AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shani Dev: ಶನಿವಾರದ ಆಚರಣೆ; ಈ ದಿನ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳ ಬಗ್ಗೆ ಇಲ್ಲಿ ತಿಳಿಯಿರಿ

ಹಿಂದೂ ಧರ್ಮದಲ್ಲಿ ಶನಿವಾರವು ಶನಿ ದೇವನಿಗೆ ಮೀಸಲಾದ ದಿನ. ಈ ದಿನ ಯಾವ ಕೆಲಸ ಮಾಡಬೇಕು, ಯಾವುದನ್ನು ತಪ್ಪಿಸಬೇಕು ಎಂಬುದು ಜ್ಯೋತಿಷ್ಯದಲ್ಲಿ ಮಹತ್ವದ್ದಾಗಿದೆ. ಮಸಾಲೆಯುಕ್ತ ಆಹಾರ, ಹೊಸ ಬಟ್ಟೆ ಖರೀದಿ ಬೇಡ. ಅರಳಿ ಮರ ಸೇವೆ, ಶಿವನಿಗೆ ಬಿಲ್ವಪತ್ರೆ ಅರ್ಪಣೆ, ನೀಲಿ ಬಟ್ಟೆ ಧರಿಸುವುದು, ಕರ್ಪೂರ ಪರಿಹಾರದಿಂದ ಅದೃಷ್ಟ ಮತ್ತು ಸಕಾರಾತ್ಮಕತೆ ಹೆಚ್ಚುತ್ತದೆ. ಉದ್ಯೋಗ ಸಮಸ್ಯೆ, ಆರ್ಥಿಕ ಅಭಿವೃದ್ಧಿಗೆ ಇದು ಸಹಕಾರಿ.

Shani Dev: ಶನಿವಾರದ ಆಚರಣೆ; ಈ ದಿನ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳ ಬಗ್ಗೆ ಇಲ್ಲಿ ತಿಳಿಯಿರಿ
Shaniwar Rituals
ಅಕ್ಷತಾ ವರ್ಕಾಡಿ
|

Updated on: Mar 14, 2026 | 12:29 PM

Share

ಹಿಂದೂ ಧರ್ಮದಲ್ಲಿ ಪ್ರತಿಯೊಂದು ವಾರಕ್ಕೂ ತನ್ನದೇ ಆದ ವಿಶೇಷ ಮಹತ್ವವಿದೆ. ಅದರಲ್ಲೂ ವಿಶೇಷವಾಗಿ ‘ಶನಿವಾರ’ವು ಶನಿ ದೇವನಿಗೆ ಅರ್ಪಿತವಾದ ದಿನ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿವಾರದಂದು ಅನುಸರಿಸುವ ಕೆಲವು ಆಚರಣೆಗಳು ನಮ್ಮ ಜೀವನದ ಅದೃಷ್ಟ ಮತ್ತು ದುರದೃಷ್ಟದ ಮೇಲೆ ನೇರ ಪರಿಣಾಮ ಬೀರುತ್ತವೆ. ಹಾಗಾದರೆ, ಈ ದಿನ ಯಾವ ಕೆಲಸಗಳನ್ನು ಮಾಡಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಶನಿವಾರ ಈ ಕೆಲಸಗಳನ್ನು ತಪ್ಪಿಸಿ:

ಜ್ಯೋತಿಷ್ಯದ ಪ್ರಕಾರ ಶನಿ ಮತ್ತು ಮಂಗಳ ಗ್ರಹಗಳ ನಡುವೆ ವೈರತ್ವವಿದೆ. ಹೀಗಾಗಿ, ಶನಿವಾರದಂದು ಮಂಗಳನಿಗೆ ಸಂಬಂಧಿಸಿದ ವಸ್ತುಗಳನ್ನು ಅಥವಾ ಆಹಾರವನ್ನು ಸೇವಿಸುವುದು ಅಶುಭ ಎಂದು ಪರಿಗಣಿಸಲಾಗುತ್ತದೆ. ಇದಲ್ಲದೇ ಮಸಾಲೆಯುಕ್ತ ಪದಾರ್ಥಗಳು, ಒಣ ಮೆಣಸಿನಕಾಯಿ, ಉಪ್ಪಿನಕಾಯಿ ಮತ್ತು ತೊಗರಿಬೇಳೆ ಸೇವಿಸುವುದನ್ನು ಈ ದಿನ ಆದಷ್ಟು ತಪ್ಪಿಸಿ. ಜ್ಯೋತಿಷ್ಯ ಶಾಸ್ತ್ರದ ನಂಬಿಕೆಯಂತೆ, ಶನಿವಾರದಂದು ಹೊಸ ಬಟ್ಟೆಗಳನ್ನು ಖರೀದಿಸುವುದನ್ನು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ.

ಅದೃಷ್ಟ ತರುವ ಸರಳ ಆಚರಣೆಗಳು:

ನಿಮ್ಮ ಇಷ್ಟಾರ್ಥಗಳು ಈಡೇರಲು ಮತ್ತು ಜೀವನದಲ್ಲಿ ಸಕಾರಾತ್ಮಕತೆ ಹೆಚ್ಚಿಸಲು ಈ ಕ್ರಮಗಳನ್ನು ಅನುಸರಿಸಿ. ಶನಿವಾರದಂದು ರವಿ ವೃಕ್ಷಕ್ಕೆ (ಅರಳಿ ಮರ) ಹೋಗಿ ಐದು ಪ್ರದಕ್ಷಿಣೆ ಹಾಕಿ, ಹಳದಿ ದಾರವನ್ನು ಕಟ್ಟುವುದು ವಿಶೇಷ ಫಲ ನೀಡುತ್ತದೆ. ಅಲ್ಲದೆ, ಸಕ್ಕರೆ ಬೆರೆಸಿದ ನೀರನ್ನು ಮರದ ಬುಡಕ್ಕೆ ಸುರಿಯುವುದರಿಂದ ಆರ್ಥಿಕ ಅಭಿವೃದ್ಧಿ ಉಂಟಾಗುತ್ತದೆ. ಇದಲ್ಲದೇ ಹಸು, ಮೀನು, ಇರುವೆ ಮತ್ತು ಮಂಗಗಳಿಗೆ ಬೆಲ್ಲ ಮಿಶ್ರಿತ ಆಹಾರವನ್ನು ನೀಡುವುದು ದುರದೃಷ್ಟವನ್ನು ದೂರವಾಗಿಸಿ, ಶುಭವನ್ನು ತರುತ್ತದೆ ಎಂದು ನಂಬಲಾಗಿದೆ.

ಉದ್ಯೋಗ ಸಮಸ್ಯೆಗಳಿಗೆ ಪರಿಹಾರ:

ಉದ್ಯೋಗದಲ್ಲಿ ತೊಂದರೆ ಎದುರಿಸುತ್ತಿರುವವರು ಶಿವನ ದೇವಸ್ಥಾನಕ್ಕೆ ಭೇಟಿ ನೀಡಿ, ಶಿವನಿಗೆ ಬಿಲ್ವಪತ್ರೆ ಅರ್ಪಿಸಿ. ಅಲ್ಲದೆ, ತಿಂಗಳಿಗೊಮ್ಮೆ ಒಂದೂವರೆ ಕೆಜಿ ಅಕ್ಕಿಯನ್ನು ದಾನ ಮಾಡುವುದು ಆರ್ಥಿಕ ಸುಸ್ಥಿರತೆಗೆ ಸಹಕಾರಿ.

ಇದನ್ನೂ ಓದಿ: ಈ ಒಂದು ವಸ್ತುವನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ಅಪಾಯ ತಪ್ಪಿದ್ದಲ್ಲ!

ಶುಭ ಫಲಕ್ಕಾಗಿ ವಿಶೇಷ ಕ್ರಮಗಳು:

  • ಉಡುಗೆ-ತೊಡುಗೆ: ಶನಿವಾರದಂದು ನೀಲಿ ಬಣ್ಣದ ಬಟ್ಟೆಗಳನ್ನು ಧರಿಸುವುದು ಶನಿ ದೇವನಿಗೆ ಪ್ರಿಯವಾದದ್ದು. ಇಂದು ಕರ್ಪೂರದಿಂದ ವೆಂಕಟೇಶ್ವರ ಸ್ವಾಮಿಗೆ ಆರತಿ ಬೆಳಗುವುದು ಶ್ರೇಯಸ್ಕರ.
  • ಕರ್ಪೂರದ ಪರಿಹಾರ: ಒಂದು ಲೋಟ ನೀರಿನಲ್ಲಿ ಸ್ವಲ್ಪ ಕರ್ಪೂರ ಬೆರೆಸಿ ದೇವರ ಕೋಣೆಯಲ್ಲಿ ಇಡಿ. ಭಾನುವಾರ ಬೆಳಿಗ್ಗೆ ಸ್ನಾನ ಮಾಡಿದ ನಂತರ, ಆ ನೀರನ್ನು ಯಾವುದೇ ಗಿಡದ ಬುಡಕ್ಕೆ ಸುರಿಯಿರಿ. ಇದು ದುರದೃಷ್ಟವನ್ನು ಕಳೆದು ಅದೃಷ್ಟವನ್ನು ಹೆಚ್ಚಿಸುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ