AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasthu Tips: ವಾಸ್ತು ಪ್ರಕಾರ ಗುಲಾಬಿ ಗಿಡವನ್ನು ಮನೆಯ ಯಾವ ಭಾಗದಲ್ಲಿ ನೆಟ್ಟರೆ ಶುಭ

ವಾಸ್ತು ಶಾಸ್ತ್ರದ ಪ್ರಕಾರ, ಗುಲಾಬಿಗಳು ಪ್ರೀತಿ ಮತ್ತು ಸಂಪತ್ತಿನ ಸಂಕೇತ. ಲಕ್ಷ್ಮಿ ದೇವಿಗೆ ಪ್ರಿಯವಾದ ಗುಲಾಬಿಯನ್ನು ಮನೆಯ ನೈಋತ್ಯ ದಿಕ್ಕಿನಲ್ಲಿ ಬೆಳೆಸುವುದು ಶುಭ. ಗುಲಾಬಿ ದಳಗಳು, ನೀರು, ಮತ್ತು ಸುಗಂಧ ದ್ರವ್ಯಗಳು ಸಕಾರಾತ್ಮಕ ಶಕ್ತಿಯನ್ನು ತರುತ್ತವೆ ಮತ್ತು ನಕಾರಾತ್ಮಕತೆಯನ್ನು ದೂರ ಮಾಡುತ್ತವೆ. ಕೆಂಪು ಗುಲಾಬಿಯನ್ನು ನೆಡುವುದರಿಂದ ಲಕ್ಷ್ಮಿ ದೇವಿಯ ಅನುಗ್ರಹ ದೊರೆಯುತ್ತದೆ ಎಂದು ನಂಬಲಾಗಿದೆ.

Vasthu Tips: ವಾಸ್ತು ಪ್ರಕಾರ ಗುಲಾಬಿ ಗಿಡವನ್ನು ಮನೆಯ ಯಾವ ಭಾಗದಲ್ಲಿ ನೆಟ್ಟರೆ ಶುಭ
Rose
ಅಕ್ಷತಾ ವರ್ಕಾಡಿ
|

Updated on: Jul 06, 2025 | 5:48 PM

Share

ವಾಸ್ತು ಶಾಸ್ತ್ರದ ಪ್ರಕಾರ, ಗುಲಾಬಿಯನ್ನು ಪ್ರೀತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ ಮತ್ತು ಗುಲಾಬಿಗೆ ಸಂಬಂಧಿಸಿದ ಅನೇಕ ಪರಿಹಾರಗಳನ್ನು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಗುಲಾಬಿ ಹೂವು ಲಕ್ಷ್ಮಿ ದೇವಿಗೆ ತುಂಬಾ ಪ್ರಿಯವಾಗಿದೆ ಎಂದು ನಂಬಲಾಗಿದೆ. ಇದರ ಪರಿಮಳ ಶುಕ್ರ ಗ್ರಹಕ್ಕೆ ಸಂಬಂಧಿಸಿದೆ. ಇದನ್ನು ವಾಸ್ತು ಶಾಸ್ತ್ರದಲ್ಲಿ ಹಲವು ಬಾರಿ ಚರ್ಚಿಸಲಾಗಿದೆ. ಆದರೆ ಮನೆಯಲ್ಲಿ ಈ ಸಸ್ಯವನ್ನು ಯಾವ ದಿಕ್ಕಿನಲ್ಲಿ ಬೆಳೆಸುವುದು ಶುಭ ಎಂದು ತಿಳಿಯೋಣ.

ಲಕ್ಷ್ಮಿ ದೇವಿಗೆ ಗುಲಾಬಿಗಳು ತುಂಬಾ ಇಷ್ಟ. ವಾಸ್ತು ತಜ್ಞರು ಗುಲಾಬಿ ದಳಗಳು, ಗುಲಾಬಿ ನೀರು ಮತ್ತು ಗುಲಾಬಿ ಸುಗಂಧ ದ್ರವ್ಯಗಳ ಹಲವು ಉಪಯೋಗಗಳನ್ನು ಸೂಚಿಸುತ್ತಾರೆ. ಮನೆಯಲ್ಲಿ ಈ ಸಸ್ಯವನ್ನು ನೆಡುವುದರಿಂದ ಮನೆಗೆ ಸಕಾರಾತ್ಮಕ ಶಕ್ತಿ ಬರುತ್ತದೆ ಎಂದು ನಂಬಲಾಗಿದೆ. ಇದರ ಪರಿಮಳ ಮತ್ತು ಸೌಂದರ್ಯವು ಮನೆಯಲ್ಲಿ ಸಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ. ಇದು ಸಂಪತ್ತನ್ನು ಆಕರ್ಷಿಸುತ್ತದೆ.

ಪ್ರೇಮ ಸಂಬಂಧಗಳಿಗೆ ಗುಲಾಬಿಗಳು ಬಹಳ ಮುಖ್ಯ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಮಲಗುವ ಕೋಣೆಯಲ್ಲಿ ಗುಲಾಬಿ ದಳಗಳನ್ನು ಇಡುವುದು ಗಂಡ ಮತ್ತು ಹೆಂಡತಿಯ ನಡುವಿನ ಪ್ರೀತಿಯನ್ನು ಹೆಚ್ಚಿಸುವಲ್ಲಿ ಉಪಯುಕ್ತವಾಗಿವೆ.

ಇದನ್ನೂ ಓದಿ: ಮನೆಯಲ್ಲಿ ಮನಿ ಪ್ಲಾಂಟ್ ಈ ದಿಕ್ಕಿನಲ್ಲಿಡಿ; ಕೆಲವೇ ದಿನಗಳಲ್ಲಿ ಬದಲಾವಣೆ ಕಾಣುವಿರಿ

ವಾಸ್ತು ತಜ್ಞರ ಪ್ರಕಾರ, ಮನೆಯ ನೈಋತ್ಯ ದಿಕ್ಕಿನಲ್ಲಿ ಈ ಗಿಡವನ್ನು ನೆಡುವುದು ಶುಭ. ಲಕ್ಷ್ಮಿ ದೇವಿಯನ್ನು ಮೆಚ್ಚಿಸಲು ನೀವು ಈ ದಿಕ್ಕಿನಲ್ಲಿ ಕೆಂಪು ಗುಲಾಬಿಯನ್ನು ನೆಟ್ಟರೆ, ಲಕ್ಷ್ಮಿ ದೇವಿಯು ನಿಮ್ಮ ಕಡೆಗೆ ಆಕರ್ಷಿತಳಾಗುತ್ತಾಳೆ. ಶುಕ್ರವಾರದಂದು ಗುಲಾಬಿಗಳಿಂದ ಹಲವು ಉಪಯೋಗಗಳಿವೆ ಎಂದು ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯ ಎರಡೂ ಉಲ್ಲೇಖಿಸುತ್ತವೆ. ಅವುಗಳಲ್ಲಿ ಒಂದು ಲಕ್ಷ್ಮಿ ದೇವಿಗೆ ಗುಲಾಬಿಗಳನ್ನು ಅರ್ಪಿಸುವುದು. ಗುಲಾಬಿ ದಳಗಳನ್ನು ಕರ್ಪೂರದೊಂದಿಗೆ ಬೆರೆಸಿ ಸುಡುವುದರಿಂದ ಮನೆಗೆ ಸಕಾರಾತ್ಮಕತೆ ಬರುತ್ತದೆ. ಇದಲ್ಲದೇ ಮನೆಯಲ್ಲಿ ಗುಲಾಬಿ ಗಿಡವನ್ನು ನೆಡುವುದು ಸಂತೋಷ ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ಪರಿಹಾರವನ್ನು ಮಾಡುವುದರಿಂದ ಮನೆಯಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ