AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Secret: ಈ ವಿಷಯಗಳನ್ನು ಯಾರ ಬಳಿಯೂ ಹಂಚಿಕೊಳ್ಳಬೇಡಿ!

ಮನೆ, ಜಾಗ, ಕಾರು ಮುಂತಾದಗಳ ಖರೀದಿಗೂ ಮೊದಲೇ ಎಲ್ಲರಿಗೂ ಹೇಳಿಕೊಂಡು ಬರುವ ಅಭ್ಯಾಸ ನಿಮಗಿದೆಯಾ? ಹಾಗಾದರೆ ಇಂದೇ ಆ ಅಭ್ಯಾಸವನ್ನು ಬಿಟ್ಟು ಬಿಡಿ. ಏಕಂದರೆ ನಿಮ್ಮ ಕೆಲವು ಖಾಸಗಿ ಸಂಗತಿಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವುದರಿಂದ ನೀವು ಅಂದುಕೊಂಡ ಕೆಲಸ ಕೆಡಬಹುದು. ಹಾಗಾದರೆ ಯಾವ ಯಾವ ವಿಷಯಗಳನ್ನು ಹಂಚಿಕೊಳ್ಳಬಾರದು? ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ.

Secret: ಈ ವಿಷಯಗಳನ್ನು ಯಾರ ಬಳಿಯೂ ಹಂಚಿಕೊಳ್ಳಬೇಡಿ!
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Mar 19, 2024 | 9:30 AM

Share

ಒಳ್ಳೆ ಕೆಲಸ ಮಾಡಬೇಕು ಎಂದು ಅಂದುಕೊಂಡಿದ್ದೀರಾ? ಹಾಗಾದರೆ ಯಾರಿಗೂ ಹೇಳಬೇಡಿ. ನೀವು ಈ ಮಾತನ್ನು ಮನೆಯಲ್ಲಿರುವ ದೊಡ್ಡವರು ಹೇಳಿದ್ದನ್ನು ಕೇಳಿರಬಹುದು. ಮನೆ, ಜಾಗ, ಕಾರು ಮುಂತಾದಗಳ ಖರೀದಿಗೂ ಮೊದಲೇ ಎಲ್ಲರಿಗೂ ಹೇಳಿಕೊಂಡು ಬರುವ ಅಭ್ಯಾಸ ನಿಮಗಿದೆಯಾ? ಹಾಗಾದರೆ ಇಂದೇ ಆ ಅಭ್ಯಾಸವನ್ನು ಬಿಟ್ಟು ಬಿಡಿ. ಏಕಂದರೆ ನಿಮ್ಮ ಕೆಲವು ಖಾಸಗಿ ಸಂಗತಿಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವುದರಿಂದ ನೀವು ಅಂದುಕೊಂಡ ಕೆಲಸ ಕೆಡಬಹುದು. ಹಾಗಾದರೆ ಯಾವ ಯಾವ ವಿಷಯಗಳನ್ನು ಹಂಚಿಕೊಳ್ಳಬಾರದು? ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ.

ನಿಮ್ಮ ಕನಸು ಮತ್ತು ಆಕಾಂಕ್ಷೆ

ಜೀವನದಲ್ಲಿ ನೀವು ಹಲವಾರು ರೀತಿಯಲ್ಲಿ ಕನಸು ಕಟ್ಟಿಕೊಂಡಿರುತ್ತೀರಿ ಅದು ಸಾಕಾರಗೊಳ್ಳುವಷ್ಟು ಶಕ್ತಿಯೂ ಇರುತ್ತದೆ. ಆದರೆ ಆ ಕನಸು ಮತ್ತು ಆಕಾಂಕ್ಷೆಗಳನ್ನು ನೀವು ತುಂಬಾ ನಂಬಿರುವವರು, ಆತ್ಮೀಯರ ಜೊತೆಗೂ ಕೂಡ ಹಂಚಿಕೊಳ್ಳಬೇಡಿ. ಏಕೆಂದರೆ ನಾವು ನಂಬಿ ಹೇಳಿರುವ ವಿಷಯಗಳು ಈಡೇರುವುದಕ್ಕಿಂತ, ವಿಫಲಗೊಳ್ಳುವುದೇ ಹೆಚ್ಚು. ಹಾಗಾಗಿ ನಿಮ್ಮ ಆಸೆಗಳನ್ನು ಯಾರೊಂದಿಗೂ ಹೇಳಬೇಡಿ.

ನಿಮ್ಮ ಸಂಸಾರದ ಸಮಸ್ಯೆಗಳು

ಸಂಸಾರದ ಗುಟ್ಟು ಮೂರು ಗೋಡೆಯೊಳಗೆ ಇರಬೇಕು ಎಂಬ ಮಾತಿದೆ. ನೀವು ನಿಮ್ಮ ಮನಸ್ಸನ್ನು ಹಗುರ ಮಾಡಿಕೊಳ್ಳಲು ಬೇರೆಯವರ ಜೊತೆಗೆ ನಿಮ್ಮ ಸಂಸಾರದ ವಿಷಯಗಳನ್ನು ಹೇಳಿಕೊಂಡಲ್ಲಿ ಮುಂದೆ ಅದೇ ನಿಮಗೆ ಮುಳುವಾಗಬಹುದು. ಏಕೆಂದರೆ ನಿಮ್ಮ ಸಮಸ್ಯೆಗೆ ಪರಿಹಾರ ನೀಡುವುದಕ್ಕಿಂತ, ಮನದೊಳಗೆ ಖುಷಿ ಪಡುವವರೇ ಹೆಚ್ಚಿರುತ್ತಾರೆ. ಹಾಗಾಗಿ ಸಾಧ್ಯವಾದಷ್ಟು ಆ ಸಮಸ್ಯೆಗಳನ್ನು ನೀವೇ ಬಗೆಹರಿಸಿಕೊಳ್ಳಿ.

ನಿಮ್ಮ ಸಂಬಳ ಹಾಗೂ ಹಣದ ವಿಷಯಗಳು

ಎಷ್ಟೇ ಆಪ್ತರಾಗಿರಲಿ, ನೀವು ಎಷ್ಟು ಸಂಪಾದನೆ ಮಾಡುತ್ತಿದ್ದೀರಿ ಅಥವಾ ನಿಮ್ಮ ಹಣದ ವಹಿವಾಟುಗಳಿಗೆ ಸಂಬಂಧ ಪಟ್ಟ ವಿಷಯಗಳನ್ನು ಯಾವುದೇ ಪರಿಸ್ಥಿತಿಯಲ್ಲಿಯೂ ಹೇಳಿಕೊಳ್ಳಬೇಡಿ. ನಿಮ್ಮ ಸಂಬಳ ಹೆಚ್ಚಿದ್ದರೆ ಕೇಳಿ ಅಸೂಯೆ ಪಡುತ್ತಾರೆ. ಕಡಿಮೆ ಇದ್ದರೆ ವ್ಯಂಗ್ಯ ಮಾಡಿ ನಗುತ್ತಾರೆ ಹಾಗಾಗಿ ಹಣದ ವಿಷಯಗಳನ್ನು ಯಾರ ಜೊತೆಯಲ್ಲಿಯೂ ಹಂಚಿಕೊಳ್ಳಬೇಡಿ. ಅದೂ ಅಲ್ಲದೆ ಹಣದ ವಿಷಯಗಳು ಸಂಬಂಧವನ್ನು ಒಡೆಯುತ್ತದೆ ಅದರಿಂದಾಗಿ ಈ ಬಗ್ಗೆ ಜಾಗರೂಕರಾಗಿರಿ.

ಇದನ್ನೂ ಓದಿ: ನಿಮ್ಮ ರಾಶಿಗೆ ಅನುಗುಣವಾಗಿ ಈ ಪ್ರಾಣಿಗಳನ್ನು ಸಾಕಿದರೆ ಅದೃಷ್ಟವೇ ಬದಲಾಗುತ್ತೆ!

ನಿಮ್ಮ ಕುಟುಂಬದ ವಿಷಯಗಳು

ನಿಮ್ಮ ಮನೆಯ ಕೌಟುಂಬಿಕ ವಿಷಯಗಳನ್ನು ಎಲ್ಲಿಯೂ ಹಂಚಿಕೊಳ್ಳಬೇಡಿ. ಇದು ಇನ್ನೊಬ್ಬರ ಮಾತಿಗೆ ವಿಷಯವಾಗುತ್ತದೆ. ಅದರ ಹೊರತಾಗಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ ಹಾಗಾಗಿ ಮನೆಯ ವಿಷಯಗಳನ್ನು ಮನೆಯವರೊಂದಿಗೆ ಕುಳಿತು ಬಗೆಹರಿಸಿಕೊಳ್ಳಿ.

ಪ್ರಗತಿಯಲ್ಲಿರುವ ಕೆಲಸಗಳು

ಈ ವರ್ಷ ಕಾರು, ಜಾಗ ಅಥವಾ ನಿವೇಶನ ಖರೀದಿಸಬೇಕು ಎಂದು ಬಯಸಿದ್ದಲ್ಲಿ ಅಥವಾ ಅದಕ್ಕೆ ಪೂರ್ವ ತಯಾರಿ ಮಾಡಿಕೊಳ್ಳುತ್ತಿರುವಾಗ ಯಾವುದೇ ಕಾರಣಕ್ಕೂ ಅದನ್ನು ಮೊತ್ತೊಬ್ಬರ ಬಳಿ ಹಂಚಿಕೊಳ್ಳಬೇಡಿ. ಏಕಂದರೆ ಅಸೂಯೆ ಯಾವ ಕೆಲಸವನ್ನಾದರೂ ಕೆಡಿಸಬಹುದು ಹಾಗಾಗಿ ಅಂದುಕೊಂಡ ಪೂರ್ವ ನಿಯೋಜಿತ ಕೆಲಸಗಳು ಮುಗಿಯುವವರೆಗೆ ಯಾರಿಗೂ ಹೇಳಬೇಡಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ