AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shani Dev: ಸದಾಕಾಲ ಶನಿ ದೇವನ ಆಶೀರ್ವಾದ ಇರುವುದು ಈ 5 ರಾಶಿಯವರಿಗೆ

 ಜೊತೆಗೆ ಶನಿ ದೇವನು ಜನರಿಗೆ ಅವರ ಕಾರ್ಯಗಳಿಗೆ ಅನುಗುಣವಾಗಿ ಫಲಗಳನ್ನು ನೀಡುತ್ತಾನೆ. ಹಾಗಾಗಿ ಶನಿ ದೇವರನ್ನು ಎಲ್ಲರೂ ಭಕ್ತಿ ಭಾವದಿಂದ ಪೂಜಿಸುತ್ತಾರೆ. ಆದರೆ ಶನಿ ದೇವನಿಗೆ ಕೆಲವು ರಾಶಿಗಳು ಎಂದರೆ ಬಲು ಪ್ರೀತಿ. ಆ ರಾಶಿಗಳ ಮೇಲೆ ಅವನ ಆಶೀರ್ವಾದ ಸದಾಕಾಲ ಇರುತ್ತದೆ ಎನ್ನುವ ನಂಬಿಕೆ ಇದೆ ಹಾಗಾದರೆ ಶನಿ ದೇವರ ನೆಚ್ಚಿನ ರಾಶಿಗಳು ಯಾವವು? ಇಲ್ಲಿದೆ ಮಾಹಿತಿ

Shani Dev: ಸದಾಕಾಲ ಶನಿ ದೇವನ ಆಶೀರ್ವಾದ ಇರುವುದು ಈ 5 ರಾಶಿಯವರಿಗೆ
ಶನಿ ದೇವಾ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 25, 2024 | 4:27 PM

Share

ಶನಿ ದೇವನ ಕೃಪೆ ಇದ್ದರೆ ಎಲ್ಲಾ ಸಂಕಷ್ಟಗಳು ದೂರವಾಗುತ್ತದೆ. ಒಂದೊಮ್ಮೆ ಇಲ್ಲವಾದಲ್ಲಿ ಬದುಕಿನಲ್ಲಿ ನಾನಾ ರೀತಿಯ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಜೊತೆಗೆ ಶನಿ ದೇವನು ಜನರಿಗೆ ಅವರ ಕಾರ್ಯಗಳಿಗೆ ಅನುಗುಣವಾಗಿ ಫಲಗಳನ್ನು ನೀಡುತ್ತಾನೆ. ಹಾಗಾಗಿ ಶನಿ ದೇವರನ್ನು ಎಲ್ಲರೂ ಭಕ್ತಿ ಭಾವದಿಂದ ಪೂಜಿಸುತ್ತಾರೆ. ಆದರೆ ಶನಿ ದೇವನಿಗೆ ಕೆಲವು ರಾಶಿಗಳು ಎಂದರೆ ಬಲು ಪ್ರೀತಿ. ಆ ರಾಶಿಗಳ ಮೇಲೆ ಅವನ ಆಶೀರ್ವಾದ ಸದಾಕಾಲ ಇರುತ್ತದೆ ಎನ್ನುವ ನಂಬಿಕೆ ಇದೆ ಹಾಗಾದರೆ ಶನಿ ದೇವರ ನೆಚ್ಚಿನ ರಾಶಿಗಳು ಯಾವವು? ಇಲ್ಲಿದೆ ಮಾಹಿತಿ.

ವೃಷಭ ರಾಶಿ

ಶುಕ್ರನು ವೃಷಭ ರಾಶಿಯ ಅಧಿಪತಿ. ಶುಕ್ರ ಮತ್ತು ಶನಿಯ ನಡುವಿನ ಸಂಬಂಧವು ಉತ್ತಮವಾಗಿದೆ. ಹಾಗಾಗಿ ವೃಷಭ ರಾಶಿಯವರ ಮೇಲೆ ಶನಿ ದೇವನ ಆಶೀರ್ವಾದ ಸದಾಕಾಲ ಇರುತ್ತದೆ. ಈ ರಾಶಿಯವರು ರಾಜಕೀಯದಲ್ಲಿ ಬಹು ಬೇಗನೆ ಯಶಸ್ಸನ್ನು ಪಡೆಯುತ್ತಾರೆ.

ತುಲಾ ರಾಶಿ

ಶನಿ ದೇವರ ನೆಚ್ಚಿನ ರಾಶಿಚಕ್ರದಲ್ಲಿ ತುಲಾ ರಾಶಿಯು ಒಂದಾಗಿದೆ. ಶನಿ ದೇವನ ಆಶೀರ್ವಾದ ಈ ರಾಶಿಯವರ ಮೇಲೆ ಯಾವಾಗಲೂ ಇರುತ್ತದೆ. ಯಾವುದೇ ಕಷ್ಟ ಬಂದರೂ ಕೂಡ ಶನಿ ದೇವ ಅವರನ್ನು ಕೈ ಬಿಡದೇ ಸಹಾಯ ಮಾಡುತ್ತಾನೆ.

ಮಕರ ರಾಶಿ

ಈ ರಾಶಿಯ ಅಧಿಪತಿ ಸ್ವತಃ ಶನಿದೇವ. ಈ ರಾಶಿಯ ಜನರು ತುಂಬಾ ಶ್ರಮಜೀವಿಗಳು ಮತ್ತು ಬಲಶಾಲಿಗಳಾಗಿರುತ್ತಾರೆ, ಅವರು ಮಾಡಲು ಹೊರಟ ಕೆಲಸವನ್ನು ಎಂದಿಗೂ ಅರ್ಧಕ್ಕೆ ಬಿಡುವುದಿಲ್ಲ ಅದನ್ನು ಪೂರ್ಣಗೊಳಿಸುತ್ತಾರೆ. ಅದಕ್ಕಾಗಿಯೇ ಶನಿ ದೇವ ಅಂತವರ ಕೈ ಎಂದಿಗೂ ಬಿಡುವುದಿಲ್ಲ.

ಕುಂಭ ರಾಶಿ

ಈ ರಾಶಿಯ ಅಧಿಪತಿ ಕೂಡ ಶನಿ ದೇವರು. ಕುಂಭ ರಾಶಿಯವರ ಮೇಲೆ ಶನಿ ದೇವರ ವಿಶೇಷ ಆಶೀರ್ವಾದ ಇದ್ದೇ ಇರುತ್ತದೆ. ಈ ರಾಶಿಯಲ್ಲಿ ಜನಿಸಿದವರು ಕಡಿಮೆ ಕೆಲಸ ಮಾಡಿ ಹೆಚ್ಚಿನ ಲಾಭ ಪಡೆಯುತ್ತಾರೆ.

ಇದನ್ನೂ ಓದಿ: 400 ವರ್ಷಗಳ ಹಿಂದೆ 2 ಅಡಿ ಇದ್ದ ಹನುಮಂತನ ವಿಗ್ರಹ ಈಗ 12 ಅಡಿ ಏರಿದೆ, ಏನಿದರ ರಹಸ್ಯ?

ಮೀನ ರಾಶಿ

ಈ ರಾಶಿಯ ಅಧಿಪತಿ ಗುರು. ಶನಿ ಮತ್ತು ಗುರು ದೇವನ ನಡುವೆ ಸ್ನೇಹ ಭಾವವಿದೆ. ಹಾಗಾಗಿ ಶನಿ ದೇವರು ಯಾವಾಗಲೂ ಈ ರಾಶಿಯವರಿಗೆ ಹೆಚ್ಚಿನ ಕರುಣೆ ತೋರಿಸುತ್ತಾನೆ. ಅದಕ್ಕಾಗಿಯೇ ಈ ರಾಶಿಯವರಿಗೆ ಯಾವಾಗಲೂ ಶನಿ ದೇವನ ಅನುಗ್ರಹವಿರುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ