AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sankashti Chaturthi 2025: ಇಂದು ವರ್ಷದ ಕೊನೆಯ ಸಂಕಷ್ಟ ಚತುರ್ಥಿ; ಪೂಜಾ ವಿಧಾನ ಮತ್ತು ಮಹತ್ವ ತಿಳಿಯಿರಿ

ಸಂಕಷ್ಟ ಚತುರ್ಥಿ ಗಣೇಶನ ಆರಾಧನೆಗೆ ಮೀಸಲಾದ ವಿಶೇಷ ದಿನ. ಹುಣ್ಣಿಮೆ ನಂತರ ಸಂಕಷ್ಟಹರ ಚತುರ್ಥಿ, ಅಮಾವಾಸ್ಯೆ ಬಳಿಕ ವಿನಾಯಕ ಚತುರ್ಥಿ ಬರುತ್ತದೆ. ಇದು ಜೀವನದ ಅಡೆತಡೆಗಳನ್ನು ನಿವಾರಿಸಿ, ಸುಖ-ಸಮೃದ್ಧಿ ತರುತ್ತದೆ ಎಂಬ ನಂಬಿಕೆ. ಈ ದಿನ ಉಪವಾಸವಿದ್ದು, ಗಣೇಶನನ್ನು ಪೂಜಿಸಿ, ಚಂದ್ರೋದಯದ ನಂತರ ವ್ರತ ಮುರಿಯುವುದು ರೂಢಿ. ಈ ಆಚರಣೆಗಳಿಂದ ಇಷ್ಟಾರ್ಥ ಸಿದ್ಧಿಸುತ್ತವೆ.

Sankashti Chaturthi 2025: ಇಂದು ವರ್ಷದ ಕೊನೆಯ ಸಂಕಷ್ಟ ಚತುರ್ಥಿ; ಪೂಜಾ ವಿಧಾನ ಮತ್ತು ಮಹತ್ವ ತಿಳಿಯಿರಿ
ಸಂಕಷ್ಟ ಚತುರ್ಥಿ
ಅಕ್ಷತಾ ವರ್ಕಾಡಿ
|

Updated on: Dec 07, 2025 | 10:21 AM

Share

ಗಣೇಶನ ಆರಾಧನೆಗೆ ಇರುವ ವಿಶೇಷ ದಿನ ಸಂಕಷ್ಟ ಚತುರ್ಥಿ. ತಿಂಗಳಿಗೆ ಎರಡು ಚತುರ್ಥಿಗಳು ಬರುತ್ತವೆ. ಅವುಗಳಲ್ಲಿ ಹುಣ್ಣಿಮೆಯ ನಂತರ ಬರುವುದನ್ನು ‘ಸಂಕಷ್ಟಹರ ಚತುರ್ಥಿ’ ಎಂತಲೂ ಹಾಗೂ ಅಮಾವಾಸ್ಯೆ ಬಳಿಕ ಬರುವುದನ್ನು ‘ವಿನಾಯಕ ಚತುರ್ಥಿ’ ಎಂದೂ ಕರೆಯಲಾಗುತ್ತದೆ. ಈ ವರ್ಷದ ಕೊನೆಯ ಸಂಕಷ್ಟ ಚತುರ್ಥಿ ಇಂದು(ಡಿಸೆಂಬರ್​ 07ರಂದು)ಬಂದಿದೆ. ಈ ಸಂಕಷ್ಟ ಚತುರ್ಥಿಯನ್ನು ಅಖುರಥ ಸಂಕಷ್ಟ ಚತುರ್ಥಿ ಎಂದು ಕರೆಯುತ್ತಾರೆ.

ಶುಭ ಸಮಯಗಳ ವಿವರ:

  • ತಿಥಿ ಪ್ರಾರಂಭ: ಡಿಸೆಂಬರ್ 7, ಸಂಜೆ 06:24ಕ್ಕೆ .
  • ತಿಥಿ ಮುಕ್ತಾಯ: ಡಿಸೆಂಬರ್ 8, 2025, ಸಂಜೆ 04:03 ಕ್ಕೆ.
  • ಚಂದ್ರೋದಯ ಸಮಯ: ಡಿಸೆಂಬರ್ 7, 2025, ರಾತ್ರಿ 08:30 ಕ್ಕೆ (ಈ ಸಮಯವು ಸ್ಥಳದಿಂದ ಸ್ಥಳಕ್ಕೆ ಸ್ವಲ್ಪ ಬದಲಾಗಬಹುದು).

ಸಂಕಷ್ಟ ಚತುರ್ಥಿಯ ಮಹತ್ವ ಮತ್ತು ಆಚರಣೆ:

ಸಂಕಷ್ಟ ಚತುರ್ಥಿಯು ಗಣೇಶನಿಗೆ ಅರ್ಪಿತವಾದ ಮಂಗಳಕರ ದಿನವಾಗಿದ್ದು, ಜೀವನದ ಎಲ್ಲಾ ತೊಂದರೆಗಳು, ಅಡೆತಡೆಗಳನ್ನು ನಿವಾರಿಸಿ, ಜ್ಞಾನ, ಸಂಪತ್ತು, ಯಶಸ್ಸು ಮತ್ತು ಸಂತೋಷವನ್ನು ತರುತ್ತದೆ ಎಂದು ನಂಬಲಾಗಿದೆ. ಈ ದಿನದಂದು ಗಣೇಶನಿಗೆ ಉಪವಾಸ ಮಾಡಿ ಪೂಜಿಸುವುದರಿಂದ ಎಲ್ಲಾ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂದು ನಂಬಲಾಗಿದೆ.

ಇದನ್ನೂ ಓದಿ: ವಾಸ್ತು ಪ್ರಕಾರ ಫ್ರಿಡ್ಜ್ ಮೇಲೆ ಈ ವಸ್ತುಗಳನ್ನು ಇಡಲೇಬಾರದು; ಸಮಸ್ಯೆ ತಪ್ಪಿದ್ದಲ್ಲ

ವ್ರತಾಚರಣೆಯ ವಿಧಾನ:

  • ಸೂರ್ಯೋದಯಕ್ಕೆ ಮುನ್ನ ಸ್ನಾನ ಮಾಡಿ, ಶುಭ್ರವಾದ ಬಟ್ಟೆ ಧರಿಸಿ.
  • ಪೂಜಾ ಕೊಠಡಿಯಲ್ಲಿ ಗಣೇಶನ ವಿಗ್ರಹ ಅಥವಾ ಚಿತ್ರವನ್ನು ಇರಿಸಿ ಪೂಜೆ ಮಾಡಿ.
  • ದೀಪ, ಧೂಪ, ಹೂವು, ಗರಿಕೆ, ಮೋದಕ ಅಥವಾ ಲಡ್ಡುಗಳನ್ನು ಅರ್ಪಿಸಿ.
  • ಗಣೇಶ ಮಂತ್ರಗಳು ಮತ್ತು ಸಂಕಷ್ಟನಾಶನ ಗಣೇಶ ಸ್ತೋತ್ರವನ್ನು ಪಠಿಸಿ.
  • ದಿನವಿಡೀ ಉಪವಾಸವಿದ್ದು, ರಾತ್ರಿ ಚಂದ್ರೋದಯವಾದ ನಂತರ ಚಂದ್ರನಿಗೆ ಅರ್ಘ್ಯ ಅರ್ಪಿಸಿ, ಪೂಜೆ ಮುಗಿಸಿ ವ್ರತವನ್ನು ಮುರಿಯಿರಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ