತುಗಳನ್ನು ಮನೆಗೆ ತರುವುದು ತುಂಬಾ ಒಳ್ಳೆಯದು!

ರೋಗಗಳಿಂದ ಮುಕ್ತಿ:

ರೋಗಗಳಿಂದ ಮುಕ್ತಿ ಪಡೆಯಲು ರಾಮ ನವಮಿಯಂದು ಹನುಮಂತನನ್ನು ಪೂಜಿಸಿ. ನಂತರ ಹನುಮಾನ್ ಚಾಲೀಸಾ ಪಠಿಸಿ. ಹೀಗೆ ಮಾಡುವುದರಿಂದ ದೀರ್ಘಕಾಲದ ಮತ್ತು ಗಂಭೀರ ಕಾಯಿಲೆಗಳಿಂದ ಪರಿಹಾರ ಸಿಗುತ್ತದೆ ಎಂದು ನಂಬಲಾಗಿದೆ.

ತಾಯ್ತನದ ಭಾಗ್ಯ: 

ಮಗುವನ್ನು ನಿರೀಕ್ಷಿಸುತ್ತಿರುವ ದಂಪತಿಗಳು ಶ್ರೀ ರಾಮ ನವಮಿಯ ದಿನದಂದು ಕೆಂಪು ಬಟ್ಟೆಗಳನ್ನು ಧರಿಸಬೇಕು. ಕೆಂಪು ಬಟ್ಟೆಯಲ್ಲಿ ತೆಂಗಿನಕಾಯಿಯನ್ನು ಸುತ್ತಿ ಸೀತಾ ದೇವಿಯ ಪಾದಗಳಿಗೆ ಅರ್ಪಿಸಿ. ನಂತರ ಓಂ ನಮಃ ಶಿವಾಯ ಮಂತ್ರವನ್ನು 108 ಬಾರಿ ಜಪಿಸಿ. ಹೀಗೆ ಮಾಡುವುದರಿಂದ ದಂಪತಿಗಳಿಗೆ ಶೀಘ್ರದಲ್ಲೇ ಮಕ್ಕಳಾಗುವ ಅವಕಾಶ ಸಿಗುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:48 am, Fri, 4 April 25

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ