AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shani dosh: ಜಾತಕದಲ್ಲಿ ಶನಿ ದೋಷ ನಿವಾರಣೆಗೆ ಈ ಕೆಲಸ ಮಾಡಿ

ಶನಿಯ ವಕ್ರ ದೃಷ್ಟಿ ಬಿದ್ದಾಗ ಅನೇಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಜಾತಕದಲ್ಲಿ ಶನಿ ದೋಷವಿದ್ದಾಗ ಅದನ್ನು ಕಡಿಮೆ ಮಾಡಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವು ಕ್ರಮಗಳನ್ನು ಉಲ್ಲೇಖಿಸಲಾಗಿದೆ. ಇದನ್ನು ಅನುಸರಿಸುವುದರಿಂದ ಶನಿ ಮಹಾರಾಜ ಸಂತೋಷಪಡುತ್ತಾನೆ. ಹಾಗಾದರೆ ಶನಿ ದೋಷ ನಿವಾರಣೆಗೆ ಏನು ಮಾಡಬೇಕು? ಇಲ್ಲಿದೆ ಮಾಹಿತಿ.

Shani dosh: ಜಾತಕದಲ್ಲಿ ಶನಿ ದೋಷ ನಿವಾರಣೆಗೆ ಈ ಕೆಲಸ ಮಾಡಿ
ಶನಿ ದೇವಾ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 19, 2024 | 9:53 AM

Share

ಒಂಬತ್ತು ಗ್ರಹಗಳಲ್ಲಿ, ಶನಿಯ ವಕ್ರ ದೃಷ್ಟಿ ಬಿದ್ದಾಗ ಅನೇಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಜಾತಕದಲ್ಲಿ ಶನಿ ದೋಷವಿದ್ದಾಗ ಅದನ್ನು ಕಡಿಮೆ ಮಾಡಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವು ಕ್ರಮಗಳನ್ನು ಉಲ್ಲೇಖಿಸಲಾಗಿದೆ. ಇದನ್ನು ಅನುಸರಿಸುವುದರಿಂದ ಶನಿ ಮಹಾರಾಜ ಸಂತೋಷಪಡುತ್ತಾನೆ. ಹಾಗಾದರೆ ಶನಿ ದೋಷ ನಿವಾರಣೆಗೆ ಏನು ಮಾಡಬೇಕು? ಇಲ್ಲಿದೆ ಮಾಹಿತಿ.

-ಶನಿ ದೇವನಿಗೆ ಕಪ್ಪು ಬಣ್ಣ ತುಂಬಾ ಇಷ್ಟ. ಹಾಗಾಗಿ ಅವನನ್ನು ಸಂತೋಷ ಪಡಿಸಲು ಜೊತೆಗೆ ದೇವರ ಆಶೀರ್ವಾದ ಪಡೆಯಲು, ಶನಿವಾರ ಕಪ್ಪು ಪ್ರಾಣಿಗಳಿಗೆ ಅಂದರೆ ಕಪ್ಪು ನಾಯಿ ಅಥವಾ ಕಾಗೆ ಮುಂತಾದ ಪಕ್ಷಿಗಳಿಗೆ ಆಹಾರ ನೀಡಿ. ಕಪ್ಪು ವಸ್ತುಗಳನ್ನು ದಾನ ಮಾಡಿ. ಈ ರೀತಿ ಮಾಡುವುದರಿಂದ ನೀವು ಶನಿ ದೇವರ ಆಶೀರ್ವಾದ ಪಡೆಯಬಹುದು.

-ಶನಿವಾರ ಅರಳಿ ಮರಕ್ಕೆ ಸಕ್ಕರೆ ಮತ್ತು ಕಪ್ಪು ಎಳ್ಳು ಬೆರೆಸಿದ ನೀರನ್ನು ಎಣ್ಣೆಯ ಜೊತೆಗೆ ಸೇರಿಸಿ ಬಳಿಕ ಅರ್ಪಿಸಿ. ಇದರ ನಂತರ, ಮರವನ್ನು 3 ಬಾರಿ ಪ್ರದಕ್ಷಿಣೆ ಹಾಕಿ. ಜಾತಕದಲ್ಲಿ ಶನಿ ದೋಷ ಇದ್ದಲ್ಲಿ ಪರಿಹಾರಗೊಳ್ಳುತ್ತದೆ.

-ಶನಿವಾರದ ದಿನ ಸಾಸಿವೆ ಎಣ್ಣೆಯಲ್ಲಿ ಬೇಯಿಸಿದ ರೊಟ್ಟಿಯನ್ನು ಕಪ್ಪು ನಾಯಿಗೆ ತಿನ್ನಿಸಿ. ಈ ರೀತಿ ಮಾಡುವುದರಿಂದ ಜಾತಕದಲ್ಲಿ ಯಾವುದೇ ರೀತಿಯ ತೊಂದರೆಗಳಿದ್ದರೂ ಪರಿಹಾರವಾಗುತ್ತದೆ. ಜೊತೆಗೆ ಕಪ್ಪು ನಾಯಿಗೆ ಯಾವುದೇ ರೀತಿಯ ನೋವು ಮಾಡಬೇಡಿ.

ಇದನ್ನೂ ಓದಿ: ಕಾಲಿನ ಹೆಬ್ಬೆರಳಿಗಿಂತ ಪಕ್ಕದ ಬೆರಳು ಉದ್ದ ಇದ್ದರೆ ನಿಮ್ಮ ಭವಿಷ್ಯ ಹೇಗಿರುತ್ತೆ ನೋಡಿ

-ಶನಿವಾರದಂದು ಶನಿದೇವನ ಜೊತೆಗೆ ಹನುಮಂತನನ್ನು ಪೂಜಿಸಿ, ಇದರಿಂದ ಶನಿದೇವನ ಆಶೀರ್ವಾದ ಸಿಗುತ್ತದೆ. ಸಾಧ್ಯವಾದರೆ ಶನಿ ದೋಷ ನಿವಾರಣೆಗೆ ಸುಂದರಕಾಂಡ ಪಾರಾಯಣ ಮಾಡಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ