
ಜಪ ಎಂದರೆ ಕೇವಲ ಮಂತ್ರ ಪಠಣವಲ್ಲ, ಅದು ಭಗವಂತನೊಂದಿಗೆ ಭಾವನಾತ್ಮಕವಾಗಿ ಸಂಪರ್ಕ ಸಾಧಿಸುವ ಒಂದು ಪ್ರಕ್ರಿಯೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣನು “ಪತ್ರಂ ಪುಷ್ಪಂ ಫಲಂ ತೋಯಂ ಯೋ ಮೇ ಭಕ್ತ್ಯಾ ಪ್ರಯಚ್ಛತಿ, ತದಹಂ ಭಕ್ತ್ಯುಪಹೃತಮಶ್ನಾಮಿ ಪ್ರಯತಾತ್ಮನಃ” ಎಂದು ಹೇಳಿದ್ದು, ಭಕ್ತಿಯಿಂದ ಅರ್ಪಿಸಿದ ಒಂದು ಎಲೆ, ಹೂವು, ಹಣ್ಣು ಅಥವಾ ನೀರನ್ನೂ ಸಂತೋಷದಿಂದ ಸ್ವೀಕರಿಸುವುದಾಗಿ ತಿಳಿಸಿದ್ದಾನೆ. ಹಾಗೆಯೇ, ಜಪವು ನಮ್ಮ ಪ್ರೀತಿ ಮತ್ತು ಭಕ್ತಿಯ ಸಂಕೇತವಾಗಿದೆ.
ಪ್ರಾಚೀನ ಕೃತ, ತ್ರೇತಾ, ದ್ವಾಪರ ಯುಗಗಳಲ್ಲಿ ಭಗವಂತನನ್ನು ಒಲಿಸಿಕೊಳ್ಳಲು ಅಖಂಡ ಭಜನೆ, ತಪಸ್ಸು, ದೀರ್ಘಕಾಲದ ಯಜ್ಞ-ಯಾಗಾದಿಗಳು ಬೇಕಾಗಿದ್ದವು. ಆದರೆ ಕಲಿಯುಗದಲ್ಲಿ ಜಪಕ್ಕೆ ಅತಿ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಲಾಗಿದೆ. ಕೇವಲ ಒಂದು ಗಂಟೆಯ ಜಪದಿಂದಲೂ ದೈವಿಕ ಅನುಭೂತಿ ಪಡೆಯಲು ಸಾಧ್ಯ. ಜಪ ಮಾಡುವಾಗ ಕೆಲವರು ಮಾಲೆಗಳನ್ನು ಬಳಸಿದರೆ, ಮತ್ತೆ ಕೆಲವರು ಬಾಯಲ್ಲಿ ಅಥವಾ ಮೌನವಾಗಿ ಪಠಿಸುತ್ತಾರೆ. ಆದರೆ ಮಾಲೆಯೊಂದಿಗೆ ಜಪ ಮಾಡುವುದು ಏಕಾಗ್ರತೆ ಮತ್ತು ನಂಬಿಕೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: ಅನುಷ್ಕಾ ಶರ್ಮಾ ಕತ್ತಿನಲ್ಲಿರುವ ತುಳಸಿ ಮಾಲೆ ಗಮನಿಸಿದ್ದೀರಾ? ಧರಿಸುವುದರ ಹಿಂದಿನ ಅಸಲಿ ಕಾರಣ ಇಲ್ಲಿದೆ
ಯಾವುದೇ ಮಾಲೆಯನ್ನು ಕೇವಲ ಶೋಕಿಗಾಗಿ ಅಥವಾ ಜನರಿಗೆ ಆಧ್ಯಾತ್ಮಿಕತೆಯನ್ನು ಪ್ರದರ್ಶಿಸಲು ಧರಿಸಬಾರದು. ಮಾಲೆಯನ್ನು ಧರಿಸಿದಾಗ ನಮ್ಮ ಮನಸ್ಸು ಭಗವಂತನ ಕಡೆಗೆ ತಿರುಗಬೇಕು ಮತ್ತು ಭಗವಂತನ ಮೇಲೆ ಅಚಲವಾದ ನಂಬಿಕೆ ಇರಬೇಕು. ಬ್ರಾಹ್ಮಿ ಮುಹೂರ್ತ, ಅಭಿಜಿನ್ ಮುಹೂರ್ತ, ಗೋಧೂಳಿ ಮುಹೂರ್ತದಂತಹ ಶುಭ ಸಮಯಗಳಲ್ಲಿ ಪ್ರತಿದಿನ ಕನಿಷ್ಠ ಐದು ನಿಮಿಷಗಳ ಕಾಲ ಜಪ ಮಾಡುವುದರಿಂದ ಜನ್ಮ ಜನ್ಮಾಂತರದ ಪಾಪಗಳು ನಾಶವಾಗುತ್ತವೆ. ಎಲ್ಲವೂ ನಂಬಿಕೆಯ ಆಧಾರದ ಮೇಲೆ ನಿಂತಿವೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ