AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shani Amavasya 2025: ಇಂದು ಶನಿ ಅಮಾವಾಸ್ಯೆ; ಸಾಡೇಸಾತಿ ಶನಿ ಇರುವವರು ತಪ್ಪದೇ ಈ ಕೆಲಸ ಮಾಡಿ

ಶನಿ ಅಮಾವಾಸ್ಯೆಯ ದಿನ ಶನಿದೇವನಿಗೆ ವಿಶೇಷ ಪೂಜೆ ಮಾಡುವುದರಿಂದ ಶನಿ ದೋಷ, ಸಾಡೇ ಸಾತಿ ದೋಷಗಳಿಂದ ಪರಿಹಾರ ಸಿಗುತ್ತದೆ. ಯಾರ ಜಾತಕದಲ್ಲಿ ಶನಿ ದುರ್ಬಲನಾಗಿದ್ದಾನೋ ಅವರಿಗೆ ಈ ದಿನವು ಮುಖ್ಯವಾಗಿದೆ. ಇಂದು ಶನಿದೇವನಿಗೆ ಸಾಸಿವೆ ಎಣ್ಣೆ, ಕಪ್ಪು ಎಳ್ಳು ಮತ್ತು ಉದ್ದಿನ ಬೇಳೆಯನ್ನು ಅರ್ಪಿಸಿ. "ಓಂ ಶಂ ಶನೈಶ್ಚರಾಯ ನಮಃ" ಎಂಬ ಮಂತ್ರವನ್ನು 108 ಬಾರಿ ಜಪಿಸಿ. ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರ, ಬಟ್ಟೆ ದಾನ ಮಾಡಿ.

Shani Amavasya 2025: ಇಂದು ಶನಿ ಅಮಾವಾಸ್ಯೆ; ಸಾಡೇಸಾತಿ ಶನಿ ಇರುವವರು ತಪ್ಪದೇ ಈ ಕೆಲಸ ಮಾಡಿ
Shani Amavasya
Follow us
ಅಕ್ಷತಾ ವರ್ಕಾಡಿ
|

Updated on: Mar 29, 2025 | 7:54 AM

ಈ ವರ್ಷದ ಶನಿ ಅಮಾವಾಸ್ಯೆ ಮಾರ್ಚ್ 29 ರಂದು ಅಂದರೆ ಇಂದು ಸಂಭವಿಸಿದೆ. ಈ ದಿನ, ಶನಿ ದೇವರು ಕುಂಭ ರಾಶಿಯಿಂದ ಮೀನ ರಾಶಿಗೆ ಪ್ರವೇಶಿಸುತ್ತಾರೆ. ಚೈತ್ರ ಮಾಸದ ಅಮಾವಾಸ್ಯೆ ಮಾರ್ಚ್ 28 ರಂದು ಸಂಜೆ 7:55 ಕ್ಕೆ ಪ್ರಾರಂಭವಾಗುತ್ತದೆ. ಈ ದಿನಾಂಕ ಮಾರ್ಚ್ 29 ರಂದು ಸಂಜೆ 4:27 ಕ್ಕೆ ಕೊನೆಗೊಳ್ಳುತ್ತದೆ. ಅಂತಹ ಉದಯ ತಿಥಿಯ ಪ್ರಕಾರ, ಶನಿ ಅಮಾವಾಸ್ಯೆ ಮಾರ್ಚ್ 29 ರಂದು ಬರುತ್ತದೆ. ಇದು ಈ ವರ್ಷದ ಮೊದಲ ಶನಿ ಅಮಾವಾಸ್ಯೆ. ವರ್ಷದ ಮೊದಲ ಸೂರ್ಯಗ್ರಹಣವೂ ಈ ದಿನ ಸಂಭವಿಸಲಿದೆ.

ಶನಿ ಅಮಾವಾಸ್ಯೆಯ ದಿನ ಶನಿದೇವನಿಗೆ ವಿಶೇಷ ಪೂಜೆ ಮಾಡುವುದರಿಂದ ಶನಿ ದೋಷ, ಸಾಡೇ ಸಾತಿ  ದೋಷಗಳಿಂದ ಪರಿಹಾರ ಸಿಗುತ್ತದೆ. ಯಾರ ಜಾತಕದಲ್ಲಿ ಶನಿ ದುರ್ಬಲನಾಗಿದ್ದಾನೋ ಅಥವಾ ಪೀಡಿತನಾಗಿದ್ದಾನೋ ಅವರಿಗೆ ಈ ದಿನವು ಮುಖ್ಯವಾಗಿದೆ.

ಇದನ್ನೂ ಓದಿ: ಜಾತಕದಲ್ಲಿ ಮಂಗಳ ದೋಷ ಇದ್ದರೆ ತಿಳಿಯುವುದು ಹೇಗೆ? ಅದಕ್ಕೆ ಪರಿಹಾರಗಳೇನು?

ಶನಿ ಅಮವಾಸ್ಯೆಯಂದು ಮಾಡಬೇಕಾದ ಪರಿಹಾರಗಳು:

  • ಶನಿದೇವನಿಗೆ ಸಾಸಿವೆ ಎಣ್ಣೆ, ಕಪ್ಪು ಎಳ್ಳು ಮತ್ತು ಉದ್ದಿನ ಬೇಳೆಯನ್ನು ಅರ್ಪಿಸಿ.
  • “ಓಂ ಶಂ ಶನೈಶ್ಚರಾಯ ನಮಃ” ಎಂಬ ಮಂತ್ರವನ್ನು 108 ಬಾರಿ ಜಪಿಸಿ.
  • ಅರಳಿ ಮರಕ್ಕೆ ನೀರು ಅರ್ಪಿಸಿ ಮತ್ತು ಸಾಸಿವೆ ಎಣ್ಣೆಯ ದೀಪವನ್ನು ಬೆಳಗಿಸಿ.
  • ಹನುಮಾನ್ ಚಾಲೀಸಾ ಪಠಿಸಿ ಮತ್ತು ಹನುಮಂತನಿಗೆ ಮಲ್ಲಿಗೆ ಎಣ್ಣೆಯನ್ನು ಅರ್ಪಿಸಿ.
  • ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರ, ಬಟ್ಟೆ ದಾನ ಮಾಡಿ.
  • ಶನಿ ಅಮಾವಾಸ್ಯೆಯಂದು ಸೂರ್ಯ ಮತ್ತು ಶನಿಯ ಮಂತ್ರಗಳನ್ನು ಪಠಿಸಿ.
  • ಓಂ ಶಂ ಶನೈಶ್ಚರಾಯ ನಮಃ ಎಂಬ ಶನಿ ಮಂತ್ರವನ್ನು ಪಠಿಸಿ.
  • ಓಂ ಘೃಣಿ: ಸೂರ್ಯಾಯ ನಮಃ ಎಂಬ ಸೂರ್ಯ ಮಂತ್ರವನ್ನು ಪಠಿಸಿ.

ಶನಿ ಅಮಾವಾಸ್ಯೆಯ ಮಹತ್ವ:

ಶನಿ ಅಮವಾಸ್ಯೆಯಂದು ಶನಿದೇವನನ್ನು ಪೂಜಿಸುವುದರಿಂದ ಆತನ ಆಶೀರ್ವಾದ ದೊರೆಯುತ್ತದೆ. ಶನಿ ದೋಷ, ಸಾಡೇಸಾತಿ  ಪರಿಣಾಮಗಳನ್ನು ಕಡಿಮೆ ಮಾಡಲು ಈ ದಿನವು ವಿಶೇಷವಾಗಿ ಮುಖ್ಯವಾಗಿದೆ. ಶನಿ ಅಮಾವಾಸ್ಯೆಯಂದು ಪೂರ್ವಜರ ಶಾಂತಿಗಾಗಿ ಪೂಜೆಯನ್ನು ಸಹ ಮಾಡಲಾಗುತ್ತದೆ. ಶನಿದೇವನನ್ನು ಕರ್ಮಗಳ ನ್ಯಾಯಾಧೀಶ ಎಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಈ ದಿನದಂದು ಒಳ್ಳೆಯ ಕಾರ್ಯಗಳನ್ನು ಮಾಡುವುದು ಶುಭ ಫಲಿತಾಂಶಗಳನ್ನು ತರುತ್ತದೆ. ಯಾರದ್ದಾದರೂ ಜಾತಕದಲ್ಲಿ ಶನಿಯು ಅಶುಭ ಸ್ಥಾನದಲ್ಲಿದ್ದರೆ, ಈ ದಿನದಂದು ಪೂಜೆ ಮಾಡುವುದು ತುಂಬಾ ಒಳ್ಳೆಯದು.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ