AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramadan 2022 Timetable: ಚಂದ್ರ ಗೋಚರ ಹಿನ್ನೆಲೆ ಏಪ್ರಿಲ್ 3ರಿಂದ ರಂಜಾನ್ ಉಪವಾಸ ಶುರು

ಬೆಂಗಳೂರಿನಲ್ಲಿ ಚಂದ್ರ ಗೋಚರಿಸಿರುವ ಹಿನ್ನೆಲೆಯಲ್ಲಿ(Ramadan Moon Sighted) ನಾಳೆಯಿಂದಲೇ ರಂಜಾನ್‌ನ ಮೊದಲ ಉಪವಾಸ ಆರಂಭವಾಗುತ್ತಿದೆ. ನಾಳೆಯಿಂದ ಒಂದು ತಿಂಗಳ ಕಾಲ ರಂಜಾನ್ ಉಪವಾಸ ಇಡಲಾಗುತ್ತೆ ಎಂದು ವಕ್ಫ್ಬೋರ್ಡ್ ಅಧ್ಯಕ್ಷ ಶಫಿ ಸಅದಿ ಮಾಹಿತಿ ನೀಡಿದ್ದಾರೆ.

Ramadan 2022 Timetable: ಚಂದ್ರ ಗೋಚರ ಹಿನ್ನೆಲೆ ಏಪ್ರಿಲ್ 3ರಿಂದ ರಂಜಾನ್ ಉಪವಾಸ ಶುರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 02, 2022 | 10:47 PM

Share

ಹಿಂದುಗಳ ಹೊಸ ವರ್ಷ ಎನ್ನಲಾಗುವ ಯುಗಾದಿ ಹಬ್ಬ ಆಚರಣೆ ಮುಗಿಯುತ್ತಿದ್ದಂತೆ ಏಪ್ರಿಲ್ 3ರಿಂದ ಮುಸ್ಲಿಮರ ಪವಿತ್ರ ಹಬ್ಬ ರಂಜಾನ್‌(Ramadan) ಉಪವಾಸ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಚಂದ್ರ ಗೋಚರಿಸಿರುವ ಹಿನ್ನೆಲೆಯಲ್ಲಿ(Ramadan Moon Sighted) ನಾಳೆಯಿಂದಲೇ ರಂಜಾನ್‌ನ ಮೊದಲ ಉಪವಾಸ ಆರಂಭವಾಗುತ್ತಿದೆ. ನಾಳೆಯಿಂದ ಒಂದು ತಿಂಗಳ ಕಾಲ ರಂಜಾನ್ ಉಪವಾಸ ಇಡಲಾಗುತ್ತೆ ಎಂದು ವಕ್ಫ್ಬೋರ್ಡ್ ಅಧ್ಯಕ್ಷ ಶಫಿ ಸಅದಿ ಮಾಹಿತಿ ನೀಡಿದ್ದಾರೆ.

ನಾಳೆಯಿಂದ ಉಪವಾಸ ಶುರು ಏಪ್ರಿಲ್ 3ರಂದು ಮೊದಲ ಉಪವಾಸ ಆರಂಭವಾಗುತ್ತೆ. ಈ ಪವಿತ್ರ ತಿಂಗಳ ಮೊದಲ ಮತ್ತು ಕೊನೆಯ ದಿನಾಂಕಗಳು ಚಂದ್ರನ ಇಸ್ಲಾಮಿಕ್ ಕ್ಯಾಲೆಂಡರ್ ಅನ್ನು ಅವಲಂಬಭಿಸಿರುತ್ತದೆ. ಅಮಾವಾಸ್ಯೆಯ ನಂತರ ಕಾಣಿಸಿಕೊಳ್ಳುವ ಅರ್ಧಚಂದ್ರಾಕೃತಿಯೊಂದಿಗೆ ಪ್ರಾರಂಭವಾಗುತ್ತದೆ. ರಂಜಾನ್‌ನ ಅರ್ಧಚಂದ್ರಾಕಾರವು ಸೌದಿ ಅರೇಬಿಯಾ ಮತ್ತು ಕೆಲವು ಪಾಶ್ಚಿಮಾತ್ಯ ದೇಶಗಳೊಂದಿಗೆ ಭಾರತದ ಕೆಲವು ಭಾಗಗಳಲ್ಲಿ ಮೊದಲು ಕಂಡುಬರುತ್ತದೆ ಮತ್ತು ಒಂದು ದಿನದ ನಂತರ ಉಳಿದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಇತರ ದೇಶಗಳಲ್ಲಿ ಕಂಡುಬರುತ್ತದೆ. ಹೀಗಾಗಿ ಚಂದ್ರನ ಮೂಲಕ ದಿನವನ್ನು, ಹಬ್ಬವನ್ನು ಲೆಕ್ಕ ಹಾಕಲಾಗುತ್ತೆ.

ರೋಜಾ ಅಥವಾ ಉಪವಾಸಕ್ಕೆ ಅದರದೇ ಆದ ಮಹತ್ವವಿದೆ. ಸೂರ್ಯೋದಯಕ್ಕೆ ಮುಂಚಿನ ತಿಂಡಿಯನ್ನು ಸೆಹ್ರಿ ಅಥವಾ ಸೋಹರ್ ಎಂದು ಕರೆಯಲಾಗುತ್ತದೆ ಮತ್ತು ಸೂರ್ಯಾಸ್ತದ ನಂತರ ಉಪವಾಸವನ್ನು ಮುಕ್ತಾಯಗೊಳಿಸುವ ಪ್ರಕ್ರಿಯೆಯನ್ನು ಇಫ್ತಾರ್ ಎಂದು ಕರೆಯಲಾಗುತ್ತದೆ. ಇನ್ನು ರಂಜಾನ್ ಸಮಯದಲ್ಲಿ ಕೇವಲ ದೇಹಕ್ಕೆ ಮಾತ್ರವಲ್ಲ ಮನಸ್ಸಿಗೂ ಉಪವಾಸ ಮಾಡಿಸಲಾಗುತ್ತದೆ. ಮುಸ್ಲಿಮರು ಉಪವಾಸದ ವೇಳೆ ಸಿಗರೇಟ್, ಮದ್ಯ, ತಂಬಾಕು ಸೇವನೆ, ಲೈಂಗಿಕ ಸಂಬಂಧವನ್ನು ಬೆಳೆಸುವುದನ್ನೂ ಕೂಡ ತಪ್ಪಿಸುತ್ತಾರೆ. ಏಕೆಂದರೆ ಉಪವಾಸದ ಸಮಯದಲ್ಲಿ ಇಂಥ ಚಟುವಟಿಕೆಗಳನ್ನು ಪಾಪ ಎಂದು ಪರಿಗಣಿಸಲಾಗುತ್ತದೆ. ರಂಜಾನ್ ತಿಂಗಳಲ್ಲಿ ಮುಸ್ಲಿಮರು ತಮ್ಮನ್ನು ಅಧ್ಯಾತ್ಮ ಪ್ರವೃತ್ತಿಗೆ ಅರ್ಪಿಸಿಕೊಳ್ಳುತ್ತಾರೆ. fasting calendar

ಸಾಮರಸ್ಯದಿಂದ ಯುಗಾದಿ ಹಬ್ಬ ಆಚರಿಸಿದ ಹಿಂದೂ-ಮುಸ್ಲಿಮರು ಹಿಂದೂ-ಮುಸ್ಲಿಂ ಧರ್ಮದವರೆಲ್ಲರೂ ಸೇರಿ ಯುಗಾದಿ ಹಬ್ಬವನ್ನು ಸಂತೋಷ, ಸಂಭ್ರಮದಿಂದ ಆಚರಿಸಿದ್ದಾರೆ. ಹಿಂದೂ ಮುಸ್ಲಿಂ ಸಹೋದರರು ಒಟ್ಟಾಗಿ ಹಬ್ಬ ಮಾಡಿ ಸಾಮರಸ್ಯದ ಸಂದೇಶ ಸಾರಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರ ಪಟ್ಟಣದ ಆಂಜನೇಯ ದೇವಸ್ಥಾನದ ಬಳಿ ಎರಡೂ ಧರ್ಮದವರು ಸೇರಿ ಬೇವು ತಯಾರಿಸಿ ಸಾರ್ವಜನಿಕರಿಗೆ ವಿತರಿಸಿ ಸಿಹಿ-ಕಹಿ ಜೀವನದಲ್ಲಿ ಸಾಮಾನ್ಯ. ದ್ವೇಶ, ವಿರೋಧ ಬಿಟ್ಟು ಒಟ್ಟಾಗಿ ಬಾಳೋಣ ಎಂದು ಸಂದೇಶ ರವಾನಿಸಿದ್ದಾರೆ. ರಾಜ್ಯದಲ್ಲಿ ಎರಡೂ ಧರ್ಮಗಳ ಮಧ್ಯೆ ಸಾಕಷ್ಟು ವಿವಾದಗಳು ಸೃಷ್ಟಿಯಾಗಿವೆ. ಇದರ ಮಧ್ಯೆ ಎರಡು ಧರ್ಮದವರಿಂದ ಯುಗಾದಿ ಹಬ್ಬ ಆಚರಣೆ ಮಾಡಲಾಗಿದೆ. ಧರ್ಮ ಧರ್ಮ ಅಂತ ಕಡಿದಾಡುವವರಿಗೆ ವಡಗೇರ ಜನ ಮಾದರಿಯಾಗಿದ್ದಾರೆ.

Ugadi

ಸಾಮರಸ್ಯದಿಂದ ಯುಗಾದಿ ಹಬ್ಬ ಆಚರಿಸಿದ ಹಿಂದೂ-ಮುಸ್ಲಿಮರು

ಸಾಮರಸ್ಯದಿಂದ ಯುಗಾದಿ ಹಬ್ಬ ಆಚರಿಸಿದ ಹಿಂದೂ-ಮುಸ್ಲಿಮರು

ಇದನ್ನೂ ಓದಿ: Ramadan 2022 Timetable: ಈ ವರ್ಷ ರಂಜಾನ್ ಯಾವಾಗ? ಭಾರತದಲ್ಲಿ ‘ಸೆಹ್ರಿ’ ಮತ್ತು ‘ಇಫ್ತಾರ್’ ಸಮಯದ ಡಿಟೇಲ್ಸ್ ಇಲ್ಲಿದೆ

ಗುಜರಾತ್ ನಲ್ಲಿ ಅರವಿಂದ ಕೇಜ್ರಿವಾಲ್ ಗೆ ಭಾರಿ ಸ್ವಾಗತ, ಱಲಿಯಲ್ಲಿ ಜನಸಾಗರ!

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ