AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ChatGPT’ಯನ್ನೇ ಹಿಂದಿಕ್ಕಿದ ಸದ್ಗುರು ಅವರ ‘Miracle of Mind’; 15 ಗಂಟೆಗಳಲ್ಲಿ 1 ಮಿಲಿಯನ್ ಡೌನ್‌ಲೋಡ್‌

ಸದ್ಗುರು ಜಗ್ಗಿ ವಾಸುದೇವ್ ಅವರು ಪ್ರಾರಂಭಿಸಿದ ಉಚಿತ ಧ್ಯಾನ ಅಪ್ಲಿಕೇಶನ್ "ಮಿರಾಕಲ್ ಆಫ್ ಮೈಂಡ್" 'ChatGPT'ಯನ್ನೇ ಹಿಂದಿಕ್ಕಿ ಮುನ್ನುಗುತ್ತಿದೆ. ಮಹಾ ಶಿವರಾತ್ರಿಯಂದು ಬಿಡುಗಡೆಯಾದ ಈ ಅಪ್ಲಿಕೇಶನ್ ಕೇವಲ 15 ಗಂಟೆಗಳಲ್ಲಿ 1 ಮಿಲಿಯನ್ ಡೌನ್‌ಲೋಡ್‌ಗಳನ್ನು ದಾಖಲಿಸಿದೆ. AI-ಚಾಲಿತ ವೈಶಿಷ್ಟ್ಯಗಳೊಂದಿಗೆ, 7 ನಿಮಿಷಗಳ ಧ್ಯಾನದ ಅವಧಿಯನ್ನು ಒಳಗೊಂಡ ಈ ಅಪ್ಲಿಕೇಶನ್ 20 ದೇಶಗಳಲ್ಲಿ ಹಲವು ಭಾಷೆಗಳಲ್ಲಿ ಟ್ರೆಂಡಿಂಗ್​​​ನಲ್ಲಿದೆ.

ChatGPT'ಯನ್ನೇ ಹಿಂದಿಕ್ಕಿದ ಸದ್ಗುರು ಅವರ 'Miracle of Mind'; 15 ಗಂಟೆಗಳಲ್ಲಿ 1 ಮಿಲಿಯನ್ ಡೌನ್‌ಲೋಡ್‌
Miracle Of Mind
ಅಕ್ಷತಾ ವರ್ಕಾಡಿ
|

Updated on:Mar 01, 2025 | 2:38 PM

Share

ಇಶಾ ಫೌಂಡೇಶನ್‌ನ ಸಂಸ್ಥಾಪಕ ಹಾಗೂ ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ್‌ ಅವರು ಹೊಸದಾಗಿ ಪ್ರಾರಂಭಿಸಿದ ಉಚಿತ ಧ್ಯಾನ ಅಪ್ಲಿಕೇಶನ್ ‘ಮಿರಾಕಲ್ ಆಫ್ ಮೈಂಡ್'(Miracle of Mind) ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಶಿವರಾತ್ರಿಯಂದು ಬಿಡುಗಡೆಗೊಂಡಿದ್ದ ಈ ಮೊಬೈಲ್ ಅಪ್ಲಿಕೇಶನನ್ನು ಕೇವಲ 15 ಗಂಟೆಗಳಲ್ಲಿ 1 ಮಿಲಿಯನ್ ಜನರು ಡೌನ್‌ಲೋಡ್‌ ಮಾಡಿದ್ದಾರೆ. ಈ ಮೂಲಕ ‘ಮಿರಾಕಲ್ ಆಫ್ ಮೈಂಡ್’ ಆ್ಯಪ್​ ChatGPT’ಯನ್ನೇ ಹಿಂದಿಕ್ಕಿದೆ.

ಮಹಾಶಿವರಾತ್ರಿಯಂದು (ಫೆಬ್ರವರಿ 26) ಬಿಡುಗಡೆಯಾದ ಈ ಅಪ್ಲಿಕೇಶನ್ ಈಗ ಭಾರತ, ಅಮೆರಿಕ, ಕೆನಡಾ, ಯುಕೆ, ಆಸ್ಟ್ರೇಲಿಯಾ ಮತ್ತು ಜರ್ಮನಿ ಸೇರಿದಂತೆ 20 ದೇಶಗಳಲ್ಲಿ ಟ್ರೆಂಡಿಂಗ್ ಆಗಿದೆ. ಇಂಗ್ಲಿಷ್, ಹಿಂದಿ, ತಮಿಳು, ರಷ್ಯನ್ ಮತ್ತು ಸ್ಪ್ಯಾನಿಷ್ ಭಾಷೆಗಳಲ್ಲಿ ಲಭ್ಯವಿರುವ ಮಿರಾಕಲ್ ಆಫ್ ಮೈಂಡ್ ಅಪ್ಲಿಕೇಶನನ್ನು AI- ಚಾಲಿತ ವೈಶಿಷ್ಟ್ಯದಲ್ಲಿ ಪರಿಚಯಿಸಲಾಗಿದ್ದು, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: ಮಹಾಕುಂಭ ಮೇಳಕ್ಕೆ ಇಂದು ತೆರೆ ಬೀಳಬಹುದು, ಆದ್ರೆ ಶಾಹಿ ಸ್ನಾನಕ್ಕೆ ಇನ್ನೂ ಇದೆ ಸಮಯ ಆತುರ ಬೇಡ

ಇದನ್ನೂ ಓದಿ
Image
ವಿಶ್ವಸಂಸ್ಥೆಯಲ್ಲಿ ಸ್ವಯಂಸೇವಕರಾಗಲು ಭಾರತೀಯರಿಗೆ ಸುವರ್ಣಾವಕಾಶ!
Image
ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ
Image
ಹೈಕೋರ್ಟ್​​​ನಲ್ಲಿ 36 ಸಂಶೋಧನಾ ಸಹಾಯಕ ಹುದ್ದೆಗಳಿಗೆ ನೇಮಕಾತಿ
Image
ಕಾಲನ್ನೇ ಕೈಯಾಗಿಸಿಕೊಂಡು JRF ಪರೀಕ್ಷೆ ಬರೆದು 2ನೇ ರ‍್ಯಾಂಕ್ ಪಡೆದ ಯುವತಿ

ಒತ್ತಡದ ಜೀವನದಿಂದ ಹೊರಬರಲು ಧ್ಯಾನಕ್ಕಾಗಿ ನೀವು ಗಂಟೆ ಗಟ್ಟಲೆ ಕುಳಿತುಕೊಳ್ಳುವ ಅವಶ್ಯಕತೆಯಿಲ್ಲ. ಈ ಆ್ಯಪ್​​ ಕೇವಲ ಏಳು ನಿಮಿಷಗಳಲ್ಲಿ ನಿಮ್ಮ ಮನಸ್ಸನ್ನು ಶಾಂತಗೊಳಿಸುತ್ತದೆ. ಸದ್ಗುರು ಅವರ ವಿಚಾರಗಳನೊಳಗೊಂಡ ಬೋಧನೆಯ ಜೊತೆಗೆ ಪರಿಪೂರ್ಣ ಧ್ಯಾನದ ಮಾಹಿತಿಯನ್ನು ನೀಡುವ ಈ ಆ್ಯಪ್​​ AI-ಚಾಲಿತ ಬುದ್ಧಿವಂತಿಕೆಯ ಸಾಧನವನ್ನು ಸಹ ಒಳಗೊಂಡಿದೆ ಎನ್ನಲಾಗಿದೆ.

ಮತ್ತಷ್ಟು ಅಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:38 pm, Sat, 1 March 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​