AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sankashti Chaturthi 2024: ಭಾಲಚಂದ್ರ ಸಂಕಷ್ಟ ಚತುರ್ಥಿ ಯಾವಾಗ? ಈ ದಿನದ ಆಚರಣೆ ಹೇಗಿರಬೇಕು?

ಗಣೇಶನು ಜ್ಞಾನ ಮತ್ತು ಬುದ್ಧಿವಂತಿಕೆಯನ್ನು ನೀಡುತ್ತಾನೆ ಹಾಗಾಗಿ ಅವನ ಅನುಗ್ರಹದಿಂದ ಒಬ್ಬ ವ್ಯಕ್ತಿಯು ವೃತ್ತಿಜೀವನದಲ್ಲಿ ಪ್ರಗತಿಯನ್ನು ಪಡೆಯುತ್ತಾನೆ, ಜೊತೆಗೆ ಗಣಪನನ್ನು ನಂಬಿದರೆ ಆತ ತನ್ನ ಭಕ್ತರ ಅಡೆತಡೆಗಳನ್ನು ನಿವಾರಣೆ ಮಾಡುತ್ತಾನೆ. ಎಂದಿಗೂ ಕೈ ಬಿಡುವುದಿಲ್ಲ ಎನ್ನುವ ನಂಬಿಕೆ ಇದೆ. ಹಾಗಾದರೆ ಫಾಲ್ಗುಣ ಮಾಸದ ಭಾಲಚಂದ್ರ ಸಂಕಷ್ಟ ಚತುರ್ಥಿಯನ್ನು ಯಾವಾಗ ಆಚರಿಸಲಾಗುತ್ತದೆ? ಆಚರಣಾ ವಿಧಾನಗಳೇನು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Sankashti Chaturthi 2024: ಭಾಲಚಂದ್ರ ಸಂಕಷ್ಟ ಚತುರ್ಥಿ ಯಾವಾಗ? ಈ ದಿನದ ಆಚರಣೆ ಹೇಗಿರಬೇಕು?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Mar 27, 2024 | 10:37 AM

Share

ಪ್ರತಿ ಮಾಸದ ಚತುರ್ಥಿ ತಿಥಿಯಂದು ಭಗವಾನ್ ಶ್ರೀ ಗಣೇಶನನ್ನು ಭಕ್ತಿಯಿಂದ ಆರಾಧಿಸಲಾಗುತ್ತದೆ. ಹಾಗಾಗಿ ಪ್ರತಿ ತಿಂಗಳ ಕೃಷ್ಣ ಪಕ್ಷದ ಚತುರ್ಥಿ ದಿನಾಂಕವನ್ನು ಸಂಕಷ್ಟ ಚತುರ್ಥಿ ಎಂದು ಕರೆಯಲಾಗುತ್ತದೆ. ಪೌರಾಣಿಕ ಗ್ರಂಥಗಳ ಪ್ರಕಾರ, ಈ ಉಪವಾಸವನ್ನು ಆಚರಿಸುವುದರಿಂದ ಭಕ್ತರ ಎಲ್ಲಾ ಕಷ್ಟಗಳು ನಿವಾರಣೆಯಾಗುತ್ತವೆ ಎನ್ನುವ ನಂಬಿಕೆ ಇದೆ. ಗಣೇಶನು ಜ್ಞಾನ ಮತ್ತು ಬುದ್ಧಿವಂತಿಕೆಯನ್ನು ನೀಡುತ್ತಾನೆ ಹಾಗಾಗಿ ಅವನ ಅನುಗ್ರಹದಿಂದ ಒಬ್ಬ ವ್ಯಕ್ತಿಯು ವೃತ್ತಿಜೀವನದಲ್ಲಿ ಪ್ರಗತಿಯನ್ನು ಪಡೆಯುತ್ತಾನೆ, ಜೊತೆಗೆ ಗಣಪನನ್ನು ನಂಬಿದರೆ ಆತ ತನ್ನ ಭಕ್ತರ ಅಡೆತಡೆಗಳನ್ನು ನಿವಾರಣೆ ಮಾಡುತ್ತಾನೆ. ಎಂದಿಗೂ ಕೈ ಬಿಡುವುದಿಲ್ಲ ಎನ್ನುವ ನಂಬಿಕೆ ಇದೆ. ಹಾಗಾದರೆ ಫಾಲ್ಗುಣ ಮಾಸದ ಭಾಲಚಂದ್ರ ಸಂಕಷ್ಟ ಚತುರ್ಥಿಯನ್ನು ಯಾವಾಗ ಆಚರಿಸಲಾಗುತ್ತದೆ? ಆಚರಣಾ ವಿಧಾನಗಳೇನು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾಲಚಂದ್ರ ಸಂಕಷ್ಟ ಚತುರ್ಥಿಯ ದಿನಾಂಕ:

ಈ ಬಾರಿಯ ಭಾಲಚಂದ್ರ ಸಂಕಷ್ಟ ಚತುರ್ಥಿಯನ್ನು ಮಾ. 28 ರಂದು ಗುರುವಾರ ಆಚರಣೆ ಮಾಡಲಾಗುತ್ತದೆ. ಈ ದಿನ, ಉಪವಾಸವು ಸೂರ್ಯೋದಯದಿಂದ ಪ್ರಾರಂಭವಾಗುತ್ತದೆ ಬಳಿಕ ಚಂದ್ರೋದಯದ ನಂತರ, ಚಂದ್ರ ದೇವನನ್ನು ನೆನೆದು ಬಳಿಕ ಉಪವಾಸವನ್ನು ಕೊನೆಗೊಳಿಸಲಾಗುತ್ತದೆ. ಈ ದಿನ ಗಣಪನನ್ನು ಭಕ್ತಿಯಿಂದ ಪೂಜಿಸಿ, ಉಪವಾಸವನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಸಂತೋಷ, ಅದೃಷ್ಟ ಎಲ್ಲವೂ ದುಪ್ಪಟ್ಟಾಗುತ್ತದೆ.

ಇದನ್ನೂ ಓದಿ: ರಾಮನವಮಿ ದಿನ ನಿಮ್ಮ ಪೂಜಾ ಆಚರಣೆಗಳು ಹೀಗಿರಲಿ!

ಪಂಚಾಂಗದ ಪ್ರಕಾರ, ಈ ದಿನದ ಪೂಜಾ ಮುಹೂರ್ತ:

ಬೆಳಿಗ್ಗೆ 10.54 ರಿಂದ ಮಧ್ಯಾಹ್ನ 12.26 ರ ವರೆಗೆ.

ಸಂಜೆಯ ಪೂಜಾ ಮುಹೂರ್ತ: 05.04 ರಿಂದ ಸಂಜೆ 06.37 ರ ವರೆಗೆ.

ಚಂದ್ರೋದಯ ಸಮಯ: ರಾತ್ರಿ 09.28ಕ್ಕೆ

ಭಾಲಚಂದ್ರ ಸಂಕಷ್ಟಿ ಚತುರ್ಥಿಯ ಪೂಜಾ ವಿಧಾನ ಹೇಗಿರಬೇಕು?

-ಈ ದಿನ ಬೆಳಿಗ್ಗೆ ಬೇಗ ಎದ್ದು ಸ್ನಾನ ಮಾಡಿದ ನಂತರ ಉಪವಾಸ ಮಾಡಲು ನಿರ್ಧರಿಸಬೇಕು.

-ಗಣೇಶನ ಮೂರ್ತಿ ಅಥವಾ ಫೋಟೋ ಇಟ್ಟು ದೇವರಿಗೆ ಅಲಂಕಾರ ಮಾಡಿ. ಕೆಂಪು ಗುಲಾಬಿ ಅಥವಾ ಕೆಂಪು ದಾಸವಾಳ ಸಿಕ್ಕಲ್ಲಿ 27 ಹೂವುಗಳನ್ನು ಅರ್ಪಿಸಿ. ಹೀಗೆ ಮಾಡುವುದರಿಂದ ಉದ್ಯೋಗ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ.

-ಕೇವಲ ಸಂಕಷ್ಟ ಚತುರ್ಥಿ ದಿನದಂದು ಮಾತ್ರವಲ್ಲ. ಪ್ರತಿದಿನವೂ ಈ ಗಣಪತಿ ವಿಗ್ರಹಕ್ಕೆ ಗುಲಾಬಿ ಮತ್ತು ಹಳದಿ ಬಣ್ಣದ ಹೂವುಗಳನ್ನು ಅರ್ಪಿಸಬಹುದು. ಇದು ನಿಮಗೆ ಶುಭ ಫಲಗಳನ್ನು ನೀಡುತ್ತದೆ.

-ದೇವರಿಗೆ ಎಳ್ಳು, ಬೆಲ್ಲ, ಲಡ್ಡು, ದುರ್ವೆ, ಗಂಧ ಮತ್ತು ಮೋದಕವನ್ನು ಅರ್ಪಿಸಿ. -ಪೂಜೆ ಮಾಡುವಾಗ “ಓಂ ಗಣಪತಯೇ ನಮಃ” ಎಂಬ ಮಂತ್ರವನ್ನು ಪಠಿಸಿ.

-ಈ ದಿನ ಗಣೇಶನನ್ನು ಆರಾಧನೆ ಮಾಡುವಾಗ ಆತನಿಗೆ ಸಂಬಂಧ ಪಟ್ಟ ಭಜನೆಗಳನ್ನು ಹೇಳಬಹುದು ಅಥವಾ ಗಣೇಶ ಕಥೆಯನ್ನು ಓದಬಹುದು.

-ಪೂಜೆ ಮುಗಿದ ನಂತರ ಗಣೇಶನಿಗೆ ಆರತಿ ಮಾಡಿ. ರಾತ್ರಿಯಲ್ಲಿ ಚಂದ್ರನಿಗೆ ಅರ್ಘ್ಯವನ್ನು ಅರ್ಪಿಸಿ ಬಳಿಕ ಉಪವಾಸವನ್ನು ಕೊನೆಗೊಳಿಸಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:36 am, Wed, 27 March 24

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ