AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lunar Eclipse 2025: ಈ ವರ್ಷದ ಕೊನೆಯ ಚಂದ್ರಗ್ರಹಣ ಯಾವಾಗ? ಇದು ಭಾರತದಲ್ಲಿ ಗೋಚರಿಸಲಿದೆಯೇ?

2025ರ ಸೆಪ್ಟೆಂಬರ್ 7 ರಂದು ಸಂಪೂರ್ಣ ಚಂದ್ರಗ್ರಹಣ ಸಂಭವಿಸಲಿದೆ. ಇದು ಭಾರತದಲ್ಲಿ ಗೋಚರಿಸಲಿದೆ. ಗ್ರಹಣ ರಾತ್ರಿ 9:58ಕ್ಕೆ ಆರಂಭವಾಗಿ ಸೆಪ್ಟೆಂಬರ್ 8ರ ಬೆಳಿಗ್ಗೆ 1:26ಕ್ಕೆ ಕೊನೆಗೊಳ್ಳುತ್ತದೆ. ಸೂತಕ ಅವಧಿ ಸೆಪ್ಟೆಂಬರ್ 7ರ ಮಧ್ಯಾಹ್ನ 12:19ಕ್ಕೆ ಆರಂಭವಾಗುತ್ತದೆ. ಈ ಸಮಯದಲ್ಲಿ ಮಾಡುವ ಧಾರ್ಮಿಕ ಆಚರಣೆಗಳು ಮತ್ತು ಪೂಜೆಗಳ ಬಗ್ಗೆ ಮಾಹಿತಿ ಇಲ್ಲಿ ನೀಡಲಾಗಿದೆ.

Lunar Eclipse 2025: ಈ ವರ್ಷದ ಕೊನೆಯ ಚಂದ್ರಗ್ರಹಣ ಯಾವಾಗ? ಇದು ಭಾರತದಲ್ಲಿ ಗೋಚರಿಸಲಿದೆಯೇ?
ಚಂದ್ರಗಹಣ
ಅಕ್ಷತಾ ವರ್ಕಾಡಿ
|

Updated on: Aug 02, 2025 | 11:37 AM

Share

2025 ರ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ಶೀಘ್ರದಲ್ಲೇ ಸಂಭವಿಸಲಿದೆ. ಈ ಕೊನೆಯ ಚಂದ್ರಗ್ರಹಣ ಸೆಪ್ಟೆಂಬರ್ನಲ್ಲಿ ಸಂಭವಿಸಲಿದೆ. ಆದಾಗ್ಯೂ, ಈ ವರ್ಷ ಇಲ್ಲಿಯವರೆಗೆ, ಒಂದು ಚಂದ್ರಗ್ರಹಣ ಮತ್ತು ಒಂದು ಸೂರ್ಯಗ್ರಹಣ ಸಂಭವಿಸಿದ್ದರೂ, ಅವು ನಮ್ಮ ದೇಶದಲ್ಲಿ ಗೋಚರಿಸಿಲ್ಲ. ಆದಾಗ್ಯೂ, ಎರಡನೇ ಚಂದ್ರಗ್ರಹಣ ಭಾರತದಲ್ಲಿ ಗೋಚರಿಸಲಿದೆಯೇ? ಎಂಬ ಪ್ರಶ್ನೆ ಸಾಕಷ್ಟು ಜನರಲ್ಲಿದೆ?

ಚಂದ್ರಗ್ರಹಣವು ಒಂದು ಖಗೋಳ ಘಟನೆಯಾಗಿದೆ. ಹಿಂದೂ ಧರ್ಮದಲ್ಲಿ, ಚಂದ್ರಗ್ರಹಣವು ವಿಶೇಷ ಧಾರ್ಮಿಕ ಮಹತ್ವವನ್ನು ಹೊಂದಿದೆ. ಹಿಂದೂ ಧರ್ಮದಲ್ಲಿ, ಗ್ರಹಣ ಸಂಭವಿಸುವ ಮೊದಲು ಸೂತಕದ ಅವಧಿಯನ್ನು ಆಚರಿಸಲಾಗುತ್ತದೆ. ಈ ಸಮಯದಲ್ಲಿ, ಎಲ್ಲಾ ರೀತಿಯ ಪೂಜೆ ಮತ್ತು ಶುಭ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ವರ್ಷದ ಎರಡನೇ ಚಂದ್ರಗ್ರಹಣ ಸೆಪ್ಟೆಂಬರ್ 7 ರಂದು ಸಂಭವಿಸಲಿದೆ. ಇದು ಸಂಪೂರ್ಣ ಚಂದ್ರಗ್ರಹಣವಾಗಲಿದೆ. ಇದು ಭಾರದಲ್ಲಿ ಗೋಚರಿಸಲಿದೆ. ಭಾರತೀಯ ಕಾಲಮಾನದ ಪ್ರಕಾರ, ಚಂದ್ರಗ್ರಹಣವು ರಾತ್ರಿ 9.58 ಕ್ಕೆ ಪ್ರಾರಂಭವಾಗಿ ಸೆಪ್ಟೆಂಬರ್ 8 ರಂದು ಬೆಳಗಿನ ಜಾವ 1.26 ರವರೆಗೆ ಮುಂದುವರಿಯಲಿದೆ. ಈ ಚಂದ್ರಗ್ರಹಣದ ಒಟ್ಟು ಅವಧಿ 3.28 ನಿಮಿಷಗಳು. ಸೆಪ್ಟೆಂಬರ್ 7 ರಂದು ರಾತ್ರಿ 11:01 ಕ್ಕೆ ಸಂಪೂರ್ಣ ಗ್ರಹಣ ಪ್ರಾರಂಭವಾಗುತ್ತದೆ. ರಾತ್ರಿ 11:42 ಕ್ಕೆ ಹುಣ್ಣಿಮೆ ಗೋಚರಿಸುವುದಿಲ್ಲ. ಸಂಪೂರ್ಣ ಗ್ರಹಣವು ಸೆಪ್ಟೆಂಬರ್ 8 ರಂದು ಬೆಳಗಿನ ಜಾವ 1.26 ಕ್ಕೆ ಕೊನೆಗೊಳ್ಳುತ್ತದೆ.

ಚಂದ್ರಗ್ರಹಣ ಪ್ರಾರಂಭವಾಗುವ 9 ಗಂಟೆಗಳ ಮೊದಲು ಸೂತಕ ಅವಧಿ ಪ್ರಾರಂಭವಾಗುತ್ತದೆ. ಇದು ಸೆಪ್ಟೆಂಬರ್ 7 ರಂದು ಮಧ್ಯಾಹ್ನ 12.19 ಕ್ಕೆ ಪ್ರಾರಂಭವಾಗಿ ಚಂದ್ರಗ್ರಹಣ ಮುಗಿದಾಗ ಕೊನೆಗೊಳ್ಳುತ್ತದೆ. ಅಂದರೆ, ಸೂತ ಅವಧಿ ಸೆಪ್ಟೆಂಬರ್ 8 ರಂದು ಬೆಳಿಗ್ಗೆ 1.26 ಕ್ಕೆ ಕೊನೆಗೊಳ್ಳುತ್ತದೆ.

ಇದನ್ನೂ ಓದಿ2025 ರ ಎರಡನೇ ಸೂರ್ಯಗ್ರಹಣ ಯಾವಾಗ? ಭಾರತದಲ್ಲಿ ಗೋಚರಿಸುತ್ತಾ?

ಭಾರತದಲ್ಲಿ ಚಂದ್ರಗ್ರಹಣ ಗೋಚರಿಸುವುದರಿಂದ,ಗ್ರಹಣ ಸೂತಕ ಅವಧಿಯು ಭಾರತದಲ್ಲಿಯೂ ಸಹ ಮಾನ್ಯವಾಗಿದೆ. ಈ ಸಮಯದಲ್ಲಿ ಮಂತ್ರಗಳನ್ನು ಪಠಿಸುವುದು ಮತ್ತು ದಾನ ಮಾಡುವುದು ಫಲಪ್ರದವಾಗುತ್ತದೆ ಎಂದು ನಂಬಲಾಗಿದೆ.

ಸೂರ್ಯ, ಭೂಮಿ ಮತ್ತು ಚಂದ್ರರು ಒಂದೇ ರೇಖೆಯಲ್ಲಿ ಬಂದಾಗ, ಭೂಮಿಯು ಸೂರ್ಯನ ಬೆಳಕನ್ನು ಚಂದ್ರನನ್ನು ತಲುಪುವುದನ್ನು ತಡೆಯುತ್ತದೆ. ಆಗ ಚಂದ್ರನು ಗೋಚರಿಸುವುದಿಲ್ಲ. ಇದನ್ನು ಚಂದ್ರಗ್ರಹಣ ಎಂದು ಕರೆಯಲಾಗುತ್ತದೆ. ಚಂದ್ರಗ್ರಹಣವು ಯಾವಾಗಲೂ ಹುಣ್ಣಿಮೆಯ ದಿನದಂದು ಸಂಭವಿಸುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು