AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samudrika Shastra: ಹಣೆಯ ಮೇಲಿನ ಈ ಮೂರು ರೇಖೆಗಳು ನಿಮ್ಮ ಭವಿಷ್ಯದ ಬಗ್ಗೆ ಏನು ಹೇಳುತ್ತದೆ ಗೊತ್ತಾ?

ಸಾಮುದ್ರಿಕಾ ಶಾಸ್ತ್ರದ ಪ್ರಕಾರ, ಹಣೆಯ ಮೇಲಿನ ರೇಖೆಗಳು ವ್ಯಕ್ತಿಯ ಸ್ವಭಾವ ಮತ್ತು ಭವಿಷ್ಯವನ್ನು ಸೂಚಿಸುತ್ತವೆ. ವಿಶೇಷವಾಗಿ ಸ್ಪಷ್ಟವಾದ ಮೂರು ರೇಖೆಗಳು ಶುಭಕರ. ಕೆಳಗಿನ ರೇಖೆಯು ಸಂಪತ್ತು, ಮಧ್ಯದ ರೇಖೆಯು ಬುದ್ಧಿ-ಉದ್ಯೋಗ, ಮತ್ತು ಮೇಲಿನ ರೇಖೆಯು ಅದೃಷ್ಟ-ಯಶಸ್ಸನ್ನು ಪ್ರತಿನಿಧಿಸುತ್ತವೆ. ಈ ರೇಖೆಗಳ ಮೂಲಕ ನಿಮ್ಮ ಆರ್ಥಿಕ ಸ್ಥಿತಿ, ವೃತ್ತಿಜೀವನ ಮತ್ತು ಒಟ್ಟಾರೆ ಜೀವನದ ಸಫಲತೆಯನ್ನು ತಿಳಿಯಬಹುದು.

Samudrika Shastra: ಹಣೆಯ ಮೇಲಿನ ಈ ಮೂರು ರೇಖೆಗಳು ನಿಮ್ಮ ಭವಿಷ್ಯದ ಬಗ್ಗೆ ಏನು ಹೇಳುತ್ತದೆ ಗೊತ್ತಾ?
ಸಾಮುದ್ರಿಕಾ ಶಾಸ್ತ್ರ
ಅಕ್ಷತಾ ವರ್ಕಾಡಿ
|

Updated on:Sep 02, 2026 | 8:39 AM

Share

ಸಾಮುದ್ರಿಕಾ ಶಾಸ್ತ್ರದ ಪ್ರಕಾರ, ನಮ್ಮ ದೇಹದ ಅಂಗಾಂಗಗಳು ಮತ್ತು ಮುಖದ ಲಕ್ಷಣಗಳು ವ್ಯಕ್ತಿಯ ಸ್ವಭಾವ, ಭವಿಷ್ಯ ಹಾಗೂ ಹಣೆಬರಹದ ಬಗ್ಗೆ ಅನೇಕ ರಹಸ್ಯಗಳನ್ನು ಬಿಚ್ಚಿಡುತ್ತವೆ. ಅದರಲ್ಲೂ ವಿಶೇಷವಾಗಿ ಹಣೆಯ ಮೇಲಿನ ರೇಖೆಗಳು ವ್ಯಕ್ತಿಯ ಜೀವನ ಪಯಣವನ್ನು ತಿಳಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ. ನಿಮ್ಮ ಹಣೆಯ ಮೇಲೆ ಸ್ಪಷ್ಟವಾದ ಮತ್ತು ನೇರವಾದ ಮೂರು ರೇಖೆಗಳಿದ್ದರೆ, ಅದನ್ನು ಅತ್ಯಂತ ಶುಭ ಶಕುನ ಎಂದು ಪರಿಗಣಿಸಲಾಗುತ್ತದೆ. ಈ ರೇಖೆಗಳು ಜೀವನದ ವಿಭಿನ್ನ ಕ್ಷೇತ್ರಗಳನ್ನು ಹೇಗೆ ಪ್ರತಿನಿಧಿಸುತ್ತವೆ ಎಂಬುದರ ವಿವರ ಇಲ್ಲಿದೆ.

ಧನ ಸಂಪತ್ತು ಮತ್ತು ಆರ್ಥಿಕ ಸಮೃದ್ಧಿ:

ಹುಬ್ಬುಗಳ ತೀರಾ ಹತ್ತಿರದಲ್ಲಿ, ಅಂದರೆ ಹಣೆಯ ಕೆಳಭಾಗದಲ್ಲಿ ಕಾಣಿಸಿಕೊಳ್ಳುವ ಮೊದಲ ರೇಖೆಯು ಸಂಪತ್ತು ಮತ್ತು ಸಮೃದ್ಧಿಗೆ ಸಂಬಂಧಿಸಿದೆ. ಈ ರೇಖೆಯು ಆಳವಾಗಿ, ಸ್ಪಷ್ಟವಾಗಿ ಮತ್ತು ಎಲ್ಲಿಯೂ ತುಂಡಾಗದೆ ಇದ್ದರೆ, ಆ ವ್ಯಕ್ತಿಯು ಆರ್ಥಿಕವಾಗಿ ಅತ್ಯಂತ ಬಲಶಾಲಿಯಾಗುತ್ತಾನೆ ಎಂದು ನಂಬಲಾಗಿದೆ. ಇಂತಹ ವ್ಯಕ್ತಿಗಳಿಗೆ ಜೀವನದಲ್ಲಿ ಹಣ ಸಂಪಾದಿಸಲು ಉತ್ತಮ ಅವಕಾಶಗಳು ಒದಗಿಬರುತ್ತವೆ. ಇವರು ತಮ್ಮ ಸ್ವಂತ ಬುದ್ಧಿವಂತಿಕೆ ಮತ್ತು ಕಠಿಣ ಪರಿಶ್ರಮದ ಮೂಲಕ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಿಕೊಂಡು ಯಶಸ್ವಿಯಾಗುತ್ತಾರೆ.

ಉದ್ಯೋಗ, ಬುದ್ಧಿವಂತಿಕೆ ಮತ್ತು ಸಾಮಾಜಿಕ ಗೌರವ:

ಮೊದಲ ರೇಖೆ ಹಾಗೂ ಹಣೆಯ ಮಧ್ಯಭಾಗದಲ್ಲಿ ಕಾಣಿಸುವ ಎರಡನೇ ರೇಖೆಯು ವ್ಯಕ್ತಿಯ ವೃತ್ತಿಜೀವನ, ಬುದ್ಧಿವಂತಿಕೆ ಮತ್ತು ಗೌರವದ ದ್ಯೋತಕವಾಗಿದೆ. ಈ ರೇಖೆಯು ಸರಳವಾಗಿ ಮತ್ತು ನೇರವಾಗಿದ್ದರೆ, ಆ ವ್ಯಕ್ತಿಯು ಅತ್ಯಂತ ಬುದ್ಧಿವಂತ ಹಾಗೂ ತನ್ನ ಕೆಲಸದ ಕಡೆಗೆ ಜವಾಬ್ದಾರಿಯುತ ಸ್ವಭಾವವನ್ನು ಹೊಂದಿರುತ್ತಾನೆ. ಇಂತಹ ವ್ಯಕ್ತಿಗಳು ಶಿಕ್ಷಣ, ಉದ್ಯೋಗ ಅಥವಾ ವ್ಯವಹಾರ ಕ್ಷೇತ್ರದಲ್ಲಿ ಅಪಾರ ಯಶಸ್ಸನ್ನು ಸಾಧಿಸುತ್ತಾರೆ. ತಮ್ಮ ಕರ್ತವ್ಯಗಳನ್ನು ಗಂಭೀರವಾಗಿ ನಿರ್ವಹಿಸುವ ಮೂಲಕ ಇವರು ಸಮಾಜದಲ್ಲಿ ಉನ್ನತ ಸ್ಥಾನಮಾನ ಮತ್ತು ಗೌರವವನ್ನು ಪಡೆಯುತ್ತಾರೆ.

ಇದನ್ನೂ ಓದಿ: ಕೃಷ್ಣ ಜನ್ಮಾಷ್ಟಮಿ 2026: ಒಂದೇ ದಿನದಲ್ಲಿ ಬೆಂಗಳೂರಿನ 4 ಪ್ರಸಿದ್ಧ ಕೃಷ್ಣ ದೇವಾಲಯಗಳ ದರ್ಶನ ಪಡೆಯಿರಿ

ಅದ್ಭುತ ಅದೃಷ್ಟ ಮತ್ತು ಜೀವನದ ಯಶಸ್ಸು:

ಹಣೆಯ ತೀರಾ ಮೇಲ್ಭಾಗದಲ್ಲಿ ಕಾಣಿಸಿಕೊಳ್ಳುವ ಮೂರನೇ ರೇಖೆಯು ಅದೃಷ್ಟ ಮತ್ತು ಪೂರ್ಣ ಜೀವನದ ಯಶಸ್ಸನ್ನು ಸೂಚಿಸುತ್ತದೆ. ಈ ರೇಖೆಯು ಎಲ್ಲರ ಹಣೆಯ ಮೇಲೂ ಸ್ಪಷ್ಟವಾಗಿ ಗೋಚರಿಸುವುದಿಲ್ಲ. ಯಾರ ಹಣೆಯಲ್ಲಿ ಈ ರೇಖೆಯು ಎದ್ದು ಕಾಣುತ್ತದೆಯೋ ಮತ್ತು ನೇರವಾಗಿದೆಯೋ, ಅದನ್ನು ಅಪರೂಪದ ಹಾಗೂ ಶುಭ ಚಿಹ್ನೆ ಎಂದು ಪರಿಗಣಿಸಲಾಗುತ್ತದೆ. ಇಂತಹ ರೇಖೆಯನ್ನು ಹೊಂದಿರುವ ವ್ಯಕ್ತಿಗಳಿಗೆ ಜೀವನದಲ್ಲಿ ಅತ್ಯುತ್ತಮ ಅವಕಾಶಗಳು ಸಿಗುತ್ತವೆ. ಇವರು ತಮ್ಮ ಸತತ ಪ್ರಯತ್ನಗಳ ಮೂಲಕ ಸಕಲ ಸುಖ-ಸೌಕರ್ಯಗಳನ್ನು ಪಡೆದು ಸಫಲ ಜೀವನ ನಡೆಸುತ್ತಾರೆ ಎಂದು ನಂಬಲಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:39 am, Wed, 2 September 26

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್