AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shanti: ಶಾಂತಿ ಶಾಂತಿ ಶಾಂತಿ ಎಂದು 3 ಸಲ ಹೇಳುವುದೇಕೆ? ಶಾಂತಿಃ ಎಂದು ಒಂದೇ ಸಲ ಹೇಳಿದರೆ ಸಾಲದೆ? ಏನಿದರ ಅರ್ಥ?

ಈ ಮೂರೂ ಶಾಂತಿಗಳೂ ಬೇರೆ ಬೇರೆ ರೀತಿಯ ಶಾಂತಿಗಳು. ಹಾಗೆಯೇ ಮನುಷ್ಯನಿಗೆ ಸಮಸ್ಯೆಗಳು ಮೂರು ಮೂಲದಿಂದ ಬರುತ್ತವೆ ಎನ್ನುವುದು ಹಿರಿಯರ ಅನಿಸಿಕೆ. ಈ ಮೂಲಗಳನ್ನು ಆದಿದೈವಿಕ, ಆದಿಭೌತಿಕ ಮತ್ತು ಆಧ್ಯಾತ್ಮಿಕ ಎಂದು ಹೇಳುವರು. ಈ ಮೂರು ಬಗೆಯ ತೊಂದರೆಗಳಿಂದ ನಮಗೆ ಶಾಂತಿ ಸಿಗಲಿ ಎಂಬ ಅರ್ಥದಲ್ಲಿ ಮೂರು ಬಾರಿ ಶಾಂತಿ ಎಂದು ಹೇಳಲಾಗುತ್ತದೆ.

Shanti:  ಶಾಂತಿ  ಶಾಂತಿ  ಶಾಂತಿ ಎಂದು 3 ಸಲ ಹೇಳುವುದೇಕೆ? ಶಾಂತಿಃ ಎಂದು ಒಂದೇ ಸಲ ಹೇಳಿದರೆ ಸಾಲದೆ?  ಏನಿದರ ಅರ್ಥ?
ಶಾಂತಿಃ ಶಾಂತಿಃ ಶಾಂತಿಃ ಎಂದು 3 ಸಲ ಹೇಳುವುದೇಕೆ? ಶಾಂತಿ ಎಂದು ಒಂದೇ ಸಲ ಹೇಳಿದರೆ ಸಾಲದೆ? ಏನಿದರ ಅರ್ಥ?
TV9 Web
| Updated By: ಸಾಧು ಶ್ರೀನಾಥ್​|

Updated on: Feb 17, 2022 | 9:48 AM

Share

ನಾವು ಆಚರಿಸುವ ಪ್ರತೀ ಪದ್ಧತಿಯೂ, ಪಠಿಸುವ ಪ್ರತೀ ಮಂತ್ರಕ್ಕೂ ತನ್ನದೇ ಆದ ಅರ್ಥಗಳಿವೆ. ಮನಸ್ಸಿನ ನೆಮ್ಮದಿಗೆ, ಮನೆಯಲ್ಲಿ ಶಾಂತಿ ನೆಲೆಸಲು ಜತೆಗೆ ನಮ್ಮ ಆಧ್ಯಾತ್ಮಿಕ ಬೆಳವಣಿಗೆಗೆ ಸಹಕಾರಿಯಾಗುವಂತೆ ಕೆಲವು ಸಂಪ್ರದಾಯಗಳನ್ನು ಹಿಂದಿನವರು ಆಚರಣೆಗೆ ತಂದಿದ್ದಾರೆ (prayer). ಇದರಲ್ಲಿ ಶಾಂತಿ, ಶಾಂತಿ, ಶಾಂತಿ ಎಂದು (Om Shanti, Om Shanti, Om Shanti) ಪಠಿಸುವುದೂ ಒಂದು. ಏನಿದರ ಅರ್ಥ?

ವಿಜ್ಞಾನವು ಆತ್ಮದ ಅಸ್ತಿತ್ವವನ್ನು ಒಪ್ಪಿಲ್ಲ ಎನ್ನುವುದು ಬೇರೆಯದೇ ವಿಚಾರವಾದರೂ ಇದು ನಮ್ಮ ಆತ್ಮ ಮತ್ತು ದೇಹಕ್ಕೆ ಸಂಬಂಧಿಸಿದ ವಿಚಾರ ಇಲ್ಲಿದೆ. ನಮ್ಮ ಆತ್ಮದ ಪೂರ್ವಜನ್ಮ ದುಷ್ಕೃತಗಳಿಗೆ ಅನುಗುಣವಾಗಿ ಕಷ್ಟಗಳು ಬರಬಹುದು. ಈ ಮೂರು ರೀತಿಯ ಕಷ್ಟ ಪರಂಪರೆಗಳಿಂದ ನಮ್ಮನ್ನು ರಕ್ಷಿಸು ಎನ್ನುವ ಆಶಯದಲ್ಲಿ ಓಂ ಶಾಂತಿಃ ಎಂದು ಮೂರು ಸಲ ಹೇಳುವುದುಂಟು (Upanishads).

ಸಾಮಾನ್ಯವಾಗಿ ಎಲ್ಲಾ ಮಂತ್ರಗಳ ಕೊನೆಯಲ್ಲಿ ಓಂ ಶಾಂತಿಃ ಶಾಂತಿಃ ಶಾಂತಿಃ ಎಂದು ಮೂರು ಸಲ ಹೇಳುತ್ತಾರೆ. ಶಾಂತಿ ಅಂದರೇನು? ಎಲ್ಲವೂ ನಮ್ಮ ಇಚ್ಛೆಯಂತೆ ಕೊನೆಗೊಳ್ಳುವುದು. ದೇವರನ್ನು ಸ್ತುತಿಸುವ ಮಂತ್ರದ ಕೊನೆಯಲ್ಲಿ ನಮಗೆ ಎಲ್ಲಾ ಸಮಸ್ಯೆ, ಅಡ್ಡಿ ಆತಂಕಗಳಿಂದಲೂ ಶಾಂತಿ ಸಿಗಲಿ ಎಂಬ ಆಶಯದಿಂದ ಓಂ ಶಾಂತಿಃ ಶಾಂತಿಃ ಶಾಂತಿಃ ಎಂದು ಹೇಳಲಾಗುತ್ತದೆ. ಇದನ್ನು ಒಂದೇ ಸಲ ಹೇಳಿದರೆ ಸಾಲದೆ? ಮೂರು ಸಲ ಏಕೆ?

ಈ ಮೂರೂ ಶಾಂತಿಗಳೂ ಬೇರೆ ಬೇರೆ ರೀತಿಯ ಶಾಂತಿಗಳು. ಮೊದಲನೆಯ ಶಾಂತಿ – ಮಾನಸಿಕ ಹಾಗೂ ದೈಹಿಕ ಬಾಧೆಗಳಿಂದ ಶಾಂತಿ. ಎರಡನೆಯ ಶಾಂತಿ – ಶತ್ರುಗಳು, ಗ್ರಹ, ನಕ್ಷತ್ರ ಇತ್ಯಾದಿಗಳ ಉಪದ್ರವದಿಂದ ಶಾಂತಿ. ಮೂರನೆಯ ಶಾಂತಿ – ಬದುಕಿನಲ್ಲಿ ಎದುರಾಗುವ ಯಾವುದೇ ರೀತಿಯ ವೈಪರೀತ್ಯಗಳು ಅಥವಾ ನಾವು ಊಹಿಸಲಾಗದ ರೀತಿಯಲ್ಲಿ ಬಂದೊದಗುವ ಎಲ್ಲಾ ಸಮಸ್ಯೆಗಳಿಂದ ಶಾಂತಿ. ಈ ಮೂರೂ ಬಗೆಯ ತೊಂದರೆಗಳಿಂದ ನಮಗೆ ಶಾಂತಿ ಸಿಗಲಿ ಎಂಬ ಅರ್ಥದಲ್ಲಿ ಮೂರು ಬಾರಿ ಶಾಂತಿ ಎಂದು ಹೇಳಲಾಗುತ್ತದೆ.

ಮನುಷ್ಯನಿಗೆ ಸಮಸ್ಯೆಗಳು ಮೂರು ಮೂಲದಿಂದ ಬರುತ್ತವೆ ಎನ್ನುವುದು ಹಿರಿಯರ ಅನಿಸಿಕೆ. ಈ ಮೂಲಗಳನ್ನು ಆದಿದೈವಿಕ, ಆದಿಭೌತಿಕ ಮತ್ತು ಆಧ್ಯಾತ್ಮಿಕ ಎಂದು ಹೇಳುವರು.

ಆದಿದೈವಿಕ: ಮನುಷ್ಯರ ನಿಯಂತ್ರಣ ಅಸಾಧ್ಯವಾದ ಪ್ರಾಕೃತಿಕ ಅಡಚಣೆಗಳು. ಉದಾಹರಣೆಗೆ ಪರೀಕ್ಷೆಗೆ ಹೊರಟಾಗ ಅಕಾಲ ಮಳೆ ಸುರಿದು ಕಾಲಕ್ಕೆ ಸರಿಯಾಗಿ ಶಾಲೆಯನ್ನು ತಲುಪಲಾಗದ ಸ್ಥಿತಿ.

ಆದಿಭೌತಿಕ: ಅನಿರೀಕ್ಷಿತ ಶಾರೀರಿಕ, ಇಲ್ಲವೇ ಮಾನಸಿಕ ಸಮಸ್ಯೆಗಳು ಬಂದು ವಿಘ್ನವಾಗಬಹುದು. ಅಪಘಾತಗಳಾಗಬಹುದು. ಹೊಡೆದಾಟ, ಜಗಳಗಳಾಗಬಹುದು. ಕಳ್ಳತನವಾಗಬಹುದು.

ಅಧ್ಯಾತ್ಮಿಕ: ಇದು ನಮ್ಮ ಆತ್ಮ ಮತ್ತು ದೇಹಕ್ಕೆ ಸಂಬಂಧಿಸಿದ್ದು (ವಿಜ್ಞಾನವು ಆತ್ಮದ ಅಸ್ತಿತ್ವವನ್ನು ಒಪ್ಪಿಲ್ಲ ಎನ್ನುವುದು ಬೇರೆಯ ಹಿಚಾರ). ನಮ್ಮ ಆತ್ಮದ ಪೂರ್ವಜನ್ಮ ದುಷ್ಕೃತಗಳಿಗೆ ಅನುಗುಣವಾಗಿ ಕಷ್ಟಗಳು ಬರಬಹುದು.

ಈ ಮೂರು ರೀತಿಯ ಕಷ್ಟ ಪರಂಪರೆಗಳಿಂದ ನಮ್ಮನ್ನು ರಕ್ಷಿಸು ಎನ್ನುವ ಆಶಯದಲ್ಲಿ ಓಂ ಶಾಂತಿಃ ಎಂದು ಮೂರು ಸಲ ಹೇಳುವುದುಂಟು.

ಮೂರು ಬಾರಿ ಓಂ ಶಾಂತಿ ಅಂದರೆ… ಮೊದಲ ಬಾರಿಗೆ, ದೊಡ್ಡ ಧ್ವನಿಯಲ್ಲಿ ದೈವಿಕ ಶಕ್ತಿಯನ್ನು ಸಂಬೋಧಿಸುವುದು ಎಂದರ್ಥ. ಎರಡನೆಯ ಬಾರಿ, ನಿಮ್ಮ ಸುತ್ತಲಿನ ಪರಿಸರವನ್ನು ಸಂಬೋಧಿಸುವುದು ಎಂದರ್ಥ. ಮೂರನೇ ಬಾರಿ, ಅತ್ಯಂತ ಕಡಿಮೆ ಧ್ವನಿಯಲ್ಲಿ ಅದು ತನ್ನನ್ನು ತಾನೇ ಸಂಬೋಧಿಸುತ್ತದೆ. ಈ ರೀತಿಯಾಗಿ ಪೂಜೆಯನ್ನು ಉತ್ತಮವಾಗಿ ಮಾಡಲಾಗುತ್ತದೆ ಎಂದು ನಂಬಲಾಗಿದೆ. ಇದರೊಂದಿಗೆ ಎಲ್ಲಾ ದೇವಾನುದೇವತೆಗಳ ಕೃಪೆಯೂ ನಮ್ಮ ಮೇಲಿರುತ್ತದೆ. (ಬರಹ- ಮಂಜುನಾಥ ಹಾರೋಗೊಪ್ಪ)

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!